ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಬಹತೇಕ ಖಚಿತವಾಗಿರುವುದರಿಂದಲೇ ಅವರು ನೀತಿ ಆಯೋಗದ ಸಭೆಯಿಂದ ಹಿಡಿದು ಯಾವುದೇ ಕಾರ್ಯಕ್ರಮಗಳಲ್ಲೂ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿಲ್ಲ. ವೀರಶೈವ ಲಿಂಗಾಯತ ಸಮುದಾಯದ ಬಿ.ಎಸ್.ಯಡಿಯೂರಪ್ಪ ಅವರೇ ಬಿಜೆಪಿ ಕಟ್ಟಿ ಬೆಳೆಸಿದವರು. ಅವರನ್ನೇ ಮೂಲಗುಂಪು ಮಾಡಲಾಗಿದೆ. ಈಗ ಅದೇ ಸಮುದಾಯದ ಬಸವರಾಜ ಬೊಮ್ಮಾಯಿ ಅವರನ್ನೂ ಬದಲಾವಣೆ ಮಾಡಲಾಗುತ್ತಿದೆ. ಇನ್ನಾದರೂ ವೀರಶೈವ, ಲಿಂಗಾಯತ ಸಮುದಾಯದವರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.