<p><strong>ಸೋಮವಾರಪೇಟೆ</strong>: ‘ಮಡಿಕೇರಿ ಕ್ಷೇತ್ರದಲ್ಲಿ ಫ್ಲೆಕ್ಸ್ ರಾಜಕೀಯ ಬಿಟ್ಟು, ಅಭಿವೃದ್ಧಿಗೆ ಆದ್ಯತೆ ನೀಡಿ. ₹1800 ಕೋಟಿ ಅನುದಾನ ನೀಡಲಾಗಿದೆ ಎನ್ನುವ ಕಾಂಗ್ರೆಸಿಗರು ಈ ಬಗ್ಗೆ ಶ್ವೇತಪತ್ರ ಹೊರಡಿಸಿ. ರೈತರಿಗೆ ಮುಳುವಾಗುತ್ತಿರುವ ಸಿ ಮತ್ತು ಡಿ ಜಾಗ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಿರಿ. ಕೇಂದ್ರ ಸರ್ಕಾರದ ಅನುದಾನವನ್ನು ತಮ್ಮದೆಂದು ಬಿಂಬಿಸಿಸುವ ಪ್ರಯತ್ನ ಕೈಬಿಡಿ’ ಎಂದು ಮಂಡಲ ಬಿಜೆಪಿ ಒತ್ತಾಯಿಸಿದೆ.</p>.<p>ಸುದ್ದಿಗೋಷ್ಠಿಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್ ಗೌಡ ಮಾತನಾಡಿ, ‘ಫ್ಲೆಕ್ಸ್ ವಿಚಾರದ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಸತೀಶ್ , ಮಂತರ್ ಗೌಡ ಅವರ ಗಮನಕ್ಕೆ ಬಾರದೇ ಅಭಿಮಾನಿಗಳು ಫ್ಲೆಕ್ಸ್ ಅಳವಡಿಸಿರಬಹುದು ಎಂದು ನೀಡಿರುವ ಪ್ರತಿಕ್ರಿಯೆ ಹಾಸ್ಯಾಸ್ಪದ. ಶಾಸಕರು ರಸ್ತೆಯಲ್ಲಿ ಸಂಚರಿಸುವಾಗ ಗಮನಿಸಿಲ್ಲವೇ? ಅಭಿಮಾನಿಗಳಿಗೆ ಹೇಳಿ ತೆಗೆಸಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು. ಕ್ಷೇತ್ರದಲ್ಲಿ ಅಭಿವೃದ್ಧಿಯಂತೂ ಆಗುತ್ತಿಲ್ಲ; ಕನಿಷ್ಠ ಪಕ್ಷ ಸ್ವಚ್ಛತೆಯನ್ನಾದರೂ ಕಾಪಾಡಿಕೊಳ್ಳಲಿ. ಫ್ಲೆಕ್ಸ್ ಹಾಕುವುದು ತಪ್ಪಲ್ಲ. ಆದರೆ ಹಲವು ದಿನವಾದರೂ ತೆರವುಗೊಳಿಸಿಲ್ಲ. ಶಾಸಕರು ಬಂದ ಮೇಲೆ ಹೆಚ್ಚಾಗಿದೆ ’ ಎಂದು ಟೀಕಿಸಿದರು.</p>.<p>‘ ಕುಶಾಲನಗರ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಆಡಳಿತದಲ್ಲಿದೆ. ಗಣಪತಿ ದೇವಾಲಯ ರಥೋತ್ಸವ ಇದ್ದರೂ ಸುತ್ತಲೂ ಮಂತರ್ ಗೌಡ ಜನ್ಮದಿನದ ಪೋಸ್ಟರ್ ಹಾಕಿದ್ದು, ತೆರವುಗೊಳಿಸಿಲ್ಲ. ಇದೆಂಥಾ ಸಂಸ್ಕೃತಿ’ ಎಂದು ಪ್ರಶ್ನಿಸಿದರು.<br /> ಕ್ಷೇತ್ರದ ಅಭಿವೃದ್ಧಿಗೆ 1800 ಕೋಟಿ ಅನುದಾನವನ್ನು ಶಾಸಕರು ತಂದಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್ ಶ್ವೇತ ಪತ್ರ ಹೊರಡಿಸಲಿ. ಎನ್ಡಿಆರ್ಎಫ್, ಕೇಂದ್ರ ಸರ್ಕಾರದ ಯೋಜನೆಗಳಿಗೆ ಶಾಸಕರು ಭೂಮಿಪೂಜೆ ನಡೆಸುತ್ತಿದ್ದಾರೆ. ₹ 900 ಕೋಟಿ ಅನುದಾನದಲ್ಲಿ ಯಾವ ಕೆಲಸ ಆಗಿದೆ? ಉಳಿದ ₹ 900 ಕೋಟಿ ಅನುದಾನದ ಕ್ರಿಯಾಯೋಜನೆ ಯಾವುದು? ಎಂಬ ಬಗ್ಗೆಯೂ ತಿಳಿಸಲಿ. ಅನುದಾನ ಸಾರ್ವಜನಿಕ ಉಪಯೋಗಕ್ಕೆ ಬಳಕೆಯಾಗುತ್ತಿದೆಯೇ ಎಂಬುದೂ ಬಹಿರಂಗವಾಗಲಿ ಎಂದು ಸವಾಲು ಹಾಕಿದರು.</p>.<p>ಬಿಜೆಪಿ ಸರ್ಕಾರ ಇದ್ದಾಗ ಸಿ ಮತ್ತು ಡಿ ಜಾಗದಲ್ಲಿ ಕೃಷಿ ಮಾಡಿ , ಮನೆ ಕಟ್ಟಿಕೊಂಡಿರುವ ಮಂದಿಗೆ ನೋಟಿಸ್ ನೀಡಿಲ್ಲ. ಶಾಸಕರಾಗಿದ್ದ ಅಪ್ಪಚ್ಚು ರಂಜನ್ ಹಕ್ಕುಪತ್ರ ನೀಡಿದ್ದರು. ಬಿಜೆಪಿ ಶಾಸಕ 25 ವರ್ಷ ಇದ್ದ ಸಂದರ್ಭ 5 ಸಾವಿರಕ್ಕೂ ಹೆಚ್ಚು ಮಂದಿಗೆ ಹಕ್ಕುಪತ್ರ ನೀಡಲಾಗಿತ್ತು. ಕಾಂಗ್ರೆಸ್ನವರೂ ಇದರ ಫಲಾನುಭವಿಯಾಗಿದ್ದಾರೆ ಎಂದು ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಹೇಳಿದರು.<br /><br /> ಪ್ರಧಾನ ಕಾರ್ಯದರ್ಶಿಳದ ಮೋಕ್ಷಿಕ್ ರಾಜ್, ದರ್ಶನ್ ಜೋಯಪ್ಪ, ಎಸ್.ಆರ್. ಸೋಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ‘ಮಡಿಕೇರಿ ಕ್ಷೇತ್ರದಲ್ಲಿ ಫ್ಲೆಕ್ಸ್ ರಾಜಕೀಯ ಬಿಟ್ಟು, ಅಭಿವೃದ್ಧಿಗೆ ಆದ್ಯತೆ ನೀಡಿ. ₹1800 ಕೋಟಿ ಅನುದಾನ ನೀಡಲಾಗಿದೆ ಎನ್ನುವ ಕಾಂಗ್ರೆಸಿಗರು ಈ ಬಗ್ಗೆ ಶ್ವೇತಪತ್ರ ಹೊರಡಿಸಿ. ರೈತರಿಗೆ ಮುಳುವಾಗುತ್ತಿರುವ ಸಿ ಮತ್ತು ಡಿ ಜಾಗ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಿರಿ. ಕೇಂದ್ರ ಸರ್ಕಾರದ ಅನುದಾನವನ್ನು ತಮ್ಮದೆಂದು ಬಿಂಬಿಸಿಸುವ ಪ್ರಯತ್ನ ಕೈಬಿಡಿ’ ಎಂದು ಮಂಡಲ ಬಿಜೆಪಿ ಒತ್ತಾಯಿಸಿದೆ.</p>.<p>ಸುದ್ದಿಗೋಷ್ಠಿಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್ ಗೌಡ ಮಾತನಾಡಿ, ‘ಫ್ಲೆಕ್ಸ್ ವಿಚಾರದ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಸತೀಶ್ , ಮಂತರ್ ಗೌಡ ಅವರ ಗಮನಕ್ಕೆ ಬಾರದೇ ಅಭಿಮಾನಿಗಳು ಫ್ಲೆಕ್ಸ್ ಅಳವಡಿಸಿರಬಹುದು ಎಂದು ನೀಡಿರುವ ಪ್ರತಿಕ್ರಿಯೆ ಹಾಸ್ಯಾಸ್ಪದ. ಶಾಸಕರು ರಸ್ತೆಯಲ್ಲಿ ಸಂಚರಿಸುವಾಗ ಗಮನಿಸಿಲ್ಲವೇ? ಅಭಿಮಾನಿಗಳಿಗೆ ಹೇಳಿ ತೆಗೆಸಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು. ಕ್ಷೇತ್ರದಲ್ಲಿ ಅಭಿವೃದ್ಧಿಯಂತೂ ಆಗುತ್ತಿಲ್ಲ; ಕನಿಷ್ಠ ಪಕ್ಷ ಸ್ವಚ್ಛತೆಯನ್ನಾದರೂ ಕಾಪಾಡಿಕೊಳ್ಳಲಿ. ಫ್ಲೆಕ್ಸ್ ಹಾಕುವುದು ತಪ್ಪಲ್ಲ. ಆದರೆ ಹಲವು ದಿನವಾದರೂ ತೆರವುಗೊಳಿಸಿಲ್ಲ. ಶಾಸಕರು ಬಂದ ಮೇಲೆ ಹೆಚ್ಚಾಗಿದೆ ’ ಎಂದು ಟೀಕಿಸಿದರು.</p>.<p>‘ ಕುಶಾಲನಗರ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಆಡಳಿತದಲ್ಲಿದೆ. ಗಣಪತಿ ದೇವಾಲಯ ರಥೋತ್ಸವ ಇದ್ದರೂ ಸುತ್ತಲೂ ಮಂತರ್ ಗೌಡ ಜನ್ಮದಿನದ ಪೋಸ್ಟರ್ ಹಾಕಿದ್ದು, ತೆರವುಗೊಳಿಸಿಲ್ಲ. ಇದೆಂಥಾ ಸಂಸ್ಕೃತಿ’ ಎಂದು ಪ್ರಶ್ನಿಸಿದರು.<br /> ಕ್ಷೇತ್ರದ ಅಭಿವೃದ್ಧಿಗೆ 1800 ಕೋಟಿ ಅನುದಾನವನ್ನು ಶಾಸಕರು ತಂದಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್ ಶ್ವೇತ ಪತ್ರ ಹೊರಡಿಸಲಿ. ಎನ್ಡಿಆರ್ಎಫ್, ಕೇಂದ್ರ ಸರ್ಕಾರದ ಯೋಜನೆಗಳಿಗೆ ಶಾಸಕರು ಭೂಮಿಪೂಜೆ ನಡೆಸುತ್ತಿದ್ದಾರೆ. ₹ 900 ಕೋಟಿ ಅನುದಾನದಲ್ಲಿ ಯಾವ ಕೆಲಸ ಆಗಿದೆ? ಉಳಿದ ₹ 900 ಕೋಟಿ ಅನುದಾನದ ಕ್ರಿಯಾಯೋಜನೆ ಯಾವುದು? ಎಂಬ ಬಗ್ಗೆಯೂ ತಿಳಿಸಲಿ. ಅನುದಾನ ಸಾರ್ವಜನಿಕ ಉಪಯೋಗಕ್ಕೆ ಬಳಕೆಯಾಗುತ್ತಿದೆಯೇ ಎಂಬುದೂ ಬಹಿರಂಗವಾಗಲಿ ಎಂದು ಸವಾಲು ಹಾಕಿದರು.</p>.<p>ಬಿಜೆಪಿ ಸರ್ಕಾರ ಇದ್ದಾಗ ಸಿ ಮತ್ತು ಡಿ ಜಾಗದಲ್ಲಿ ಕೃಷಿ ಮಾಡಿ , ಮನೆ ಕಟ್ಟಿಕೊಂಡಿರುವ ಮಂದಿಗೆ ನೋಟಿಸ್ ನೀಡಿಲ್ಲ. ಶಾಸಕರಾಗಿದ್ದ ಅಪ್ಪಚ್ಚು ರಂಜನ್ ಹಕ್ಕುಪತ್ರ ನೀಡಿದ್ದರು. ಬಿಜೆಪಿ ಶಾಸಕ 25 ವರ್ಷ ಇದ್ದ ಸಂದರ್ಭ 5 ಸಾವಿರಕ್ಕೂ ಹೆಚ್ಚು ಮಂದಿಗೆ ಹಕ್ಕುಪತ್ರ ನೀಡಲಾಗಿತ್ತು. ಕಾಂಗ್ರೆಸ್ನವರೂ ಇದರ ಫಲಾನುಭವಿಯಾಗಿದ್ದಾರೆ ಎಂದು ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಹೇಳಿದರು.<br /><br /> ಪ್ರಧಾನ ಕಾರ್ಯದರ್ಶಿಳದ ಮೋಕ್ಷಿಕ್ ರಾಜ್, ದರ್ಶನ್ ಜೋಯಪ್ಪ, ಎಸ್.ಆರ್. ಸೋಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>