<p><strong>ಮಡಿಕೇರಿ:</strong> ಈಗ ರಾಜ್ಯದಲ್ಲಿರುವ ಬಿಜೆಪಿ ನಾಯಕರಿಗೆ ಪ್ರಬುದ್ದತೆ ಇದೆಯೆ? ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಭೋಸರಾಜು ಪ್ರಶ್ನಿಸಿದರು.</p><p>ಹಿಂದೆ ಇದ್ದ ಬಿಜೆಪಿ ನಾಯಕರ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ಈಗ ಇರುವ ವಿಜಯೇಂದ್ರ, ಆರ್.ಅಶೋಕ್ ಅವರಿಗೆ ಪ್ರಬುದ್ದತೆಯೆ ಇಲ್ಲ. ನಿತ್ಯ ಏನಾದರೂ ಒಂದು ಹೇಳುತ್ತಲೇ ಇರುತ್ತಾರೆ. ಅವರ ಮಾತುಗಳನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p><p>ಒಂದು ಪಾದಯಾತ್ರೆ ನಡೆಸಲೂ ಹೈಕಮಾಂಡ್ನ ಅನುಮತಿ ಪಡೆಯಬೇಕಾದ ಸ್ಥಿತಿ ಬಿಜೆಪಿಯಲ್ಲಿದೆ. ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ. ಕೇಂದ್ರದಿಂದ ಬರಬೇಕಾದ ಅನುದಾನದ ಕುರಿತು ಮಾತೇ ಆಡುವುದಿಲ್ಲ. ಅದನ್ನು ಬಿಟ್ಟು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು.</p>
<p><strong>ಮಡಿಕೇರಿ:</strong> ಈಗ ರಾಜ್ಯದಲ್ಲಿರುವ ಬಿಜೆಪಿ ನಾಯಕರಿಗೆ ಪ್ರಬುದ್ದತೆ ಇದೆಯೆ? ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಭೋಸರಾಜು ಪ್ರಶ್ನಿಸಿದರು.</p><p>ಹಿಂದೆ ಇದ್ದ ಬಿಜೆಪಿ ನಾಯಕರ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ಈಗ ಇರುವ ವಿಜಯೇಂದ್ರ, ಆರ್.ಅಶೋಕ್ ಅವರಿಗೆ ಪ್ರಬುದ್ದತೆಯೆ ಇಲ್ಲ. ನಿತ್ಯ ಏನಾದರೂ ಒಂದು ಹೇಳುತ್ತಲೇ ಇರುತ್ತಾರೆ. ಅವರ ಮಾತುಗಳನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p><p>ಒಂದು ಪಾದಯಾತ್ರೆ ನಡೆಸಲೂ ಹೈಕಮಾಂಡ್ನ ಅನುಮತಿ ಪಡೆಯಬೇಕಾದ ಸ್ಥಿತಿ ಬಿಜೆಪಿಯಲ್ಲಿದೆ. ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ. ಕೇಂದ್ರದಿಂದ ಬರಬೇಕಾದ ಅನುದಾನದ ಕುರಿತು ಮಾತೇ ಆಡುವುದಿಲ್ಲ. ಅದನ್ನು ಬಿಟ್ಟು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು.</p>