ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಪಾದನೆ ಹೆಚ್ಚಳ ಮಾಡುವುದು ಸರ್ಕಾರದ ಗುರಿಯಾಗಿದೆ. ಸಂಕಷ್ಟ ಪರಿಸ್ಥಿತಿಯಲ್ಲಿಯೂ ಉತ್ತಮ ಬಜೆಟ್ ಮಂಡಿಸಲಾಗಿದೆ ಎಂದು ಹೇಳಿದರು. ರಾಜ್ಯ ಕಾರ್ಯದರ್ಶಿ ಡಾ.ಬಿ.ಸಿ. ನವೀನ್ ಕುಮಾರ್ ಮಾತನಾಡಿ, ದೇಶದ ಸಮಗ್ರತೆಗೆ ಪೂರಕವಾಗಿ ಬಜೆಟ್ ಮಂಡಿಸಲಾಗುತ್ತದೆ. ಸೆಸ್, ತೆರಿಗೆ ಸಂಗ್ರಹವನ್ನು ವೈಜ್ಞಾನಿಕವಾಗಿ ಮಾಡಲಾಗುತ್ತದೆ. ಪೆಟ್ರೋಲ್, ಡಿಸೇಲ್ಗೆ ಕೃಷಿ ಸೆಸ್ ಹೇರಿರುವುದರಿಂದ ರೈತರ ಸಬಲೀಕರಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು.