ಮಾರ್ಚ್ 13ರಂದು ಸೋಮವಾರಪೇಟೆಯ ಒಕ್ಕಲಿಗರ ಸಮುದಾಯದ ಭವನದಲ್ಲಿ ನಡೆಯಲಿರುವ ಯುವಮೋರ್ಚಾ ಸಮಾವೇಶದಲ್ಲಿ ಇಂಧನ ಸಚಿವ ಸುನಿಲ್ಕುಮಾರ್, 14ರಂದು ಮೂರ್ನಾಡುವಿನಲ್ಲಿ ನಡೆಯಲಿರುವ ರೈತ ಮೋರ್ಚಾ ಸಭೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, 15ರಂದು ವಿರಾಜಪೇಟೆಯಲ್ಲಿ ನಡೆಯಲಿರುವ ಮಹಿಳಾ ಮೋರ್ಚಾದ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, 16ರಂದು ಕುಶಾಲನಗರದಲ್ಲಿ ನಡೆಯಲಿರುವ ಎಸ್.ಸಿ. ಮೋರ್ಚಾ ಸಭೆಯಲ್ಲಿ ಗೋವಿಂದ ಕಾರಜೋಳ, 20ರಂದು ಪೊನ್ನಂಪೇಟೆಯಲ್ಲಿ ಎಸ್.ಟಿ.ಮೋರ್ಚಾ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.