<p>ಮಡಿಕೇರಿ: ವಿರಾಜಪೇಟೆಯಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಮೇಲೆ ಪ್ರಕರಣ ದಾಖಲಿಸಿದರೆ ಬಿಜೆಪಿ ಹೆದರುವುದಿಲ್ಲ. ಈಗ ದಾಖಲಿಸಿರುವ ಹುಸಿ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ತಿಳಿಸಿದರು.</p>.<p>‘ಲೋಕಸಭೆ ಮತ್ತು ವಿಧಾನಪರಿಷತ್ತಿನ ಚುನಾವಣೆಯಲ್ಲಿ ಸೋಲು ಕಂಡ ನಂತರ ಕಾಂಗ್ರೆಸ್ ಹತಾಶಗೊಂಡು ಈ ಕೆಲಸ ಮಾಡಿಸುತ್ತಿದೆ’ ಎಂದು ಅವರು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ವಿರಾಜಪೇಟೆಯಲ್ಲಿ ಪ್ರತಿಭಟನೆಗೆ ಬಿಜೆಪಿ ಅನುಮತಿ ಪಡೆದಿದ್ದರೂ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಲಾಗಿದೆ ಎಂದು ಹುಸಿ ದೂರು ದಾಖಲಿಸಲಾಗಿದೆ. ಇಂತಹ ಬೆದರಿಕೆ ತಂತ್ರಗಳಿಗೆ ಬಗ್ಗುವುದಿಲ್ಲ. ಇವೆಲ್ಲವನ್ನೂ ಕಾನೂನಿತಾತ್ಮಕವಾಗಿಯೇ ಎದುರಿಸಲಾಗುವುದು’ ಎಂದು ಹೇಳಿದರು.</p>.<p>ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ, ‘ಹಿಂದೆ ವಿಧಾನಸಭೆಯ ಸ್ಪೀಕರ್ ಆಗಿದ್ದ ಕೆ.ಜಿ. ಬೋಪಯ್ಯ ಅವರ ಪ್ರತಿಕೃತಿಯನ್ನು ಕಾಂಗ್ರೆಸ್ಸಿಗರು ದಹನ ಮಾಡಿದಾಗ ಅವರ ಸಂಸ್ಕೃತಿ ಎಲ್ಲಿ ಹೋಗಿತ್ತು’ ಎಂದು ಪ್ರಶ್ನಿಸಿದರು.</p>.<p>ಈಗ ನಮಗೆ ಸಂಸ್ಕೃತಿಯ ಪಾಠ ಹೇಳಲು ಕಾಂಗ್ರೆಸ್ಸಿಗರು ಬರುತ್ತಾರೆ. ಆದರೆ, ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಪಮಾನ ಮಾಡುವ ರೀತಿ ಇವರು ಪ್ರತಿಭಟನೆ ಮಾಡಿಲ್ಲವೇ. ಈಗ ಹೋರಾಟ ಮಾಡುವುದೇ ತಪ್ಪು ಎಂದು ಹೇಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬಿಜೆಪಿ ಕಾರ್ಯಕರ್ತರ ಆತ್ಮಸ್ಥೈರ್ಯ ಕುಂದಿಸುವ ಸಲುವಾಗಿಯೇ ಪ್ರಕರಣ ದಾಖಲಿಸಲಾಗಿದೆ. ಕಾಂಗ್ರೆಸ್ ಶಾಸಕರ ಶೂನ್ಯಸಾಧನೆಯಿಂದ ಮುಖ ತೋರಿಸಲು ಆಗದ ಸ್ಥಿತಿಯಲ್ಲಿರುವ ಅವರು ಇಂತಹ ಪ್ರಯತ್ನಗಳಿಗೆ ಕೈ ಹಾಕಿದ್ದಾರೆ ಎಂದು ಹರಿಹಾಯ್ದರು.</p>.<p>ಕಳೆದ 25 ವರ್ಷಗಳಿಂದ ಬಿಜೆಪಿಯವರೇ ಶಾಸಕರಾಗಿದ್ದರು, ಮಂತ್ರಿಗಳಾಗಿದ್ದರು, ವಿಧಾನಸಭೆಯ ಸ್ಪೀಕರ್ ಆಗಿದ್ದರು. ಆದರೆ, ಒಮ್ಮೆಯೂ ಜಿಲ್ಲೆಯಲ್ಲಿ ದ್ವೇಷ ರಾಜಕಾರಣಕ್ಕೆ ಕೈ ಹಾಕಲಿಲ್ಲ. ಆದರೆ, ಕಾಂಗ್ರೆಸ್ನವರು ಶಾಸಕರಾಗಿ ಆಯ್ಕೆಯಾದ ಕೇವಲ ಒಂದು ವರ್ಷದಲ್ಲೇ ದ್ವೇಷ ರಾಜಕಾರಣಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದರು.</p>.<p>ಬಿಜೆಪಿ ಪ್ರಧಾನ ಕಾರ್ಯದರ್ಶಿ ತಳೂರು ಕಿಶೋರ್ಕುಮಾರ್ ಮಾತನಾಡಿ, ‘ಪೊಲೀಸರು ಕಾಂಗ್ರೆಸ್ನ ಕೈಗೊಂಬೆಗಳಂತೆ ಕಾರ್ಯನಿರ್ವಹಿಸುವುದನ್ನು ಬಿಡಬೇಕು, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು’ ಎಂದು ಮನವಿ ಮಾಡಿದರು.</p>.<p>ಪಕ್ಷದ ಜಿಲ್ಲಾ ಘಟಕದ ವಕ್ತಾರ ಬಿ.ಕೆ. ಅರುಣ್ಕುಮಾರ್, ವಿರಾಜಪೇಟೆ ಮಂಡಲ ಅಧ್ಯಕ್ಷ ಮಂಜು ಗಣಪತಿ ಹಾಗೂ ರಾಕೇಶ್ ದೇವಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ವಿರಾಜಪೇಟೆಯಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ಮೇಲೆ ಪ್ರಕರಣ ದಾಖಲಿಸಿದರೆ ಬಿಜೆಪಿ ಹೆದರುವುದಿಲ್ಲ. ಈಗ ದಾಖಲಿಸಿರುವ ಹುಸಿ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ತಿಳಿಸಿದರು.</p>.<p>‘ಲೋಕಸಭೆ ಮತ್ತು ವಿಧಾನಪರಿಷತ್ತಿನ ಚುನಾವಣೆಯಲ್ಲಿ ಸೋಲು ಕಂಡ ನಂತರ ಕಾಂಗ್ರೆಸ್ ಹತಾಶಗೊಂಡು ಈ ಕೆಲಸ ಮಾಡಿಸುತ್ತಿದೆ’ ಎಂದು ಅವರು ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ವಿರಾಜಪೇಟೆಯಲ್ಲಿ ಪ್ರತಿಭಟನೆಗೆ ಬಿಜೆಪಿ ಅನುಮತಿ ಪಡೆದಿದ್ದರೂ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಲಾಗಿದೆ ಎಂದು ಹುಸಿ ದೂರು ದಾಖಲಿಸಲಾಗಿದೆ. ಇಂತಹ ಬೆದರಿಕೆ ತಂತ್ರಗಳಿಗೆ ಬಗ್ಗುವುದಿಲ್ಲ. ಇವೆಲ್ಲವನ್ನೂ ಕಾನೂನಿತಾತ್ಮಕವಾಗಿಯೇ ಎದುರಿಸಲಾಗುವುದು’ ಎಂದು ಹೇಳಿದರು.</p>.<p>ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ, ‘ಹಿಂದೆ ವಿಧಾನಸಭೆಯ ಸ್ಪೀಕರ್ ಆಗಿದ್ದ ಕೆ.ಜಿ. ಬೋಪಯ್ಯ ಅವರ ಪ್ರತಿಕೃತಿಯನ್ನು ಕಾಂಗ್ರೆಸ್ಸಿಗರು ದಹನ ಮಾಡಿದಾಗ ಅವರ ಸಂಸ್ಕೃತಿ ಎಲ್ಲಿ ಹೋಗಿತ್ತು’ ಎಂದು ಪ್ರಶ್ನಿಸಿದರು.</p>.<p>ಈಗ ನಮಗೆ ಸಂಸ್ಕೃತಿಯ ಪಾಠ ಹೇಳಲು ಕಾಂಗ್ರೆಸ್ಸಿಗರು ಬರುತ್ತಾರೆ. ಆದರೆ, ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಪಮಾನ ಮಾಡುವ ರೀತಿ ಇವರು ಪ್ರತಿಭಟನೆ ಮಾಡಿಲ್ಲವೇ. ಈಗ ಹೋರಾಟ ಮಾಡುವುದೇ ತಪ್ಪು ಎಂದು ಹೇಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬಿಜೆಪಿ ಕಾರ್ಯಕರ್ತರ ಆತ್ಮಸ್ಥೈರ್ಯ ಕುಂದಿಸುವ ಸಲುವಾಗಿಯೇ ಪ್ರಕರಣ ದಾಖಲಿಸಲಾಗಿದೆ. ಕಾಂಗ್ರೆಸ್ ಶಾಸಕರ ಶೂನ್ಯಸಾಧನೆಯಿಂದ ಮುಖ ತೋರಿಸಲು ಆಗದ ಸ್ಥಿತಿಯಲ್ಲಿರುವ ಅವರು ಇಂತಹ ಪ್ರಯತ್ನಗಳಿಗೆ ಕೈ ಹಾಕಿದ್ದಾರೆ ಎಂದು ಹರಿಹಾಯ್ದರು.</p>.<p>ಕಳೆದ 25 ವರ್ಷಗಳಿಂದ ಬಿಜೆಪಿಯವರೇ ಶಾಸಕರಾಗಿದ್ದರು, ಮಂತ್ರಿಗಳಾಗಿದ್ದರು, ವಿಧಾನಸಭೆಯ ಸ್ಪೀಕರ್ ಆಗಿದ್ದರು. ಆದರೆ, ಒಮ್ಮೆಯೂ ಜಿಲ್ಲೆಯಲ್ಲಿ ದ್ವೇಷ ರಾಜಕಾರಣಕ್ಕೆ ಕೈ ಹಾಕಲಿಲ್ಲ. ಆದರೆ, ಕಾಂಗ್ರೆಸ್ನವರು ಶಾಸಕರಾಗಿ ಆಯ್ಕೆಯಾದ ಕೇವಲ ಒಂದು ವರ್ಷದಲ್ಲೇ ದ್ವೇಷ ರಾಜಕಾರಣಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದರು.</p>.<p>ಬಿಜೆಪಿ ಪ್ರಧಾನ ಕಾರ್ಯದರ್ಶಿ ತಳೂರು ಕಿಶೋರ್ಕುಮಾರ್ ಮಾತನಾಡಿ, ‘ಪೊಲೀಸರು ಕಾಂಗ್ರೆಸ್ನ ಕೈಗೊಂಬೆಗಳಂತೆ ಕಾರ್ಯನಿರ್ವಹಿಸುವುದನ್ನು ಬಿಡಬೇಕು, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು’ ಎಂದು ಮನವಿ ಮಾಡಿದರು.</p>.<p>ಪಕ್ಷದ ಜಿಲ್ಲಾ ಘಟಕದ ವಕ್ತಾರ ಬಿ.ಕೆ. ಅರುಣ್ಕುಮಾರ್, ವಿರಾಜಪೇಟೆ ಮಂಡಲ ಅಧ್ಯಕ್ಷ ಮಂಜು ಗಣಪತಿ ಹಾಗೂ ರಾಕೇಶ್ ದೇವಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>