ಸಂಭ್ರಮಾಚರಣೆ: ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಮೂರ್ನಾಡು ರಸ್ತೆಯಿಂದ ಮೀನುಪೇಟೆಯವರೆಗೆ ಮೆರವಣಿಗೆ ನಡೆಸಿದರು. ಈ ಸಂದರ್ಭ ಗಡಿಯಾರ ಕಂಬದ ಬಳಿ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು. ಈ ಸಂದರ್ಭ ಬಿಜೆಪಿ ಪಕ್ಷದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಂ. ಸುಜಾ ಕುಶಾಲಪ್ಪ, ಜಿಲ್ಲಾ ಉಪಾಧ್ಯಕ್ಷ ಎ.ಮಹೇಶ್ ಗಣಪತಿ, ತಾಲ್ಲೂಕು ಅಧ್ಯಕ್ಷ ಎನ್.ಚಲನ್ ಕುಮಾರ್, ನಗರ ಘಟಕದ ಅಧ್ಯಕ್ಷ ಟಿ.ಪಿ.ಕೃಷ್ಣ, ಪಕ್ಷದ ಪ್ರಮುಖರಾದ ರೀನಾ ಪ್ರಕಾಶ್, ಪಿ.ರಘು ನಾಣಯ್ಯ, ಎಂ.ಶಶಾಂಕ್, ಬಿ.ಎಂ.ಗಣೇಶ್, ಪಟ್ಟಣ ಪಂಚಾಯಿತಿಯ ಬಿಜೆಪಿ ಸದಸ್ಯರು ಇದ್ದರು.