<p><strong>ಮಡಿಕೇರಿ: ಜಿ</strong>ಲ್ಲೆಯ ಇಬ್ಬರು ಶಾಸಕರ ವಿರುದ್ಧ ಬಿಜೆಪಿ ಟೀಕಿಸಿರುವುದು ಸರಿ ಇಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಇಬ್ಬರೂ ಶಾಸಕರು ಸುಮಾರು ₹ 200 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿ ಪರ್ವವನ್ನೇ ಜಿಲ್ಲೆಯಲ್ಲಿ ಶುರು ಮಾಡಿದ್ದಾರೆ. ಇಂತಹ ಶಾಸಕರ ವಿರುದ್ಧ ಟೀಕಿಸುವುದು ನಿಜಕ್ಕೂ ಅರ್ಥಹೀನ’ ಎಂದು ಅವರು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.</p>.<p>‘ಈ ಹಿಂದೆ ಬಿಜೆಪಿಯು ಇಂಧನ ಬೆಲೆಯಲ್ಲಿ ಲೀಟರ್ಗೆ ₹ 100ರ ಗಡಿ ದಾಟಿಸಿತು. ಆಗ ನಾವು ಯಾರ ಪ್ರತಿಕೃತಿಯನ್ನು ಸುಡಲಿಲ್ಲ. ಸಾತ್ವಿಕವಾದ ವಿರೋಧವನ್ನಷ್ಟೇ ವ್ಯಕ್ತಪಡಿಸಿದೆವು. ಆದರೆ, ಈಗ ಇಂಧನ ಬೆಲೆ ಏರಿಕೆಯಾಯಿತು ಎಂದು ಸ್ಥಳೀಯ ಶಾಸಕರ ಪ್ರತಿಕೃತಿಯನ್ನು ದಹಿಸಿದ್ದು ಎಷ್ಟು ಸರಿ’ ಎಂದು ಅವರು ಪ್ರಶ್ನಿಸಿದರು.</p>.<p>ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ದಹಿಸಿದ್ದು ನೋವು ತರಿಸಿದೆ. ಇನ್ನು ಮುಂದಾದರೂ ಅವರಿಗೆ ಒಳ್ಳೆಯ ಬುದ್ದಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡ ಸುರೇಶ್ ಸಂಪಾಜೆ ಮಾತನಾಡಿ, ‘ಇಬ್ಬರೂ ಶಾಸಕರ ಅಭಿವೃದ್ಧಿ ಕಾರ್ಯಗಳು ಹಾಗೂ ಅವರ ಜನಪ್ರಿಯತೆಯನ್ನು ಸಹಿಸದೇ ಅವರ ಪ್ರತಿಕೃತಿ ದಹಿಸಲಾಗಿದೆ’ ಎಂದು ದೂರಿದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಮಂದ್ರಿರ ಮೋಹನ್ದಾಸ್, ಸಾಮಾಜಿಕ ಜಾಲತಾಣ ಅಧ್ಯಕ್ಷ ಸೂರಜ್ ಹೊಸೂರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: ಜಿ</strong>ಲ್ಲೆಯ ಇಬ್ಬರು ಶಾಸಕರ ವಿರುದ್ಧ ಬಿಜೆಪಿ ಟೀಕಿಸಿರುವುದು ಸರಿ ಇಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಇಬ್ಬರೂ ಶಾಸಕರು ಸುಮಾರು ₹ 200 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿ ಪರ್ವವನ್ನೇ ಜಿಲ್ಲೆಯಲ್ಲಿ ಶುರು ಮಾಡಿದ್ದಾರೆ. ಇಂತಹ ಶಾಸಕರ ವಿರುದ್ಧ ಟೀಕಿಸುವುದು ನಿಜಕ್ಕೂ ಅರ್ಥಹೀನ’ ಎಂದು ಅವರು ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.</p>.<p>‘ಈ ಹಿಂದೆ ಬಿಜೆಪಿಯು ಇಂಧನ ಬೆಲೆಯಲ್ಲಿ ಲೀಟರ್ಗೆ ₹ 100ರ ಗಡಿ ದಾಟಿಸಿತು. ಆಗ ನಾವು ಯಾರ ಪ್ರತಿಕೃತಿಯನ್ನು ಸುಡಲಿಲ್ಲ. ಸಾತ್ವಿಕವಾದ ವಿರೋಧವನ್ನಷ್ಟೇ ವ್ಯಕ್ತಪಡಿಸಿದೆವು. ಆದರೆ, ಈಗ ಇಂಧನ ಬೆಲೆ ಏರಿಕೆಯಾಯಿತು ಎಂದು ಸ್ಥಳೀಯ ಶಾಸಕರ ಪ್ರತಿಕೃತಿಯನ್ನು ದಹಿಸಿದ್ದು ಎಷ್ಟು ಸರಿ’ ಎಂದು ಅವರು ಪ್ರಶ್ನಿಸಿದರು.</p>.<p>ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿಯನ್ನು ದಹಿಸಿದ್ದು ನೋವು ತರಿಸಿದೆ. ಇನ್ನು ಮುಂದಾದರೂ ಅವರಿಗೆ ಒಳ್ಳೆಯ ಬುದ್ದಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡ ಸುರೇಶ್ ಸಂಪಾಜೆ ಮಾತನಾಡಿ, ‘ಇಬ್ಬರೂ ಶಾಸಕರ ಅಭಿವೃದ್ಧಿ ಕಾರ್ಯಗಳು ಹಾಗೂ ಅವರ ಜನಪ್ರಿಯತೆಯನ್ನು ಸಹಿಸದೇ ಅವರ ಪ್ರತಿಕೃತಿ ದಹಿಸಲಾಗಿದೆ’ ಎಂದು ದೂರಿದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿಯ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಮಂದ್ರಿರ ಮೋಹನ್ದಾಸ್, ಸಾಮಾಜಿಕ ಜಾಲತಾಣ ಅಧ್ಯಕ್ಷ ಸೂರಜ್ ಹೊಸೂರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>