<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದಿಂದ ದುಬಾರೆ ಹಾಡಿಗೆ ಹೋಗುತ್ತಿದ್ದ ಯಾಂತ್ರಿಕ ದೋಣಿಯೊಂದು ಉಕ್ಕಿ ಹರಿಯುತ್ತಿದ್ದ ಕಾವೇರಿ ನದಿಯ ಮಧ್ಯೆ ಶನಿವಾರ ಕೆಟ್ಟು ನಿಂತು ಆತಂಕ ಸೃಷ್ಟಿಸಿತು. ದೋಣಿಯಲ್ಲಿ ಸುಮಾರು 8 ಮಂದಿ ಇದ್ದರು.</p>.<p>ದೋಣಿ ನಡೆಸುತ್ತಿದ್ದವರು ಮರದ ಕೊಂಬೆಯೊಂದನ್ನು ಹಿಡಿದು ಸುಮಾರು ಅರ್ಧಗಂಟೆಗಳ ಕಾಲ ನಿಂತಿದ್ದರು. ನಂತರ, ಮತ್ತೊಂದು ದೋಣಿಯ ಮೂಲಕ ಸಿಲುಕಿದ್ದವರನ್ನು ರಕ್ಷಿಸಲಾಯಿತು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಉಪವಲಯ ಅರಣ್ಯಾಧಿಕಾರಿ ರಂಜನ್, ‘ದೋಣಿಯ ಚಕ್ರಕ್ಕೆ ಬಲೆ ಸಿಲುಕಿದ್ದರಿಂದ ಸಮಸ್ಯೆಯಾಗಿತ್ತು. ಕೂಡಲೇ ಎಲ್ಲರನ್ನೂ ರಕ್ಷಿಸಲಾಯಿತು. ಯಾವುದೇ ಅವಘಡ ಸಂಭವಿಸಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದಿಂದ ದುಬಾರೆ ಹಾಡಿಗೆ ಹೋಗುತ್ತಿದ್ದ ಯಾಂತ್ರಿಕ ದೋಣಿಯೊಂದು ಉಕ್ಕಿ ಹರಿಯುತ್ತಿದ್ದ ಕಾವೇರಿ ನದಿಯ ಮಧ್ಯೆ ಶನಿವಾರ ಕೆಟ್ಟು ನಿಂತು ಆತಂಕ ಸೃಷ್ಟಿಸಿತು. ದೋಣಿಯಲ್ಲಿ ಸುಮಾರು 8 ಮಂದಿ ಇದ್ದರು.</p>.<p>ದೋಣಿ ನಡೆಸುತ್ತಿದ್ದವರು ಮರದ ಕೊಂಬೆಯೊಂದನ್ನು ಹಿಡಿದು ಸುಮಾರು ಅರ್ಧಗಂಟೆಗಳ ಕಾಲ ನಿಂತಿದ್ದರು. ನಂತರ, ಮತ್ತೊಂದು ದೋಣಿಯ ಮೂಲಕ ಸಿಲುಕಿದ್ದವರನ್ನು ರಕ್ಷಿಸಲಾಯಿತು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಉಪವಲಯ ಅರಣ್ಯಾಧಿಕಾರಿ ರಂಜನ್, ‘ದೋಣಿಯ ಚಕ್ರಕ್ಕೆ ಬಲೆ ಸಿಲುಕಿದ್ದರಿಂದ ಸಮಸ್ಯೆಯಾಗಿತ್ತು. ಕೂಡಲೇ ಎಲ್ಲರನ್ನೂ ರಕ್ಷಿಸಲಾಯಿತು. ಯಾವುದೇ ಅವಘಡ ಸಂಭವಿಸಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>