ಮಡಿಕೇರಿ: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾಗಿ ಸತತ 2ನೇ ಅವಧಿಗೆ ಬಾಂಡ್ ಗಣಪತಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಕೆಟೋಳಿರ ಹರೀಶ್ ಆಯ್ಕೆಯಾದರು.
ಆಡಳಿತ ಮಂಡಳಿಯಲ್ಲಿ ಒಟ್ಟು 15 ಮಂದಿ ಸದಸ್ಯರಿದ್ದಾರೆ.
ಕೆಲದಿನಗಳ ಹಿಂದೆಯಷ್ಟೇ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಾಂಡ್ ಗಣಪತಿ ಅವರ ತಂಡ ಮೇಲುಗೈ ಸಾಧಿಸಿತ್ತು.
2014–19ನೇ ಅವಧಿಯಲ್ಲಿ ನಿರ್ದೇಶಕರಾಗಿದ್ದ ಬಾಂಡ್ ಗಣಪತಿ 2019–23ನೇ ಅವಧಿಯಲ್ಲಿ ಅಧ್ಯಕ್ಷರಾಗಿದ್ದರು. ನಂತರ ಈ ಅವಧಿಯಲ್ಲೂ ಅವರು ಅಧ್ಯಕ್ಷರಾಗಿ ಆಯ್ಕೆಯಾದರು. ಅಪೆಕ್ಸ್ ಬ್ಯಾಂಕಿಗೆ ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನಿಂದ ನಿರ್ದೇಶಕರಾಗಿ 2 ಬಾರಿ ಆಯ್ಕೆಯಾಗಿದ್ದರು.