<p><strong>ಮಡಿಕೇರಿ</strong>: ಅಶ್ಲೀಲತೆಯ ಕಡೆಗಿನ ಆಕರ್ಷಣೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇದು ಬಹಳ ದೊಡ್ಡ ಅಪಾಯಕಾರಿ ಬೆಳವಣಿಗೆ ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ.ಅನಂತಶಯನ ತಿಳಿಸಿದರು.</p>.<p>ನಗರದ ಪತ್ರಿಕಾಭವನದಲ್ಲಿ ಕೊಡವ ಮಕ್ಕಡ ಕೂಟದ 64ನೇ ಪುಸ್ತಕ ಹಾಗೂ ಚಿತ್ರ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಅವರ ‘ಅಗ್ನಿಯಾತ್ರೆ’ ಕಾದಂಬರಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>ವಾಸ್ತವತೆಯನ್ನು ಮರೆಮಾಚಿ ಭ್ರಮಾಲೋಕವನ್ನು ಸೃಷ್ಟಿಸುವ ಕಾಲ ಇದಾಗಿದೆ. ಗೌರವಯುತ ಸ್ಥಾನದಲ್ಲಿರುವ ಮಹಿಳೆಯರನ್ನು ನೋಡುವ ದೃಷ್ಟಿಕೋನವೇ ಬದಲಾಗಿದೆ. ಸ್ತ್ರೀಯ ಬಗ್ಗೆ ಕಾಮನೆಗಳ ವಿಕೃತಿ ಮೆರೆಯುತ್ತಿದೆ. ಇತ್ತೀಚೆಗೆ ಮಕ್ಕಳ ಆಲೋಚನಾ ಲಹರಿ ಕೂಡ ಇದೇ ರೀತಿಯದ್ದಾಗಿದ್ದು, ಇದು ಅತ್ಯಂತ ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ದೇವತೆಯ ಪ್ರತಿರೂಪವಾಗಿರುವ ಸ್ತ್ರೀಕುಲಕ್ಕೆ ತನ್ನದೇ ಆದ ಗೌರವವಿದೆ. ಆದರೆ, ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಯುವತಿಯರೇ ಮದ್ಯ ಮತ್ತು ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ, ಅಶ್ಲೀಲತೆಗೆ ಮಾರು ಹೋಗುತ್ತಿದ್ದಾರೆ ಎಂದು ಹೇಳಿದರು.</p>.<p>ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎಂ.ಎ.ಕೊಡವ ವಿಭಾಗದ ಸಂಯೋಜಕ ಮೇಚಿರ ರವಿಶಂಕರ್ ನಾಣಯ್ಯ ಮಾತನಾಡಿ, ‘ಹೆಣ್ಣಿನ ದೌರ್ಬಳತೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.</p>.<p>ಸಾಹಿತಿ ಹಾಗೂ ಮಕ್ಕಳ ತಜ್ಞ ವೈದ್ಯ ಮೇಜರ್ ಕುಶ್ವಂತ್ ಕೋಳಿಬೈಲು ಮಾತನಾಡಿ, ‘ಕೊಡಗಿನ ಗೌರಮ್ಮ, ತ್ರಿವೇಣಿ, ವೈದೇಹಿ ಸೇರಿದಂತೆ ಅನೇಕ ಮಹಿಳಾ ಕಥೆಗಾರ್ತಿಯರು ತಮ್ಮದೇ ಆದ ಚಾಪನ್ನು ಮೂಡಿಸಿದ್ದಾರೆ. ಈರಂಡ ಹರಿಣಿ ವಿಜಯ್ ಅವರು ಭರವಸೆಯ ಬರಹಗಾರ್ತಿಯಾಗಿದ್ದಾರೆ’ ಎಂದು ತಿಳಿಸಿದರು.</p>.<p>ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಒಟ್ಟು 63 ಕೃತಿಗಳನ್ನು ಕೂಟದ ಮೂಲಕ ಬಿಡುಗಡೆ ಮಾಡಲಾಗಿದೆ. 5 ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಒಂದು ಪುಸ್ತಕಕ್ಕೆ ರಾಜ್ಯ ಪ್ರಶಸ್ತಿ ಲಭಿಸಿದೆ. 3 ಪುಸ್ತಕಗಳು ಕೊಡವ ಸಿನಿಮಾವಾಗಿದೆ. ಇದೀಗ 64 ನೇ ಪುಸ್ತಕವಾಗಿ ‘ಅಗ್ನಿಯಾತ್ರೆ’ ಕಾದಂಬರಿಯನ್ನು ಬಿಡುಗಡೆ ಮಾಡಲಾಗಿದೆ ಎಂದರು.</p>.<p>ಬರಹಗಾರ್ತಿ ಈರಂಡ ಹರಿಣಿ ವಿಜಯ್ ಮಾತನಾಡಿ, ‘ಸಣ್ಣ ಕಥೆಯಾಗಿ ಆರಂಭಗೊಂಡ ‘ಅಗ್ನಿಯಾತ್ರೆ’ ದೊಡ್ಡ ಕಾದಂಬರಿಯಾಯಿತು. ಇದನ್ನು ರಚಿಸಲು ಒಂದೂವರೆ ವರ್ಷ ಬೇಕಾಯಿತು. ಹೆಣ್ಣೊಬ್ಬಳು ತಾನು ಅನುಭವಿಸುವ ಸಂಕಷ್ಟದ ಅಗ್ನಿಯಿಂದ ಹೊರ ಬರಲು ನಡೆಸುವ ಹೋರಾಟವನ್ನು ಕಾದಂಬರಿಯಲ್ಲಿ ಕಟ್ಟಿಕೊಡಲಾಗಿದೆ’ ಎಂದು ಹೇಳಿದರು.</p>.<p>ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕೊಡವ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಅಶ್ಲೀಲತೆಯ ಕಡೆಗಿನ ಆಕರ್ಷಣೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇದು ಬಹಳ ದೊಡ್ಡ ಅಪಾಯಕಾರಿ ಬೆಳವಣಿಗೆ ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ.ಅನಂತಶಯನ ತಿಳಿಸಿದರು.</p>.<p>ನಗರದ ಪತ್ರಿಕಾಭವನದಲ್ಲಿ ಕೊಡವ ಮಕ್ಕಡ ಕೂಟದ 64ನೇ ಪುಸ್ತಕ ಹಾಗೂ ಚಿತ್ರ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಅವರ ‘ಅಗ್ನಿಯಾತ್ರೆ’ ಕಾದಂಬರಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>ವಾಸ್ತವತೆಯನ್ನು ಮರೆಮಾಚಿ ಭ್ರಮಾಲೋಕವನ್ನು ಸೃಷ್ಟಿಸುವ ಕಾಲ ಇದಾಗಿದೆ. ಗೌರವಯುತ ಸ್ಥಾನದಲ್ಲಿರುವ ಮಹಿಳೆಯರನ್ನು ನೋಡುವ ದೃಷ್ಟಿಕೋನವೇ ಬದಲಾಗಿದೆ. ಸ್ತ್ರೀಯ ಬಗ್ಗೆ ಕಾಮನೆಗಳ ವಿಕೃತಿ ಮೆರೆಯುತ್ತಿದೆ. ಇತ್ತೀಚೆಗೆ ಮಕ್ಕಳ ಆಲೋಚನಾ ಲಹರಿ ಕೂಡ ಇದೇ ರೀತಿಯದ್ದಾಗಿದ್ದು, ಇದು ಅತ್ಯಂತ ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ದೇವತೆಯ ಪ್ರತಿರೂಪವಾಗಿರುವ ಸ್ತ್ರೀಕುಲಕ್ಕೆ ತನ್ನದೇ ಆದ ಗೌರವವಿದೆ. ಆದರೆ, ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಯುವತಿಯರೇ ಮದ್ಯ ಮತ್ತು ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ, ಅಶ್ಲೀಲತೆಗೆ ಮಾರು ಹೋಗುತ್ತಿದ್ದಾರೆ ಎಂದು ಹೇಳಿದರು.</p>.<p>ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎಂ.ಎ.ಕೊಡವ ವಿಭಾಗದ ಸಂಯೋಜಕ ಮೇಚಿರ ರವಿಶಂಕರ್ ನಾಣಯ್ಯ ಮಾತನಾಡಿ, ‘ಹೆಣ್ಣಿನ ದೌರ್ಬಳತೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.</p>.<p>ಸಾಹಿತಿ ಹಾಗೂ ಮಕ್ಕಳ ತಜ್ಞ ವೈದ್ಯ ಮೇಜರ್ ಕುಶ್ವಂತ್ ಕೋಳಿಬೈಲು ಮಾತನಾಡಿ, ‘ಕೊಡಗಿನ ಗೌರಮ್ಮ, ತ್ರಿವೇಣಿ, ವೈದೇಹಿ ಸೇರಿದಂತೆ ಅನೇಕ ಮಹಿಳಾ ಕಥೆಗಾರ್ತಿಯರು ತಮ್ಮದೇ ಆದ ಚಾಪನ್ನು ಮೂಡಿಸಿದ್ದಾರೆ. ಈರಂಡ ಹರಿಣಿ ವಿಜಯ್ ಅವರು ಭರವಸೆಯ ಬರಹಗಾರ್ತಿಯಾಗಿದ್ದಾರೆ’ ಎಂದು ತಿಳಿಸಿದರು.</p>.<p>ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಒಟ್ಟು 63 ಕೃತಿಗಳನ್ನು ಕೂಟದ ಮೂಲಕ ಬಿಡುಗಡೆ ಮಾಡಲಾಗಿದೆ. 5 ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಒಂದು ಪುಸ್ತಕಕ್ಕೆ ರಾಜ್ಯ ಪ್ರಶಸ್ತಿ ಲಭಿಸಿದೆ. 3 ಪುಸ್ತಕಗಳು ಕೊಡವ ಸಿನಿಮಾವಾಗಿದೆ. ಇದೀಗ 64 ನೇ ಪುಸ್ತಕವಾಗಿ ‘ಅಗ್ನಿಯಾತ್ರೆ’ ಕಾದಂಬರಿಯನ್ನು ಬಿಡುಗಡೆ ಮಾಡಲಾಗಿದೆ ಎಂದರು.</p>.<p>ಬರಹಗಾರ್ತಿ ಈರಂಡ ಹರಿಣಿ ವಿಜಯ್ ಮಾತನಾಡಿ, ‘ಸಣ್ಣ ಕಥೆಯಾಗಿ ಆರಂಭಗೊಂಡ ‘ಅಗ್ನಿಯಾತ್ರೆ’ ದೊಡ್ಡ ಕಾದಂಬರಿಯಾಯಿತು. ಇದನ್ನು ರಚಿಸಲು ಒಂದೂವರೆ ವರ್ಷ ಬೇಕಾಯಿತು. ಹೆಣ್ಣೊಬ್ಬಳು ತಾನು ಅನುಭವಿಸುವ ಸಂಕಷ್ಟದ ಅಗ್ನಿಯಿಂದ ಹೊರ ಬರಲು ನಡೆಸುವ ಹೋರಾಟವನ್ನು ಕಾದಂಬರಿಯಲ್ಲಿ ಕಟ್ಟಿಕೊಡಲಾಗಿದೆ’ ಎಂದು ಹೇಳಿದರು.</p>.<p>ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕೊಡವ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>