ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಯಲ್ಲಿ ಮುಳುಗಿ ಬಾಲಕ ಸಾವು

Last Updated 14 ಆಗಸ್ಟ್ 2021, 14:20 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಇಲ್ಲಿನಬಾಳೆಲೆಯಲ್ಲಿ ಶನಿವಾರ ಆಟವಾಡುತ್ತಿದ್ದ ಸಮಯದಲ್ಲಿ ತ್ರಿನೇಶ್ (4)ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾನೆ.

ಬಾಳೆಲೆ ಕೊಪ್ಪಲು ಗ್ರಾಮದ ಮಹೇಶ್ ಕುಮಾರ್ ಎಂಬವರ ಮಗನಾದ ಬಾಲಕ ತ್ರಿನೇಶ್ ಮಧ್ಯಾಹ್ನ ಮೂವರು ಮಕ್ಕಳೊಂದಿಗೆ ಮನೆಯ ಸಮೀಪದಲ್ಲಿ ಇರುವ ಗದ್ದೆ ಬಯಲಿನ ಕೆರೆಯ ಬಳಿ ಆಟವಾಡಲು ತೆರಳಿದ್ದಾನೆ. ಈ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಇದನ್ನು ನೋಡಿದ ಇತರ ಬಾಲಕರು ಓಡಿ ಬಂದು ಪೋಷಕರಿಗೆ ತಿಳಿಸಿದ್ದಾರೆ. ಕೂಡಲೆ ಕೆರೆಯ ಬಳಿ ಹೋಗುಷ್ಟರಲ್ಲಿ ಬಾಲಕ ಮುಳುಗಿ ಪ್ರಾಣ ಬಿಟ್ಟಿದ್ದ. ವಿಷಯ ತಿಳಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಶುಕ್ರವಾರವಷ್ಟೇ ಬಾಲಕ ತ್ರಿನೇಶ್ ಬಿಳಿಕೆರೆಯ ಅಜ್ಜಿ ಮನೆಯಿಂದ ಬಾಳೆಲೆಗೆ ಬಂದಿದ್ದ ಎಂದು ಬಾಲಕನ ತಂದೆ ಮಹೇಶ್ ಕುಮಾರ್ ದುಃಖ ತೋಡಿಕೊಂಡರು. ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ಬಾಳೆಲೆಯಲ್ಲಿ ಶವ ಸಂಸ್ಕಾರ ನೆರವೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT