ಘಟನೆ ನಡೆದ ತಕ್ಷಣ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು. ಮೃತ ಮಗುವಿನ ಕುಟುಂಬದ ಸದಸ್ಯರ ರೋದನ ಮುಗಿಲು ಮುಟ್ಟಿತು. ಸ್ಥಳಕ್ಕೆ ಸಂಚಾರಿ ಪೋಲೀಸ್ ಠಾಣಾಧಿಕಾರಿ ಅಚ್ಚಮ್ಮ ಹಾಗೂ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಪೊಲೀಸರು ಸುಗಮಗೊಳಿಸಿದರು.
ಈ ಕುರಿತು ಕುಶಾಲನಗರ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು, ಸರ್ಕಾರಿ ಬಸ್ಸಿನ ಚಾಲಕನನ್ನು ವಶಕ್ಕೆ ಪಡೆದರು.