ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶನಿವಾರಸಂತೆ | ಬೀದಿ ನಾಯಿ ಕಡಿತ: ಬಾಲಕನಿಗೆ ಗಂಭೀರ ಗಾಯ

Published 20 ಮಾರ್ಚ್ 2024, 15:49 IST
Last Updated 20 ಮಾರ್ಚ್ 2024, 15:49 IST
ಅಕ್ಷರ ಗಾತ್ರ

ಶನಿವಾರಸಂತೆ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಆಲೂರುಸಿದ್ದಾಪುರ ಗ್ರಾಮದಲ್ಲಿ ಬುಧವಾರ ಆಟವಾಡುತ್ತಿದ್ದ ಬಾಲಕ ಮೋಕ್ಷಿತ್ (8)ಗೆ ಬೀದಿನಾಯಿಯೊಂದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಚಿಕಿತ್ಸೆಗಾಗಿ ಬಾಲಕನನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ಪಕ್ಕದಲ್ಲಿ ಬಾಲಕ ಆಟವಾಡುತ್ತಿದ್ದಾಗ ನಾಯಿಯೊಂದು ದಾಳಿ ನಡೆಸಿ, ಕಾಲು, ಕೈ ತೋಳು, ಕುತ್ತಿಗೆ, ಮುಖ, ಕಣ್ಣು ಭಾಗಕ್ಕೆಲ್ಲ ಕಚ್ಚಿದೆ. ಇದರಿಂದ ಚೀರಾಡುತ್ತಿದ್ದ ಬಾಲಕನನ್ನು ಸ್ಥಳೀಯರು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ಕರೆದೋಯ್ದರು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT