<p><strong>ಮಡಿಕೇರಿ</strong>: ಆರ್ಥಿಕವಾಗಿ ಸಬಲರಾಗಿದ್ದಲ್ಲಿ ಅಂತಹ ಕುಟುಂಬಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಶೀಲಿಸಬೇಕು. ಅದನ್ನು ಬಿಟ್ಟು ನಿಜವಾದ ಬಡವರಿಗೆ ಬಿಪಿಎಲ್ ಕಾರ್ಡ್ ಇಲ್ಲದಿರುವುದು ನೋವು ತರುತ್ತಿದೆ. ಆದ್ದರಿಂದ ಅರ್ಹರಿಗೆ ಬಿಪಿಎಲ್ ಕಾರ್ಡ್ ತಲುಪಿಸಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ತಿತಿರ ಧರ್ಮಜ ಉತ್ತಪ್ಪ ಸೂಚಿಸಿದರು. ಮಾತ್ರವಲ್ಲ, ಈ ಸಂಬಂಧ ಸರ್ಕಾರಕ್ಕೂ ಸಹ ಪತ್ರ ಬರೆಯಲು ಸಭೆ ನಿರ್ಧರಿಸಿತು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. </p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿಯ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳಬೇಕು. ಲ್ಲೆಯ ಅರ್ಹರಿಗೆ ಬಿಪಿಎಲ್ನಿಂದ ಎಪಿಎಲ್ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ ಇಲಾಖೆ ಅಥವಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೆದಾರರಿಗೆ ಮನವಿ ಸಲ್ಲಿಸಬೇಕು. ಮನವಿ ಪರಿಶೀಲಿಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಿದ್ದಾರೆ. ಈ ಕುರಿತು ಆಹಾರ ಇಲಾಖೆಯವರು ಅಗತ್ಯ ಜಾಗೃತಿ ಮೂಡಿಸಬೇಕು ಎಂದು ಅವರು ನಿರ್ದೇಶನ ನೀಡಿದರು.</p>.<p>ಅನ್ನಭಾಗ್ಯ ಯೋಜನೆಯಡಿ ಪ್ರತೀ ಫಲಾನುಭವಿಗೆ 10 ಕೆ.ಜಿ. ಅಕ್ಕಿ ವಿತರಣೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ ಎಂದರು.</p>.<p>ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಟುಂಬದ ಹಲವು ಬಡವರಿಗೆ ಎಪಿಎಲ್ ಕಾರ್ಡ್ ನೀಡಲಾಗಿದ್ದು, ಬಡವರಿಗೆ ಬಿಪಿಎಲ್ ಕಾರ್ಡ್ ವಿತರಿಸಬೇಕು. ಆ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಶೇ 99ರಷ್ಟು ಪ್ರಗತಿ ಸಾಧಿಸಲಾಗಿದ್ದು, ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು ಎಂದು ಸೂಚಿಸಿದರು.</p>.<p>ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಮತ್ತು ಪ್ರಗತಿ ಸಂಬಂಧ ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ಆಯೋಜಿಸಲಾಗುವುದು. ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಗ್ಯಾರಂಟಿ ಯೋಜನೆ ರಾಜ್ಯ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಹೀಗೆ ಹಲವರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಸಮ್ಮೇಳನ ನಡೆದಿದೆ ಎಂದು ತಿಳಿಸಿದರು.</p>.<p>ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಾಮಫಲಕ ಅಳವಡಿಸಬೇಕು. ಪ್ರತೀ ಗ್ರಾಮಕ್ಕೂ ಈಗಾಗಲೇ ಇರುವ ಮಾರ್ಗದಂತೆ ಸರಿಯಾಗಿ ಬಸ್ ಸಂಚಾರ ನಿರ್ವಹಣೆ ಮಾಡಬೇಕು. ವಿರಾಜಪೇಟೆಯಿಂದ ಮೈಸೂರು ಬೆಂಗಳೂರು ಕಡೆಗೆ ರಾತ್ರಿ ವೇಳೆಯಲ್ಲಿ ಬಸ್ ಸಂಚರಿಸಬೇಕು ಎಂದು ಹೇಳಿದರು.</p>.<p>ಉಪಾಧ್ಯಕ್ಷರಾದ ಶಾರಿ ಗಿರೀಶ, ಕೆ.ಸಿ.ಭೀಮಯ್ಯ, ನಾಸಿರ್, ಸದಸ್ಯರಾದ ಕುಟ್ಟಂಡ ಕೃಷ್ಣ, ಸುಂದರ, ಕೆ.ಎಂ.ಬಸೀರ್, ಮುಸ್ತಪ, ಕೆ.ಜಿ.ಪೀಟರ್, ಮಂದ್ರಿರ ಮೋಹನ್ ದಾಸ್, ಕಾಳೇಮಾಡ ಪ್ರಶಾಂತ್ ಅವರು ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಸಂಬಂಧ ಹಲವು ವಿಚಾರಗಳ ಕುರಿತು ಗಮನ ಸೆಳೆದರು.</p>.<p>ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಮಂಟೇಸ್ವಾಮಿ, ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್, ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕ ಈರಸಪ್ಪ ಅವರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಗ್ಯಾರಂಟಿ ಯೋಜನೆ ಪ್ರಗತಿ ಸಂಬಂಧ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಆರ್ಥಿಕವಾಗಿ ಸಬಲರಾಗಿದ್ದಲ್ಲಿ ಅಂತಹ ಕುಟುಂಬಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಶೀಲಿಸಬೇಕು. ಅದನ್ನು ಬಿಟ್ಟು ನಿಜವಾದ ಬಡವರಿಗೆ ಬಿಪಿಎಲ್ ಕಾರ್ಡ್ ಇಲ್ಲದಿರುವುದು ನೋವು ತರುತ್ತಿದೆ. ಆದ್ದರಿಂದ ಅರ್ಹರಿಗೆ ಬಿಪಿಎಲ್ ಕಾರ್ಡ್ ತಲುಪಿಸಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ತಿತಿರ ಧರ್ಮಜ ಉತ್ತಪ್ಪ ಸೂಚಿಸಿದರು. ಮಾತ್ರವಲ್ಲ, ಈ ಸಂಬಂಧ ಸರ್ಕಾರಕ್ಕೂ ಸಹ ಪತ್ರ ಬರೆಯಲು ಸಭೆ ನಿರ್ಧರಿಸಿತು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. </p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಚೀಟಿಯ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳಬೇಕು. ಲ್ಲೆಯ ಅರ್ಹರಿಗೆ ಬಿಪಿಎಲ್ನಿಂದ ಎಪಿಎಲ್ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ ಇಲಾಖೆ ಅಥವಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೆದಾರರಿಗೆ ಮನವಿ ಸಲ್ಲಿಸಬೇಕು. ಮನವಿ ಪರಿಶೀಲಿಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಿದ್ದಾರೆ. ಈ ಕುರಿತು ಆಹಾರ ಇಲಾಖೆಯವರು ಅಗತ್ಯ ಜಾಗೃತಿ ಮೂಡಿಸಬೇಕು ಎಂದು ಅವರು ನಿರ್ದೇಶನ ನೀಡಿದರು.</p>.<p>ಅನ್ನಭಾಗ್ಯ ಯೋಜನೆಯಡಿ ಪ್ರತೀ ಫಲಾನುಭವಿಗೆ 10 ಕೆ.ಜಿ. ಅಕ್ಕಿ ವಿತರಣೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ ಎಂದರು.</p>.<p>ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಟುಂಬದ ಹಲವು ಬಡವರಿಗೆ ಎಪಿಎಲ್ ಕಾರ್ಡ್ ನೀಡಲಾಗಿದ್ದು, ಬಡವರಿಗೆ ಬಿಪಿಎಲ್ ಕಾರ್ಡ್ ವಿತರಿಸಬೇಕು. ಆ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಶೇ 99ರಷ್ಟು ಪ್ರಗತಿ ಸಾಧಿಸಲಾಗಿದ್ದು, ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು ಎಂದು ಸೂಚಿಸಿದರು.</p>.<p>ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಮತ್ತು ಪ್ರಗತಿ ಸಂಬಂಧ ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ಆಯೋಜಿಸಲಾಗುವುದು. ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಗ್ಯಾರಂಟಿ ಯೋಜನೆ ರಾಜ್ಯ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಹೀಗೆ ಹಲವರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಸಮ್ಮೇಳನ ನಡೆದಿದೆ ಎಂದು ತಿಳಿಸಿದರು.</p>.<p>ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಾಮಫಲಕ ಅಳವಡಿಸಬೇಕು. ಪ್ರತೀ ಗ್ರಾಮಕ್ಕೂ ಈಗಾಗಲೇ ಇರುವ ಮಾರ್ಗದಂತೆ ಸರಿಯಾಗಿ ಬಸ್ ಸಂಚಾರ ನಿರ್ವಹಣೆ ಮಾಡಬೇಕು. ವಿರಾಜಪೇಟೆಯಿಂದ ಮೈಸೂರು ಬೆಂಗಳೂರು ಕಡೆಗೆ ರಾತ್ರಿ ವೇಳೆಯಲ್ಲಿ ಬಸ್ ಸಂಚರಿಸಬೇಕು ಎಂದು ಹೇಳಿದರು.</p>.<p>ಉಪಾಧ್ಯಕ್ಷರಾದ ಶಾರಿ ಗಿರೀಶ, ಕೆ.ಸಿ.ಭೀಮಯ್ಯ, ನಾಸಿರ್, ಸದಸ್ಯರಾದ ಕುಟ್ಟಂಡ ಕೃಷ್ಣ, ಸುಂದರ, ಕೆ.ಎಂ.ಬಸೀರ್, ಮುಸ್ತಪ, ಕೆ.ಜಿ.ಪೀಟರ್, ಮಂದ್ರಿರ ಮೋಹನ್ ದಾಸ್, ಕಾಳೇಮಾಡ ಪ್ರಶಾಂತ್ ಅವರು ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಸಂಬಂಧ ಹಲವು ವಿಚಾರಗಳ ಕುರಿತು ಗಮನ ಸೆಳೆದರು.</p>.<p>ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಮಂಟೇಸ್ವಾಮಿ, ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್, ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕ ಈರಸಪ್ಪ ಅವರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಗ್ಯಾರಂಟಿ ಯೋಜನೆ ಪ್ರಗತಿ ಸಂಬಂಧ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>