<blockquote>100ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ | ಮಿದುಳು ಆರೋಗ್ಯ ಚಿಕಿತ್ಸಾಲಯದಲ್ಲಿ 3 ಸಾವಿರ ಮಂದಿಗೆ ಚಿಕಿತ್ಸೆ</blockquote>.<p><strong>ಮಡಿಕೇರಿ:</strong> ಜಿಲ್ಲಾಸ್ಪತ್ರೆಯಲ್ಲಿರುವ ‘ಮಿದುಳು ಆರೋಗ್ಯ ಚಿಕಿತ್ಸಾಲಯ’ದಲ್ಲಿ ತಲೆನೋವು ಸೇರಿದಂತೆ ಮಿದುಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಿದುಳು ಆರೋಗ್ಯ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ ಡಾ.ಆನಂದ್ ತಿಳಿಸಿದರು.</p>.<p>ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮಿದುಳು ಆರೋಗ್ಯ ಉಪಕ್ರಮದ ವತಿಯಿಂದ ಮಂಗಳವಾರ ನಡೆದ ವಿಶ್ವ ಮಿದುಳು ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನರರೋಗಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚುತ್ತಿರುವುದನ್ನು ಗಮನಿಸಿದ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ತಲೆನೋವು, ಪಾರ್ಶ್ವವಾಯು, ಮೂರ್ಛೆರೋಗ, ಪಾರ್ಕಿನ್ಸನ್ ಕಾಯಿಲೆ ಮತ್ತು ಮರೆವಿನ ಕಾಯಿಲೆಗಳು ಕಂಡು ಬಂದಲ್ಲಿ ಈ ಚಿಕಿತ್ಸಾಲಯಕ್ಕೆ ಬಂದು ವೈದ್ಯರಿಗೆ ತೋರಿಸಿ ಉಚಿತ ಪರೀಕ್ಷೆ ಮತ್ತು ಚಿಕಿತ್ಸೆ ಪಡೆಯಬಹುದು’ ಎಂದರು.</p>.<p>ಕೊಡಗು ಜಿಲ್ಲೆಯಲ್ಲಿ ಮಿದುಳು ಆರೋಗ್ಯ ಕಾರ್ಯಕ್ರಮದಡಿಯಲ್ಲಿ 2024ರಿಂದ ಜೂನ್ 2025ನೇ ಸಾಲಿನವರೆಗೂ 3 ಸಾವಿರ ಮಂದಿ ಮಿದುಳು ಆರೋಗ್ಯ ಚಿಕಿತ್ಸಾಲಯದಲ್ಲಿ ಉಚಿತ ಚಿಕಿತ್ಸೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಮಿದುಳು ದೇಹದ ಅತ್ಯಂತ ಪ್ರಮುಖ ಅಂಗ. ದೈಹಿಕ ಚಲನೆಗಳಿಂದ ಹಿಡಿದು ಆಲೋಚನೆಗಳು ಭಾವನೆಗಳು ಮತ್ತು ಸ್ಮರಣೆಯವರೆಗೆ ಎಲ್ಲವನ್ನು ನಿಯಂತ್ರಿಸುವ ಅಂಗವಾಗಿದೆ ಎಂದು ಹೇಳಿದರು.</p>.<p>‘ವಿಶ್ವ ಮಿದುಳು ದಿನವನ್ನು ಆಚರಿಸುವ ಮೂಲಕ ಮಿದುಳಿನ ಮಹತ್ವ ಹಾಗೂ ಅದರ ಆರೋಗ್ಯ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಿದೆ. ಎಲ್ಲ ಸರ್ಕಾರಿ ಸಂಸ್ಥೆಗಳು, ಆರೋಗ್ಯ ವೃತ್ತಿಪರರು, ಆರೈಕೆದಾರರು, ನಾಗರಿಕರು ಎಲ್ಲರೂ ಸೇರಿ ಜಾಗೃತಿ ಮೂಡಿಸಿ ಕಾರ್ಯಕ್ರಮವನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಪ್ರಸಕ್ತ ಸಾಲಿಗೆ ‘ಎಲ್ಲಾ ವಯಸ್ಸಿನವರಿಗೂ ಮೆದುಳಿನ ಆರೋಗ್ಯ’ ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಹಿಂದೆ ಕೇವಲ ಹಿರಿಯರಷ್ಟೇ ಮಿದುಳಿನ ತೊಂದರೆಯಿಂದ ಬಳಲುತ್ತಿದ್ದರು. ಆದರೆ, ಈಗ ಎಲ್ಲ ವಯಸ್ಸಿನವರಲ್ಲೂ ಮಿದುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಡಲಾರಂಭಿಸಿವೆ ಎಂದರು.</p>.<p>ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಮಂಜುಳಾ ಮಾತನಾಡಿ, ‘ಓದಿನ ಕಡೆ ಗಮನ ಹರಿಸಬೇಕು. ಈ ಬಗೆಯ ಚಿಕಿತ್ಸಾಲಯ ಇದೆ ಎಂದು ಹಾಗೂ ಮಿದುಳು ಆರೋಗ್ಯ ಕುರಿತು ಮನೆಮನೆಗೂ ಜಾಗೃತಿ ಮೂಡಿಸಬೇಕು’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.</p>.<p>ಶುಶ್ರೂಷಕ ಅಧೀಕ್ಷಕಿ ವೀಣಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಮಿದುಳು ಆರೋಗ್ಯ ಕಾರ್ಯಕ್ರಮದ ತಂಡದ ವಿಕ್ರಂ, ಕಾವ್ಯಶ್ರೀ, ಪ್ರಿರ್ದೋಸ್ ಸುಲ್ತಾನ ಹಾಗೂ 100ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><blockquote>ಮಿದುಳು ಸರಿಯಾಗಿ ಕೆಲಸ ನಿರ್ವಹಿಸದಿದ್ದಲ್ಲಿ ಮನುಷ್ಯರು ಪರಾವಲಂಬಿಯಾಗಿ ಬೇರೆಯವರಿಗೆ ಹೊರೆಯಾಗಬೇಕಾಗುತ್ತದೆ. ಹಾಗಾಗಿ ಮಿದುಳಿನ ಆರೋಗ್ಯದ ಕುರಿತು ಎಲ್ಲರೂ ಆದ್ಯತೆ ಗಮನ ನೀಡಿ</blockquote><span class="attribution">ಡಾ.ಆನಂದ್ ಮಿದುಳು ಆರೋಗ್ಯ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ </span></div>.<p><strong>ಮಿದುಳಿನ ಆರೋಗ್ಯಕ್ಕೆ ಏನು ಮಾಡಬೇಕು?</strong> </p><p>*ಆರೋಗ್ಯಕರ ಜೀವನ ಶೈಲಿ </p><p>* ಕನಿಷ್ಠ 7ರಿಂದ 8 ಗಂಟೆವರೆಗೆ ನಿದ್ದೆ ಮಾಡುವುದು </p><p>* ಮಾನಸಿಕವಾಗಿ ಸಕ್ರಿಯರಾಗಲು ಓದಬೇಕು * ಒತ್ತಡವನ್ನು ನಿಯಂತ್ರಿಸಬೇಕು </p><p>* ಧೂಮಪಾನ ಮತ್ತು ಮದ್ಯಪಾನ ಮಾಡದಿರುವುದು </p><p>* ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<blockquote>100ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ | ಮಿದುಳು ಆರೋಗ್ಯ ಚಿಕಿತ್ಸಾಲಯದಲ್ಲಿ 3 ಸಾವಿರ ಮಂದಿಗೆ ಚಿಕಿತ್ಸೆ</blockquote>.<p><strong>ಮಡಿಕೇರಿ:</strong> ಜಿಲ್ಲಾಸ್ಪತ್ರೆಯಲ್ಲಿರುವ ‘ಮಿದುಳು ಆರೋಗ್ಯ ಚಿಕಿತ್ಸಾಲಯ’ದಲ್ಲಿ ತಲೆನೋವು ಸೇರಿದಂತೆ ಮಿದುಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಿದುಳು ಆರೋಗ್ಯ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ ಡಾ.ಆನಂದ್ ತಿಳಿಸಿದರು.</p>.<p>ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮಿದುಳು ಆರೋಗ್ಯ ಉಪಕ್ರಮದ ವತಿಯಿಂದ ಮಂಗಳವಾರ ನಡೆದ ವಿಶ್ವ ಮಿದುಳು ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನರರೋಗಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚುತ್ತಿರುವುದನ್ನು ಗಮನಿಸಿದ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ತಲೆನೋವು, ಪಾರ್ಶ್ವವಾಯು, ಮೂರ್ಛೆರೋಗ, ಪಾರ್ಕಿನ್ಸನ್ ಕಾಯಿಲೆ ಮತ್ತು ಮರೆವಿನ ಕಾಯಿಲೆಗಳು ಕಂಡು ಬಂದಲ್ಲಿ ಈ ಚಿಕಿತ್ಸಾಲಯಕ್ಕೆ ಬಂದು ವೈದ್ಯರಿಗೆ ತೋರಿಸಿ ಉಚಿತ ಪರೀಕ್ಷೆ ಮತ್ತು ಚಿಕಿತ್ಸೆ ಪಡೆಯಬಹುದು’ ಎಂದರು.</p>.<p>ಕೊಡಗು ಜಿಲ್ಲೆಯಲ್ಲಿ ಮಿದುಳು ಆರೋಗ್ಯ ಕಾರ್ಯಕ್ರಮದಡಿಯಲ್ಲಿ 2024ರಿಂದ ಜೂನ್ 2025ನೇ ಸಾಲಿನವರೆಗೂ 3 ಸಾವಿರ ಮಂದಿ ಮಿದುಳು ಆರೋಗ್ಯ ಚಿಕಿತ್ಸಾಲಯದಲ್ಲಿ ಉಚಿತ ಚಿಕಿತ್ಸೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಮಿದುಳು ದೇಹದ ಅತ್ಯಂತ ಪ್ರಮುಖ ಅಂಗ. ದೈಹಿಕ ಚಲನೆಗಳಿಂದ ಹಿಡಿದು ಆಲೋಚನೆಗಳು ಭಾವನೆಗಳು ಮತ್ತು ಸ್ಮರಣೆಯವರೆಗೆ ಎಲ್ಲವನ್ನು ನಿಯಂತ್ರಿಸುವ ಅಂಗವಾಗಿದೆ ಎಂದು ಹೇಳಿದರು.</p>.<p>‘ವಿಶ್ವ ಮಿದುಳು ದಿನವನ್ನು ಆಚರಿಸುವ ಮೂಲಕ ಮಿದುಳಿನ ಮಹತ್ವ ಹಾಗೂ ಅದರ ಆರೋಗ್ಯ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಿದೆ. ಎಲ್ಲ ಸರ್ಕಾರಿ ಸಂಸ್ಥೆಗಳು, ಆರೋಗ್ಯ ವೃತ್ತಿಪರರು, ಆರೈಕೆದಾರರು, ನಾಗರಿಕರು ಎಲ್ಲರೂ ಸೇರಿ ಜಾಗೃತಿ ಮೂಡಿಸಿ ಕಾರ್ಯಕ್ರಮವನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಪ್ರಸಕ್ತ ಸಾಲಿಗೆ ‘ಎಲ್ಲಾ ವಯಸ್ಸಿನವರಿಗೂ ಮೆದುಳಿನ ಆರೋಗ್ಯ’ ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಹಿಂದೆ ಕೇವಲ ಹಿರಿಯರಷ್ಟೇ ಮಿದುಳಿನ ತೊಂದರೆಯಿಂದ ಬಳಲುತ್ತಿದ್ದರು. ಆದರೆ, ಈಗ ಎಲ್ಲ ವಯಸ್ಸಿನವರಲ್ಲೂ ಮಿದುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಡಲಾರಂಭಿಸಿವೆ ಎಂದರು.</p>.<p>ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಮಂಜುಳಾ ಮಾತನಾಡಿ, ‘ಓದಿನ ಕಡೆ ಗಮನ ಹರಿಸಬೇಕು. ಈ ಬಗೆಯ ಚಿಕಿತ್ಸಾಲಯ ಇದೆ ಎಂದು ಹಾಗೂ ಮಿದುಳು ಆರೋಗ್ಯ ಕುರಿತು ಮನೆಮನೆಗೂ ಜಾಗೃತಿ ಮೂಡಿಸಬೇಕು’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.</p>.<p>ಶುಶ್ರೂಷಕ ಅಧೀಕ್ಷಕಿ ವೀಣಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಮಿದುಳು ಆರೋಗ್ಯ ಕಾರ್ಯಕ್ರಮದ ತಂಡದ ವಿಕ್ರಂ, ಕಾವ್ಯಶ್ರೀ, ಪ್ರಿರ್ದೋಸ್ ಸುಲ್ತಾನ ಹಾಗೂ 100ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><blockquote>ಮಿದುಳು ಸರಿಯಾಗಿ ಕೆಲಸ ನಿರ್ವಹಿಸದಿದ್ದಲ್ಲಿ ಮನುಷ್ಯರು ಪರಾವಲಂಬಿಯಾಗಿ ಬೇರೆಯವರಿಗೆ ಹೊರೆಯಾಗಬೇಕಾಗುತ್ತದೆ. ಹಾಗಾಗಿ ಮಿದುಳಿನ ಆರೋಗ್ಯದ ಕುರಿತು ಎಲ್ಲರೂ ಆದ್ಯತೆ ಗಮನ ನೀಡಿ</blockquote><span class="attribution">ಡಾ.ಆನಂದ್ ಮಿದುಳು ಆರೋಗ್ಯ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ </span></div>.<p><strong>ಮಿದುಳಿನ ಆರೋಗ್ಯಕ್ಕೆ ಏನು ಮಾಡಬೇಕು?</strong> </p><p>*ಆರೋಗ್ಯಕರ ಜೀವನ ಶೈಲಿ </p><p>* ಕನಿಷ್ಠ 7ರಿಂದ 8 ಗಂಟೆವರೆಗೆ ನಿದ್ದೆ ಮಾಡುವುದು </p><p>* ಮಾನಸಿಕವಾಗಿ ಸಕ್ರಿಯರಾಗಲು ಓದಬೇಕು * ಒತ್ತಡವನ್ನು ನಿಯಂತ್ರಿಸಬೇಕು </p><p>* ಧೂಮಪಾನ ಮತ್ತು ಮದ್ಯಪಾನ ಮಾಡದಿರುವುದು </p><p>* ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>