ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಬ್ಸಿಡಿ ಹಣಕ್ಕೆ ಲಂಚ; ಕಚೇರಿ ಸಹಾಯಕಿ ಬಂಧನ

Last Updated 23 ನವೆಂಬರ್ 2022, 16:30 IST
ಅಕ್ಷರ ಗಾತ್ರ

ಮಡಿಕೇರಿ: ಟ್ಯಾಕ್ಸಿ ಖರೀದಿಗಾಗಿ ಅಲ್ಪಸಂಖ್ಯಾತರಿಗೆ ಸರ್ಕಾರ ನೀಡುವ ಸಬ್ಸಿಡಿ ಹಣ ಮಂಜೂರು ಮಾಡುವುದಕ್ಕಾಗಿ ₹ 10 ಸಾವಿರ ಲಂಚ ಪಡೆಯುತ್ತಿದ್ದ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿ ಸಹಾಯಕಿ ಲತಾ ಆಚಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕಿನ ವ್ಯಕ್ತಿಯೊಬ್ಬರು ನಿಗಮದಡಿ ಟ್ಯಾಕ್ಸಿಯನ್ನು ಖರೀದಿಸಿದ್ದರು. ಇವರಿಗೆ ಸಬ್ಸಿಡಿ ಹಣ ₹ 2.5 ಲಕ್ಷ ನೀಡಬೇಕಿತ್ತು. ಇದಕ್ಕಾಗಿ ಆರೋಪಿಯು ಶೇ 10ರಷ್ಟು ಲಂಚ ನೀಡಬೇಕು ಎಂದು ಕೇಳಿದ್ದರು. ಈ ಕುರಿತು ವ್ಯಕ್ತಿಯು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಈ ಸಂಬಂಧ ₹ 10 ಸಾವಿರ ಲಂಚ ತೆಗೆದುಕೊಳ್ಳುವಾಗ ಲತಾ ಆಚಾರ್ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಲೋಕಾಯುಕ್ತ ಮೈಸೂರು ವಿಭಾಗದ ಎಸ್‌.ಪಿ ಸುರೇಶ್‌ಬಾಬು ಮಾರ್ಗದರ್ಶನದಲ್ಲಿ ಕೊಡಗು ಜಿಲ್ಲೆಯ ಡಿವೈಎಸ್‌ಪಿ ಎಂ.ಎಸ್.ಪವನ್‌ಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT