ತಮ್ಮ ಹುಟ್ಟೂರಾದ ಬೂಕನಕೆರೆ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ಕಾರ್ತಿಕ ಅಮಾವಾಸ್ಯೆ ನಿಮಿತ್ತ ಗ್ರಾಮದಲ್ಲಿನ ಗ್ರಾಮದೇವತೆ ಗೋಗಲಮ್ಮ , ಕುಲದೇವತೆ ಅಕ್ಕಯ್ಯಮ್ಮ ಹಾಗೂ ಈಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಮನೆ ದೇವರು ಗವೀಮಠ ಸ್ವತಂತ್ರ ಸಿದ್ಧಲಿಂಗೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದರು.