<p><strong>ಮಡಿಕೇರಿ</strong>: ಕೆಎಸ್ಆರ್ಟಿಸಿಯ ನೂತನ ‘ಅಶ್ವಮೇಧ’ ಬಸ್ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ಮಡಿಕೇರಿ-ಸೋಮವಾರಪೇಟೆ-ಅರಕಲಗೋಡು-ಚೆನ್ನರಾಯಪಟ್ಟಣ ಮಾರ್ಗ ಪ್ರತಿ ದಿನ ಬೆಳಗ್ಗೆ 10.15ಕ್ಕೆ ಹೊರಟು ಸಂಜೆ 4.45 ಗಂಟೆಗೆ ಬೆಂಗಳೂರು ತಲುಪಲಿದೆ. ಮಡಿಕೇರಿ-ಸೋಮವಾರಪೇಟೆ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲು ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿತ್ತು, ಬೇಡಿಕೆಯನ್ನು ಈಡೇರಿಸಲಾಗಿದೆ’ ಎಂದರು.</p>.<p>ಮಡಿಕೇರಿ ಕೆಎಸ್ಆರ್ಟಿಸ ಘಟಕದಿಂದ ಸೋಮವಾರಪೇಟೆ ಮಾರ್ಗದಲ್ಲಿ 3 ಬಸ್ಗಳು, ಕುಶಾಲನಗರದಿಂದ 2 ಬಸ್ಗಳು ಸಂಚರಿಸುತ್ತಿವೆ ಎಂದು ತಿಳಿಸಿದರು.</p>.<p>ಮಡಿಕೇರಿ ಕೆಎಸ್ಆರ್ಟಿಸಿ ಘಟಕದಲ್ಲಿ 97 ಬಸ್ಗಳು ವಿವಿಧ ಮಾರ್ಗದಲ್ಲಿ ಸಂಚಾರ ಮಾಡುತ್ತಿವೆ. ಕುಶಾಲನಗರ ಕೆಎಸ್ಆರ್ಟಿಸಿ ಆರಂಭವಾದ ನಂತರ ಮತ್ತಷ್ಟು ಬಸ್ಗಳು ಸಂಚರಿಸಲಿವೆ ಎಂದು ಹೇಳಿದರು.</p>.<p>ಮಡಿಕೇರಿ ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕ ವೀರಭದ್ರಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೆಎಸ್ಆರ್ಟಿಸಿಯ ನೂತನ ‘ಅಶ್ವಮೇಧ’ ಬಸ್ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ಮಡಿಕೇರಿ-ಸೋಮವಾರಪೇಟೆ-ಅರಕಲಗೋಡು-ಚೆನ್ನರಾಯಪಟ್ಟಣ ಮಾರ್ಗ ಪ್ರತಿ ದಿನ ಬೆಳಗ್ಗೆ 10.15ಕ್ಕೆ ಹೊರಟು ಸಂಜೆ 4.45 ಗಂಟೆಗೆ ಬೆಂಗಳೂರು ತಲುಪಲಿದೆ. ಮಡಿಕೇರಿ-ಸೋಮವಾರಪೇಟೆ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲು ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿತ್ತು, ಬೇಡಿಕೆಯನ್ನು ಈಡೇರಿಸಲಾಗಿದೆ’ ಎಂದರು.</p>.<p>ಮಡಿಕೇರಿ ಕೆಎಸ್ಆರ್ಟಿಸ ಘಟಕದಿಂದ ಸೋಮವಾರಪೇಟೆ ಮಾರ್ಗದಲ್ಲಿ 3 ಬಸ್ಗಳು, ಕುಶಾಲನಗರದಿಂದ 2 ಬಸ್ಗಳು ಸಂಚರಿಸುತ್ತಿವೆ ಎಂದು ತಿಳಿಸಿದರು.</p>.<p>ಮಡಿಕೇರಿ ಕೆಎಸ್ಆರ್ಟಿಸಿ ಘಟಕದಲ್ಲಿ 97 ಬಸ್ಗಳು ವಿವಿಧ ಮಾರ್ಗದಲ್ಲಿ ಸಂಚಾರ ಮಾಡುತ್ತಿವೆ. ಕುಶಾಲನಗರ ಕೆಎಸ್ಆರ್ಟಿಸಿ ಆರಂಭವಾದ ನಂತರ ಮತ್ತಷ್ಟು ಬಸ್ಗಳು ಸಂಚರಿಸಲಿವೆ ಎಂದು ಹೇಳಿದರು.</p>.<p>ಮಡಿಕೇರಿ ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕ ವೀರಭದ್ರಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>