<p><strong>ಸೋಮವಾರಪೇಟೆ</strong>: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಡಿಕೇರಿ ಘಟಕದ ಸಮಸ್ಯೆ ಮುಂದುವರಿದಿದ್ದು, ಜಿಲ್ಲಾ ಘಟಕ ನಾಮಕಾವಸ್ಥೆಗೆ ಎಂಬಂತಾಗಿದ್ದು, ಸಾರ್ವಜನಿಕ ಸೇವೆಯಿಂದ ದೂರವೇ ಉಳಿದಿದೆ ಎನ್ನುವಂತಾಗಿದೆ.</p>.<p>ಪ್ರತಿನಿತ್ಯ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದ್ದು ಮಡಿಕೇರಿಯಿಂದ ಸೋಮವಾರಪೇಟೆಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಸರ್ಕಾರಿ ನೌಕರರು, ಖಾಸಗಿ ಉದ್ಯೋಗಕ್ಕೆ ತೆರಳುವವರು, ಶಾಲಾ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಮಡಿಕೇರಿಯಿಂದ ಸೋಮವಾರಪೇಟೆ ಭಾಗಕ್ಕೆ ಬೆಳಿಗ್ಗೆ 7.45 ರ ನಂತರ 9 ಗಂಟೆಯವರೆಗೆ ಬಸ್ ವ್ಯವಸ್ಥೆ ಇಲ್ಲ. 8.30ರ ಬಸ್ ವಾರದಲ್ಲಿ ಮೂರು ದಿವಸ ಇದ್ದರೆ ಉಳಿದ ನಾಲ್ಕು ದಿನಗಳು ಬರುವುದೇ ಇಲ್ಲ. ಬಸ್ ಒಳಗಡೆ ಶುಚಿತ್ವ ಇಲ್ಲದೆ ವಾರಗಳೇ ಕಳೆದಿರುತ್ತದೆ.</p>.<p>ಶಾಸಕ ಡಾ.ಮಂತರ್ಗೌಡರ ಉಪಸ್ಥಿತಿಯಲ್ಲಿ ಇತ್ತೀಚೆಗೆ ಸಭೆ ನಡೆದಿದೆ. ಆದರೆ ಡಿಪೋ ವ್ಯವಸ್ಥಾಪಕರು ಗಮನಹರಿಸುತ್ತಿಲ್ಲ. ಅದರಲ್ಲೂ ಸೋಮವಾರಪೇಟೆ ಭಾಗಕ್ಕೆ ಸಂಪೂರ್ಣ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಪ್ರತಿನಿತ್ಯ ಬಸ್ನಲ್ಲಿ ತೆರಳುತ್ತಿರುವ ನೌಕರರು ಮತ್ತು ವಿದ್ಯಾರ್ಥಿಗಳು ಪತ್ರಿಕೆಯೊಂದಿಗೆ ತಮ್ಮ ಅಳಲನ್ನು ವ್ಯಕ್ತ ಪಡಿಸಿದ್ದಾರೆ.</p>.<p>ಶನಿವಾರ ಬೆಳಿಗ್ಗೆ 7.45ರ ನಂತರ 8.45 ರವರೆಗೆ ಯಾವುದೇ ಬಸ್ ವ್ಯವಸ್ಥೆ ಇರಲಿಲ್ಲ. ನಂತರ ಬಂದ ಬಸ್ ಮಕ್ಕಂದೂರು ಬಳಿ ಕೆಟ್ಟು ನಿಂತಿದೆ. ಪ್ರಯಾಣಿಕರು ಸಂಸ್ಥೆಗೆ ಹಿಡಿಶಾಪ ಹಾಕುತ್ತಾ ನಂತರ 9.15ರ ಬಸ್ನಲ್ಲಿ ಪ್ರಯಾಣ ಬೆಳೆಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ</strong>: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಡಿಕೇರಿ ಘಟಕದ ಸಮಸ್ಯೆ ಮುಂದುವರಿದಿದ್ದು, ಜಿಲ್ಲಾ ಘಟಕ ನಾಮಕಾವಸ್ಥೆಗೆ ಎಂಬಂತಾಗಿದ್ದು, ಸಾರ್ವಜನಿಕ ಸೇವೆಯಿಂದ ದೂರವೇ ಉಳಿದಿದೆ ಎನ್ನುವಂತಾಗಿದೆ.</p>.<p>ಪ್ರತಿನಿತ್ಯ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದ್ದು ಮಡಿಕೇರಿಯಿಂದ ಸೋಮವಾರಪೇಟೆಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಸರ್ಕಾರಿ ನೌಕರರು, ಖಾಸಗಿ ಉದ್ಯೋಗಕ್ಕೆ ತೆರಳುವವರು, ಶಾಲಾ ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಮಡಿಕೇರಿಯಿಂದ ಸೋಮವಾರಪೇಟೆ ಭಾಗಕ್ಕೆ ಬೆಳಿಗ್ಗೆ 7.45 ರ ನಂತರ 9 ಗಂಟೆಯವರೆಗೆ ಬಸ್ ವ್ಯವಸ್ಥೆ ಇಲ್ಲ. 8.30ರ ಬಸ್ ವಾರದಲ್ಲಿ ಮೂರು ದಿವಸ ಇದ್ದರೆ ಉಳಿದ ನಾಲ್ಕು ದಿನಗಳು ಬರುವುದೇ ಇಲ್ಲ. ಬಸ್ ಒಳಗಡೆ ಶುಚಿತ್ವ ಇಲ್ಲದೆ ವಾರಗಳೇ ಕಳೆದಿರುತ್ತದೆ.</p>.<p>ಶಾಸಕ ಡಾ.ಮಂತರ್ಗೌಡರ ಉಪಸ್ಥಿತಿಯಲ್ಲಿ ಇತ್ತೀಚೆಗೆ ಸಭೆ ನಡೆದಿದೆ. ಆದರೆ ಡಿಪೋ ವ್ಯವಸ್ಥಾಪಕರು ಗಮನಹರಿಸುತ್ತಿಲ್ಲ. ಅದರಲ್ಲೂ ಸೋಮವಾರಪೇಟೆ ಭಾಗಕ್ಕೆ ಸಂಪೂರ್ಣ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಪ್ರತಿನಿತ್ಯ ಬಸ್ನಲ್ಲಿ ತೆರಳುತ್ತಿರುವ ನೌಕರರು ಮತ್ತು ವಿದ್ಯಾರ್ಥಿಗಳು ಪತ್ರಿಕೆಯೊಂದಿಗೆ ತಮ್ಮ ಅಳಲನ್ನು ವ್ಯಕ್ತ ಪಡಿಸಿದ್ದಾರೆ.</p>.<p>ಶನಿವಾರ ಬೆಳಿಗ್ಗೆ 7.45ರ ನಂತರ 8.45 ರವರೆಗೆ ಯಾವುದೇ ಬಸ್ ವ್ಯವಸ್ಥೆ ಇರಲಿಲ್ಲ. ನಂತರ ಬಂದ ಬಸ್ ಮಕ್ಕಂದೂರು ಬಳಿ ಕೆಟ್ಟು ನಿಂತಿದೆ. ಪ್ರಯಾಣಿಕರು ಸಂಸ್ಥೆಗೆ ಹಿಡಿಶಾಪ ಹಾಕುತ್ತಾ ನಂತರ 9.15ರ ಬಸ್ನಲ್ಲಿ ಪ್ರಯಾಣ ಬೆಳೆಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>