<p><strong>ಮಡಿಕೇರಿ</strong>: ಹಳೆ ಖಾಸಗಿ ಬಸ್ನಿಲ್ದಾಣದ ಬಳಿ ನಿರ್ಮಿಸಿದ್ದ ಧ್ವಜಸ್ತಂಭವನ್ನು ನಗರಸಭೆ ತೆರವುಗೊಳಿಸಿದ್ದು ಸರಿಯಲ್ಲ ಎಂದು ಕೊಡಗು ಜಿಲ್ಲಾ ಬಸ್ ಕಾರ್ಮಿಕರ ಸಂಘದ ಅಧ್ಯಕ್ಷ ಭರತ್ಕುಮಾರ್ ಖಂಡಿಸಿದರು.</p>.<p>ನಗರದಲ್ಲಿರುವ ಗುಂಡಿಗಳನ್ನು ಮುಚ್ಚುವ ಬದಲು, ರಸ್ತೆಬದಿಯಲ್ಲಿ ಬೆಳೆದಿರುವ ಮುಳ್ಳುಗಂಟಿ ಗಿಡಗಳನ್ನು ತೆರವುಗೊಳಿಸುವುದರ ಬದಲು ನಗರಸಭೆ ಅಧಿಕಾರಿಗಳು ರಾಷ್ಟ್ರೀಯ ಹಬ್ಬಗಳಲ್ಲಿ ಬಳಕೆ ಮಾಡುತ್ತಿದ್ದ ಧ್ವಜಸ್ತಂಭವನ್ನು ತೆರವುಗೊಳಿಸಿದ್ದಾರೆ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>ಬಸ್ನಿಲ್ದಾಣವನ್ನು ನಾವೇ ಸ್ವಚ್ಛಗೊಳಿಸುತ್ತಿದ್ದೇವೆ. ನಗರಸಭೆ ಸಿಬ್ಬಂದಿ ಇದರ ಸ್ವಚ್ಛತಾ ಕಾರ್ಯ ಮಾಡುತ್ತಿಲ್ಲ. ನಾವು ರಾಷ್ಟ್ರೀಯ ಹಬ್ಬಗಳ ಆಚರಣೆಗಾಗಿ ನಿರ್ಮಿಸಿದ್ದ ಧ್ವಜಸ್ತಂಭವನ್ನು ಏಕಾಏಕಿ ತೆರವುಗೊಳಿಸಿದ್ದು ಏಕೆ ಎಂದು ಪ್ರಶ್ನಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಕೆ.ಕೆ.ವಿಜಯ್, ಎ.ಎನ್.ಉಮೇಶ್, ಸುಲೇಮಾನ್, ಪುರುಷೋತ್ತಮ, ಎಚ್.ಎಸ್.ದೇವಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಹಳೆ ಖಾಸಗಿ ಬಸ್ನಿಲ್ದಾಣದ ಬಳಿ ನಿರ್ಮಿಸಿದ್ದ ಧ್ವಜಸ್ತಂಭವನ್ನು ನಗರಸಭೆ ತೆರವುಗೊಳಿಸಿದ್ದು ಸರಿಯಲ್ಲ ಎಂದು ಕೊಡಗು ಜಿಲ್ಲಾ ಬಸ್ ಕಾರ್ಮಿಕರ ಸಂಘದ ಅಧ್ಯಕ್ಷ ಭರತ್ಕುಮಾರ್ ಖಂಡಿಸಿದರು.</p>.<p>ನಗರದಲ್ಲಿರುವ ಗುಂಡಿಗಳನ್ನು ಮುಚ್ಚುವ ಬದಲು, ರಸ್ತೆಬದಿಯಲ್ಲಿ ಬೆಳೆದಿರುವ ಮುಳ್ಳುಗಂಟಿ ಗಿಡಗಳನ್ನು ತೆರವುಗೊಳಿಸುವುದರ ಬದಲು ನಗರಸಭೆ ಅಧಿಕಾರಿಗಳು ರಾಷ್ಟ್ರೀಯ ಹಬ್ಬಗಳಲ್ಲಿ ಬಳಕೆ ಮಾಡುತ್ತಿದ್ದ ಧ್ವಜಸ್ತಂಭವನ್ನು ತೆರವುಗೊಳಿಸಿದ್ದಾರೆ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>ಬಸ್ನಿಲ್ದಾಣವನ್ನು ನಾವೇ ಸ್ವಚ್ಛಗೊಳಿಸುತ್ತಿದ್ದೇವೆ. ನಗರಸಭೆ ಸಿಬ್ಬಂದಿ ಇದರ ಸ್ವಚ್ಛತಾ ಕಾರ್ಯ ಮಾಡುತ್ತಿಲ್ಲ. ನಾವು ರಾಷ್ಟ್ರೀಯ ಹಬ್ಬಗಳ ಆಚರಣೆಗಾಗಿ ನಿರ್ಮಿಸಿದ್ದ ಧ್ವಜಸ್ತಂಭವನ್ನು ಏಕಾಏಕಿ ತೆರವುಗೊಳಿಸಿದ್ದು ಏಕೆ ಎಂದು ಪ್ರಶ್ನಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಕೆ.ಕೆ.ವಿಜಯ್, ಎ.ಎನ್.ಉಮೇಶ್, ಸುಲೇಮಾನ್, ಪುರುಷೋತ್ತಮ, ಎಚ್.ಎಸ್.ದೇವಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>