ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಾನೂ ನಗರ ನಕ್ಸಲ್‌’: ಗಿರೀಶ್‌ ಕಾರ್ನಾಡ ವಿರುದ್ಧ ದೂರು

Last Updated 8 ಸೆಪ್ಟೆಂಬರ್ 2018, 13:34 IST
ಅಕ್ಷರ ಗಾತ್ರ

ಮಡಿಕೇರಿ: ‘ನಾನೂ ನಗರ ನಕ್ಸಲ್‌’ ಎಂದು ಹೇಳಿರುವ ಸಾಹಿತಿ ಗಿರೀಶ್‌ ಕಾರ್ನಾಡ ಅವರನ್ನು ಬಂಧಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ಮುಖಂಡ ಅಜಿತ್‌ಕುಮಾರ್‌ ಅವರು ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

‘ಕಾರ್ನಾಡ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು. ಕೊಡಗು ಜಿಲ್ಲೆಯ ನಕ್ಸಲ್‌ ಚಟುವಟಿಕೆಯಲ್ಲೂ ಭಾಗಿಯಾಗಿರುವ ಶಂಕೆಯಿದ್ದು, ಸೂಕ್ತ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

‘ನಕ್ಸಲ್‌ ಸಂಘಟನೆಯನ್ನು ನಿಷೇಧಿಸಿದ್ದರೂ ನಾನೂ ನಕ್ಸಲ್‌ ಎಂದು ಹೇಳುತ್ತಿರುವುದು ಕಾನೂನು ವಿರೋಧಿ ಕೃತ್ಯ. ಗುಜರಾತ್‌ ಮೇವಾನಿ ಕ್ಷೇತ್ರದ ಶಾಸಕ ಜಿಗ್ನೇಶ್‌ ಮೇವಾನಿ, ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್‌, ನಟ ಪ್ರಕಾಶ್‌ ರೈ, ಸ್ವಾಮಿ ಅಗ್ನಿವೇಶ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಅಜಿತ್‌ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT