<p><strong>ಮಡಿಕೇರಿ:</strong> ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ನಗರದ ಗೌಳಿ ಬೀದಿಯಲ್ಲಿ ಸೋಮವಾರ ಚಾಲನೆ ನೀಡಿದರು.</p>.<p>ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಈ ಮೂಲಕ ಆರಂಭವಾಗಿದ್ದು, ಒಟ್ಟು 1,131 ಮಂದಿ ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.</p>.<p>ಮೊದಲ ದಿನ ಕೆಲವೊಂದು ತಾಂತ್ರಿಕ ಅಡಚಣೆಗಳು ಕಂಡು ಬಂದರೂ ಸಮೀಕ್ಷಾ ಕಾರ್ಯಕ್ಕೆ ಹೆಚ್ಚಿನ ತೊಂದರೆಯಾಗಲಿಲ್ಲ. ಸುಗಮವಾಗಿ ಬಹುತೇಕ ಕಡೆ ಸಮೀಕ್ಷೆ ನಡೆಯಿತು.</p>.<p>ಎಷ್ಟು ಮನೆಗಳ ಸಮೀಕ್ಷೆ ನಡೆಯಿತು ಎಂಬ ಮಾಹಿತಿ ಸದ್ಯಕ್ಕೆ ದೊರಕಿಲ್ಲ. ಸೆ. 23ರಿಂದ ಸಮೀಕ್ಷೆ ಮಾಡಿದ ವಿವರಗಳು ನೇರವಾಗಿ ಜಿಲ್ಲಾಧಿಕಾರಿಯವರಿಗೆ ರವಾನೆಯಾಗುವ ಸಂಭವ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಮೀಕ್ಷಾ ಕಾರ್ಯಕ್ಕೆ ಯಾವುದೇ ತೊಂದರೆಯಾಗಿಲ್ಲ. ಸಮೀಕ್ಷಾ ಕಾರ್ಯ ಆರಂಭವಾಗಿದೆ’ ಎಂದರು.</p>.<p>ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶವನ್ನು ಈಡೇರಿಸಲು, ಅರ್ಹ ಹಿಂದುಳಿದ ವರ್ಗಗಳನ್ನು ನಿಖರವಾಗಿ ಗುರುತಿಸಿ, ಸರ್ಕಾರದ ಸೌಲಭ್ಯವನ್ನು ಸಮಪರ್ಕವಾಗಿ ತಲುಪಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸುವುದು ಬಹಳ ಮುಖ್ಯ. ಆ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವ ಭೋಸರಾಜು ಹೇಳಿದರು.</p>.<p>‘ಎಲ್ಲರೂ ಅವರವರ ಆತ್ಮಸಾಕ್ಷಿಗೆ ಅನುಗುಣವಾಗಿ ಮಾಹಿತಿ ನೀಡಿ. ಯಾರೋ ಹೇಳಿದರು ಎಂದು ಅವರ ಮಾತನ್ನು ಕೇಳದಿರಿ. ನಿಮಗೆ ಏನು ಅನ್ನಿಸುತ್ತೋ ಆ ಮಾಹಿತಿ ನೀಡಿ’ ಎಂದು ಸಲಹೆ ನೀಡಿದರು.</p>.<p>ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ, ಸಮೀಕ್ಷೆದಾರರು ಉದ್ಘಾಟನೆ ವೇಳೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ನಗರದ ಗೌಳಿ ಬೀದಿಯಲ್ಲಿ ಸೋಮವಾರ ಚಾಲನೆ ನೀಡಿದರು.</p>.<p>ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಈ ಮೂಲಕ ಆರಂಭವಾಗಿದ್ದು, ಒಟ್ಟು 1,131 ಮಂದಿ ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.</p>.<p>ಮೊದಲ ದಿನ ಕೆಲವೊಂದು ತಾಂತ್ರಿಕ ಅಡಚಣೆಗಳು ಕಂಡು ಬಂದರೂ ಸಮೀಕ್ಷಾ ಕಾರ್ಯಕ್ಕೆ ಹೆಚ್ಚಿನ ತೊಂದರೆಯಾಗಲಿಲ್ಲ. ಸುಗಮವಾಗಿ ಬಹುತೇಕ ಕಡೆ ಸಮೀಕ್ಷೆ ನಡೆಯಿತು.</p>.<p>ಎಷ್ಟು ಮನೆಗಳ ಸಮೀಕ್ಷೆ ನಡೆಯಿತು ಎಂಬ ಮಾಹಿತಿ ಸದ್ಯಕ್ಕೆ ದೊರಕಿಲ್ಲ. ಸೆ. 23ರಿಂದ ಸಮೀಕ್ಷೆ ಮಾಡಿದ ವಿವರಗಳು ನೇರವಾಗಿ ಜಿಲ್ಲಾಧಿಕಾರಿಯವರಿಗೆ ರವಾನೆಯಾಗುವ ಸಂಭವ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಮೀಕ್ಷಾ ಕಾರ್ಯಕ್ಕೆ ಯಾವುದೇ ತೊಂದರೆಯಾಗಿಲ್ಲ. ಸಮೀಕ್ಷಾ ಕಾರ್ಯ ಆರಂಭವಾಗಿದೆ’ ಎಂದರು.</p>.<p>ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶವನ್ನು ಈಡೇರಿಸಲು, ಅರ್ಹ ಹಿಂದುಳಿದ ವರ್ಗಗಳನ್ನು ನಿಖರವಾಗಿ ಗುರುತಿಸಿ, ಸರ್ಕಾರದ ಸೌಲಭ್ಯವನ್ನು ಸಮಪರ್ಕವಾಗಿ ತಲುಪಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸುವುದು ಬಹಳ ಮುಖ್ಯ. ಆ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವ ಭೋಸರಾಜು ಹೇಳಿದರು.</p>.<p>‘ಎಲ್ಲರೂ ಅವರವರ ಆತ್ಮಸಾಕ್ಷಿಗೆ ಅನುಗುಣವಾಗಿ ಮಾಹಿತಿ ನೀಡಿ. ಯಾರೋ ಹೇಳಿದರು ಎಂದು ಅವರ ಮಾತನ್ನು ಕೇಳದಿರಿ. ನಿಮಗೆ ಏನು ಅನ್ನಿಸುತ್ತೋ ಆ ಮಾಹಿತಿ ನೀಡಿ’ ಎಂದು ಸಲಹೆ ನೀಡಿದರು.</p>.<p>ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂತರ್ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ, ಸಮೀಕ್ಷೆದಾರರು ಉದ್ಘಾಟನೆ ವೇಳೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>