<p><strong>ಸೋಮವಾರಪೇಟೆ: ‘</strong>ಭಾರತ ಜಾತ್ಯತೀತ ರಾಷ್ಟ್ರವಾಗಿದೆ. ಆದರೆ, ಇಲ್ಲಿಯೂ ಜಾತೀಯ ವಿಜೃಂಭಣೆ ಮೇಳೈಸುತ್ತಿದೆ. ಸಮಾಜವನ್ನು ತಿದ್ದಬೇಕಿರುವ ಧಾರ್ಮಿಕ ಕ್ಷೇತ್ರ ಕೂಡ ಇದಕ್ಕೆ ಹೊರತಾಗಿಲ್ಲ’ ಎಂದು ಮುಳ್ಳೂರು ಮಠದ ಮಠಾಧೀಶ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. </p>.<p>ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಗುರುವಾರ ನಡೆದ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>12ನೇ ಶತಮಾನದಲ್ಲಿ ಬಸವಣ್ಣಾರಾದಿಯಾಗಿ ಎಲ್ಲ ಶಿವಶರಣರು ಜಾತಿಯ ವಿರುದ್ಧ ಹೋರಾಡಿ, ಸಮಾಜಕ್ಕೆ ಸಮಾನತೆಯನ್ನು ಪ್ರತಿಪಾದಿಸಿದರು. ಈಗ ಅದು ತದ್ವಿರುದ್ದವಾಗಿದೆ. ಇಂದು ಸಮಾಜದ ಯಾವುದೇ ಕ್ಷೇತ್ರದಲ್ಲಿಯಾದರೂ ಗುರುವಿದ್ದರೆ, ಅವರ ಮಾರ್ಗದರ್ಶನದಿಂದ ಮಾತ್ರ ಉನ್ನತಿ ಸಾಧಿಸಲು ಸಾಧ್ಯ ಎಂದರು. </p>.<p>ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ನಮ್ಮ ಸಮಾಜದಲ್ಲಿ ಗುರುಗಳಿಗೆ ವಿಶೇಷ ಗೌರವದ ಸ್ಥಾನವಿದೆ. ನಾವು ಏನಾದರೂ ಸಾಧಿಸಬೇಕಾದರೆ ಮುಂದೆ ಗುರಿ ಇರಬೇಕು, ಹಿಂದೆ ಗುರು ಇದ್ದಲ್ಲಿ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದರು.</p>.<p>ಸೋಮೇಶ್ವರ ದೇವಾಲಯದ ಅರ್ಚಕ ಚಿತ್ರಕುಮಾರ್ ಭಟ್, ನಿವೃತ್ತ ಶಿಕ್ಷಕಿ ತಂಗಮ್ಮ, ನಿವೃತ್ತ ಸೈನಿಕ ಚಂದ್ರಕುಮಾರ್, ಯೋಗ ಶಿಕ್ಷಕ ಪ್ರದೀಪ್ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ: ‘</strong>ಭಾರತ ಜಾತ್ಯತೀತ ರಾಷ್ಟ್ರವಾಗಿದೆ. ಆದರೆ, ಇಲ್ಲಿಯೂ ಜಾತೀಯ ವಿಜೃಂಭಣೆ ಮೇಳೈಸುತ್ತಿದೆ. ಸಮಾಜವನ್ನು ತಿದ್ದಬೇಕಿರುವ ಧಾರ್ಮಿಕ ಕ್ಷೇತ್ರ ಕೂಡ ಇದಕ್ಕೆ ಹೊರತಾಗಿಲ್ಲ’ ಎಂದು ಮುಳ್ಳೂರು ಮಠದ ಮಠಾಧೀಶ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. </p>.<p>ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಗುರುವಾರ ನಡೆದ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>12ನೇ ಶತಮಾನದಲ್ಲಿ ಬಸವಣ್ಣಾರಾದಿಯಾಗಿ ಎಲ್ಲ ಶಿವಶರಣರು ಜಾತಿಯ ವಿರುದ್ಧ ಹೋರಾಡಿ, ಸಮಾಜಕ್ಕೆ ಸಮಾನತೆಯನ್ನು ಪ್ರತಿಪಾದಿಸಿದರು. ಈಗ ಅದು ತದ್ವಿರುದ್ದವಾಗಿದೆ. ಇಂದು ಸಮಾಜದ ಯಾವುದೇ ಕ್ಷೇತ್ರದಲ್ಲಿಯಾದರೂ ಗುರುವಿದ್ದರೆ, ಅವರ ಮಾರ್ಗದರ್ಶನದಿಂದ ಮಾತ್ರ ಉನ್ನತಿ ಸಾಧಿಸಲು ಸಾಧ್ಯ ಎಂದರು. </p>.<p>ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ನಮ್ಮ ಸಮಾಜದಲ್ಲಿ ಗುರುಗಳಿಗೆ ವಿಶೇಷ ಗೌರವದ ಸ್ಥಾನವಿದೆ. ನಾವು ಏನಾದರೂ ಸಾಧಿಸಬೇಕಾದರೆ ಮುಂದೆ ಗುರಿ ಇರಬೇಕು, ಹಿಂದೆ ಗುರು ಇದ್ದಲ್ಲಿ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದರು.</p>.<p>ಸೋಮೇಶ್ವರ ದೇವಾಲಯದ ಅರ್ಚಕ ಚಿತ್ರಕುಮಾರ್ ಭಟ್, ನಿವೃತ್ತ ಶಿಕ್ಷಕಿ ತಂಗಮ್ಮ, ನಿವೃತ್ತ ಸೈನಿಕ ಚಂದ್ರಕುಮಾರ್, ಯೋಗ ಶಿಕ್ಷಕ ಪ್ರದೀಪ್ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>