<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಜಾತಿ ರಾಜಕೀಯ ನಡೆಯುವುದಿಲ್ಲ. ಇದು ಜಾತಿ ಕುರಿತ ಚುನಾವಣೆಯಲ್ಲ, ಇದು ದೇಶದ ಅಭಿವೃದ್ಧಿ ಮತ್ತು ಭದ್ರತೆ ಕುರಿತ ಚುನಾವಣೆ ಎಂದು ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ಜೈನಿ ಪ್ರತಿಪಾದಿಸಿದರು.</p>.<p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಂದು ಜಾತಿಯ ಮತಗಳನ್ನು ಕೇಳಿರುವುದು ಸರಿಯಲ್ಲ. ಅದಕ್ಕೆ ಪೂರಕವಾಗಿ ಕೆಲವರು ಜಾತಿಯ ಆಧಾರದ ಮೇಲೆ ಬೆಂಬಲಿಸಿ ಎಂದು ಕರೆ ನೀಡುತ್ತಿರುವುದೂ ಸರಿಯಲ್ಲ. ಲೋಕಸಭಾ ಚುನಾವಣೆಯಲ್ಲಿ ಜಾತಿ ಮುಖ್ಯವೇ ಅಲ್ಲ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಅರೆಭಾಷೆ ಮತ್ತು ಒಕ್ಕಲಿಗ ಸಮುದಾಯದ ಹೆಚ್ಚಿನವರು ರೈತರಾಗಿದ್ದಾರೆ. ಪ್ರಧಾನಿಯವರು ರೈತರಿಗೆ ನೀಡುವ ಕೊಡುಗೆಗಳನ್ನು ಅವರು ಮರೆತಿಲ್ಲ ಎಂದೂ ಅವರು ಹೇಳಿದರು.</p>.<p>ಪಕ್ಷದ ಜಿಲ್ಲಾ ವಕ್ತಾರ ತಳೂರು ಕಿಶೋರ್ಕುಮಾರ್ ಮಾತನಾಡಿ, ‘ಪ್ರತಾಪಸಿಂಹ ಅವರನ್ನೇ ಟೀಕಿಸಿದ್ದ ಲಕ್ಷ್ಮಣ್ ಅವರಿಗೆ ಆಗ ಜಾತಿಪ್ರೇಮ ಎಲ್ಲಿ ಹೋಗಿತ್ತು’ ಎಂದು ಪ್ರಶ್ನಿಸಿದರು.</p>.<p>ಮುಖಂಡರಾದ ಕಾಂಗೀರ ಸತೀಶ್, ಕವನ್ ಕಾವೇರಪ್ಪ, ವಿಜಯ್ ಹಾಗೂ ಬೆಪ್ಪುರನ ಮೇದಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಜಾತಿ ರಾಜಕೀಯ ನಡೆಯುವುದಿಲ್ಲ. ಇದು ಜಾತಿ ಕುರಿತ ಚುನಾವಣೆಯಲ್ಲ, ಇದು ದೇಶದ ಅಭಿವೃದ್ಧಿ ಮತ್ತು ಭದ್ರತೆ ಕುರಿತ ಚುನಾವಣೆ ಎಂದು ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ಜೈನಿ ಪ್ರತಿಪಾದಿಸಿದರು.</p>.<p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಂದು ಜಾತಿಯ ಮತಗಳನ್ನು ಕೇಳಿರುವುದು ಸರಿಯಲ್ಲ. ಅದಕ್ಕೆ ಪೂರಕವಾಗಿ ಕೆಲವರು ಜಾತಿಯ ಆಧಾರದ ಮೇಲೆ ಬೆಂಬಲಿಸಿ ಎಂದು ಕರೆ ನೀಡುತ್ತಿರುವುದೂ ಸರಿಯಲ್ಲ. ಲೋಕಸಭಾ ಚುನಾವಣೆಯಲ್ಲಿ ಜಾತಿ ಮುಖ್ಯವೇ ಅಲ್ಲ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಅರೆಭಾಷೆ ಮತ್ತು ಒಕ್ಕಲಿಗ ಸಮುದಾಯದ ಹೆಚ್ಚಿನವರು ರೈತರಾಗಿದ್ದಾರೆ. ಪ್ರಧಾನಿಯವರು ರೈತರಿಗೆ ನೀಡುವ ಕೊಡುಗೆಗಳನ್ನು ಅವರು ಮರೆತಿಲ್ಲ ಎಂದೂ ಅವರು ಹೇಳಿದರು.</p>.<p>ಪಕ್ಷದ ಜಿಲ್ಲಾ ವಕ್ತಾರ ತಳೂರು ಕಿಶೋರ್ಕುಮಾರ್ ಮಾತನಾಡಿ, ‘ಪ್ರತಾಪಸಿಂಹ ಅವರನ್ನೇ ಟೀಕಿಸಿದ್ದ ಲಕ್ಷ್ಮಣ್ ಅವರಿಗೆ ಆಗ ಜಾತಿಪ್ರೇಮ ಎಲ್ಲಿ ಹೋಗಿತ್ತು’ ಎಂದು ಪ್ರಶ್ನಿಸಿದರು.</p>.<p>ಮುಖಂಡರಾದ ಕಾಂಗೀರ ಸತೀಶ್, ಕವನ್ ಕಾವೇರಪ್ಪ, ವಿಜಯ್ ಹಾಗೂ ಬೆಪ್ಪುರನ ಮೇದಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>