<p><strong>ಕುಶಾಲನಗರ</strong>: ಪಟ್ಟಣದ ಟೋಲ್ ಗೇಟ್ನಲ್ಲಿರುವ ಕಾವೇರಿ ದೇವಸ್ಥಾನದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಹುತ್ತರಿ ಹುಣ್ಣಿಮೆ ಹಾಗೂ ಹುತ್ತರಿ ಹಬ್ಬದ ಅಂಗವಾಗಿ ಗುರುವಾರ ರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು.</p>.<p>ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿವಿಧ ಪುಷ್ಪ ಹಾಗೂ ವಸ್ತ್ರಗಳಿಂದ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿ ಮಹಾ ಆರತಿ ಬೆಳಗಲಾಯಿತು.</p>.<p>ಉದ್ಯಮಿ ಬೆಂಗಳೂರಿನ ಸುನಂದ ಕೌಶಿಕ್ ಹಾಗೂ ರುದ್ರೇಶ್ ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿದರು. ಸುನಂದ ಹಾಗೂ ಕುಟುಂಬಸ್ಥರು ಕಾವೇರಿ ಮಾತೆಗೆ ವಸ್ತ್ರದಾನ ಮಾಡಿದರು.</p>.<p>ಪಿರಿಯಾಪಟ್ಟಣ ಪುರಸಭೆ ಸದಸ್ಯ ಆನಂದ್ ಮಾತನಾಡಿ, ‘ಜೀವನದಿ ಕಾವೇರಿಗೆ ತನ್ನದೆ ಪಾವಿತ್ರ್ಯತೆ ಇದೆ. ಈ ಬಗ್ಗೆ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಜೀವನದಿ ಕಾವೇರಿಗೆ ಕಲುಷಿತ ನೀರನ್ನು ಹರಿಸಬಾರದು. ನದಿಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ಬಾರವಿ ಕನ್ನಡ ಅಭಿಮಾನಿಗಳ ಸಂಘದ ಸಂಚಾಲಕ ರವೀಂದ್ರ ಪ್ರಸಾದ್ ಮಾತನಾಡಿ, ಜೀವನದಿ ಕಾವೇರಿ ಮತ್ತು ಪರಿಸರದ ಉಳಿವಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ. ಕಾವೇರಿ ನದಿಯ ಸ್ವಚ್ಛತೆ ಹಾಗೂ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕರಿಸಿ ಸ್ವಚ್ಛ ಪರಿಸರದ ಉಳಿವಿಗೆ ಸಹಕರಿಸುವಂತೆ ಮನವಿ ಮಾಡಿದರು.</p>.<p>ನಂತರ, ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.</p>.<p>ಈ ವೇಳೆ ಬಾರವಿ ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಬಬೀಂದ್ರ ಪ್ರಸಾದ್, ಸಂಘಟನಾ ಸಂಚಾಲಕ ವಿಜಯೇಂದ್ರ ಪ್ರಸಾದ್ ಮುಖಂಡರಾದ ಆವರ್ತಿ ಸೋಮಶೇಖರ್, ಈ.ಟಿ.ಚಂದ್ರಣ್ಣ, ಶಂಕರ್, ತಿಲಕ್ಪುಜಾರಿ, ರಮೇಶ್ ಆವರ್ತಿ, ಮಣಿಯಣ್ಣ, ರುದ್ರೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ</strong>: ಪಟ್ಟಣದ ಟೋಲ್ ಗೇಟ್ನಲ್ಲಿರುವ ಕಾವೇರಿ ದೇವಸ್ಥಾನದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಹುತ್ತರಿ ಹುಣ್ಣಿಮೆ ಹಾಗೂ ಹುತ್ತರಿ ಹಬ್ಬದ ಅಂಗವಾಗಿ ಗುರುವಾರ ರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು.</p>.<p>ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿವಿಧ ಪುಷ್ಪ ಹಾಗೂ ವಸ್ತ್ರಗಳಿಂದ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿ ಮಹಾ ಆರತಿ ಬೆಳಗಲಾಯಿತು.</p>.<p>ಉದ್ಯಮಿ ಬೆಂಗಳೂರಿನ ಸುನಂದ ಕೌಶಿಕ್ ಹಾಗೂ ರುದ್ರೇಶ್ ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿದರು. ಸುನಂದ ಹಾಗೂ ಕುಟುಂಬಸ್ಥರು ಕಾವೇರಿ ಮಾತೆಗೆ ವಸ್ತ್ರದಾನ ಮಾಡಿದರು.</p>.<p>ಪಿರಿಯಾಪಟ್ಟಣ ಪುರಸಭೆ ಸದಸ್ಯ ಆನಂದ್ ಮಾತನಾಡಿ, ‘ಜೀವನದಿ ಕಾವೇರಿಗೆ ತನ್ನದೆ ಪಾವಿತ್ರ್ಯತೆ ಇದೆ. ಈ ಬಗ್ಗೆ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಜೀವನದಿ ಕಾವೇರಿಗೆ ಕಲುಷಿತ ನೀರನ್ನು ಹರಿಸಬಾರದು. ನದಿಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ಬಾರವಿ ಕನ್ನಡ ಅಭಿಮಾನಿಗಳ ಸಂಘದ ಸಂಚಾಲಕ ರವೀಂದ್ರ ಪ್ರಸಾದ್ ಮಾತನಾಡಿ, ಜೀವನದಿ ಕಾವೇರಿ ಮತ್ತು ಪರಿಸರದ ಉಳಿವಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ. ಕಾವೇರಿ ನದಿಯ ಸ್ವಚ್ಛತೆ ಹಾಗೂ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕರಿಸಿ ಸ್ವಚ್ಛ ಪರಿಸರದ ಉಳಿವಿಗೆ ಸಹಕರಿಸುವಂತೆ ಮನವಿ ಮಾಡಿದರು.</p>.<p>ನಂತರ, ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.</p>.<p>ಈ ವೇಳೆ ಬಾರವಿ ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಬಬೀಂದ್ರ ಪ್ರಸಾದ್, ಸಂಘಟನಾ ಸಂಚಾಲಕ ವಿಜಯೇಂದ್ರ ಪ್ರಸಾದ್ ಮುಖಂಡರಾದ ಆವರ್ತಿ ಸೋಮಶೇಖರ್, ಈ.ಟಿ.ಚಂದ್ರಣ್ಣ, ಶಂಕರ್, ತಿಲಕ್ಪುಜಾರಿ, ರಮೇಶ್ ಆವರ್ತಿ, ಮಣಿಯಣ್ಣ, ರುದ್ರೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>