ವಿರಾಜಪೇಟೆಯ ಗೌರಿಗಣೇಶೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿದರು
22 ಗಣೇಶೋತ್ಸವ ಸಮಿತಿಯ ಸದಸ್ಯರು ಭಾಗಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಮಯಾವಕಾಶಕ್ಕೆ ಬೇಡಿಕೆ 10 ದಿನಗಳ ಕಾಲ ಅದ್ದೂರಿಯಾಗಿ ನಡೆಯುವ ಗಣೇಶೋತ್ಸವ
ರಾತ್ರಿ 10ರ ನಂತರ ಧ್ವನಿವರ್ಧಕದ ಬಳಕೆ ಬೇಡ
‘ನ್ಯಾಯಾಲಯದ ಆದೇಶದಂತೆ ರಾತ್ರಿ 10ರ ಬಳಿಕ ಧ್ವನಿವರ್ಧಕ ಬಳಸುವಂತಿಲ್ಲ. ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಮಾತ್ರ ಧ್ವನಿವರ್ಧಕ ಬಳಸಬಹುದಾಗಿದೆ. ಕಳೆದ ಬಾರಿ ಉತ್ಸವದ ಸಂದರ್ಭ ಕಾನೂನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಡಿಕೇರಿ ಹಾಗೂ ಗೋಣಿಕೊಪ್ಪಲಿನಲ್ಲಿ ಪ್ರಕರಣ ದಾಖಲಾಗಿದೆ. ಆದ್ದರಿಂದ ಕಾನೂನು ಉಲ್ಲಂಘನೆಯಾಗದಂತೆ ಉತ್ಸವ ಆಚರಣೆಯಾಗಬೇಕು. ವಿರಾಜಪೇಟೆ ಉಪವಿಭಾಗದಲ್ಲಿ 101 ಸ್ಥಳಗಳಲ್ಲಿ ಸಾರ್ವಜನಿಕವಾಗಿ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ’ ಎಂದು ಡಿವೈಎಸ್ಪಿ ಮೋಹನ್ ಕುಮಾರ್ ಹೇಳಿದರು.
ಪಿಓಪಿ ಮೂರ್ತಿಗಳ ನಿಷೇಧ
ಪುರಸಭೆಯ ಮುಖ್ಯಾಧಿಕಾರಿ ಚಂದ್ರಕುಮಾರ್ ಮಾತನಾಡಿ ‘ಜಲಮಾಲಿನ್ಯ ಮಂಡಳಿಯ ಆದೇಶದಂತೆ ಪಿ.ಒ.ಪಿ ಮೂರ್ತಿಗಳನ್ನು ನಿಷೇಧಿಸಲಾಗಿದ್ದು ನೈಜ ಮಣ್ಣಿನಿಂದ ನಿರ್ಮಿಸಲಾದ ಮೂರ್ತಿಗಳನ್ನೆ ಎಲ್ಲಾ ಸಮಿತಿಗಳು ಬಳಸಬೇಕು. ಮೂರ್ತಿಗಳ ವಿಸರ್ಜನೆಯ ಸಂದರ್ಭ ಜಲಮೂಲಗಳಲ್ಲಿ ಮೂರ್ತಿಗಳನ್ನು ಹೊರತುಪಡಿಸಿ ಹೂವು ಹಾಗೂ ಇತರ ವಸ್ತುಗಳನ್ನು ಜಲಮೂಲಗಳಲ್ಲಿ ಹಾಕುವಂತಿಲ್ಲ. ಉತ್ಸವ ಸಮಿತಿಗಳ ಅರ್ಜಿಯನ್ನು ಏಕಗವಾಕ್ಷಿ ಕೇಂದ್ರದ ಮೂಲಕ ವಿಲೇವಾರಿ ಮಾಡಲಾಗುತ್ತದೆ’ ಎಂದರು.