<p><strong>ಮಡಿಕೇರಿ:</strong> ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅನ್ನು ಸೋಲಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಕರೆ ನೀಡಿದೆ.</p>.<p>ಸಮಿತಿಯ ಸಂಚಾಲಕರಾದ ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರೆಗೋಡು, ವಿ.ನಾಗರಾಜ್, ಜನಾರ್ದನ್, ಶಿವಕುಮಾರ್ ಆಡುಗೋಡಿ, ಪಾಲಾಕ್ಷ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು.</p>.<p>ಇಂದೂಧರ ಹೊನ್ನಾಪುರ ಮಾತನಾಡಿ, ‘ಕಾರ್ಪೊರೇಟ್ ವಲಯಕ್ಕೆ ದೇಶದ ಸಂಪತ್ತನ್ನು ಮಾರಾಟ ಮಾಡಲಾಗುತ್ತಿದೆ. ಸಂವಿಧಾನದ ಆಶಯಗಳಿಗೆ ವಿರೋಧವಾಗಿ ನಡೆದುಕೊಳ್ಳಲಾಗುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಿ ರಾಜ್ಯಗಳನ್ನು ತಬ್ಬಲಿಗಳನ್ನಾಗಿ ಮಾಡುತ್ತಿದೆ’ ಎಂದು ಕಿಡಿಕಾರಿದರು. </p>.<p>‘ದೇಶವನ್ನು ಹಿಂದಕ್ಕೆ ಚಲಿಸುವ ಹಾಗೂ ದೇಶವನ್ನು ಅಧೋಗತಿಗೆ ಇಳಿಸುವ ಕೆಲಸವನ್ನು ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿದೆ. ಅದು ಅಧಿಕಾರಕ್ಕೆ ಬರುವ ಮುನ್ನ ನೀಡಿದ ಯಾವುದೇ ಆಶ್ವಾಸನೆಗಳನ್ನೂ ಈಡೇರಿಸಿಲ್ಲ’ ಎಂದು ಟೀಕಿಸಿದರು.</p>.<p>‘ಜಾತಿ, ಜಾತಿಯ ನಡುವೆ, ಧರ್ಮ, ಧರ್ಮದ ನಡುವೆ ಜಗಳ ಸೃಷ್ಟಿಸಲಾಗುತ್ತಿದೆ. ರಾಮರಾಜ್ಯ ಮಾಡುತ್ತೇವೆ ಎಂದು ಹೇಳಿ ಜನರ ನೆಮ್ಮದಿಯ ಬದುಕಿಗೆ ಬೆಂಕಿ ಇಡುವ ಕೆಲಸ ಆಗುತ್ತಿದೆ’ ಎಂದು ಅಸಮಾಧಾನ ವಕ್ತಪಡಿಸಿದರು.</p>.<p>ಗುರುಪ್ರಸಾದ್ ಕೆರಗೋಡು ಮಾತನಾಡಿ, ‘ಈಗ ದೇಶದಲ್ಲಿ ಪ್ರಜಾಪ್ರಭುತ್ವ ಉಸಿರುಗಟ್ಟುವ ವಾತಾವರಣ ಇದೆ. ಸಾಮಾಜಿಕ ಹೋರಾಟಗಾರರನ್ನು ದೇಶ ದ್ರೋಹದ ಆರೋಪ ಹೊರಿಸಿ ಜೈಲಿಗೆ ಕಳುಹಿಸಲಾಗುತ್ತಿದೆ. 10 ವರ್ಷದಲ್ಲಿ ನಿರಂಕುಶ ಪ್ರಭುತ್ವದತ್ತ ದೇಶ ಹೆಜ್ಜೆ ಹಾಕುತ್ತಿದೆ’ ಎಂದು ಹೇಳಿದರು. </p>.<p>ವಿ.ನಾಗರಾಜ್ ಮಾತನಾಡಿ, ‘ಚಳವಳಿಗಾರರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದೆ. ಪ್ರಜಾಪ್ರಭುತ್ವ ರಕ್ಷಿಸಬೇಕಿದೆ. ಅದಕ್ಕಾಗಿ ಕಾಂಗ್ರೆಸ್ಗೆ ಮತ ನೀಡಬೇಕು’ ಎಂದರು.</p>.<p>‘ಕಾಂಗ್ರೆಸ್ ಕನಿಷ್ಠ ಕೆಲಸವನ್ನಾದರೂ ಮಾಡುತ್ತಿದೆ. ₹ 2 ಸಾವಿರ ಹಣವನ್ನು ಮಹಿಳೆಯರಿಗೆ ನೀಡುತ್ತಿದೆ. ಅಕ್ಕಿ ಕೊಡುತ್ತಿದೆ. ಸುಳ್ಳು ಭರವಸೆಗಳನ್ನು ನೀಡುತ್ತಿರುವ ಬಿಜೆಪಿಗಿಂತ ಕಾಂಗ್ರೆಸ್ಗೆ ಮತ ನೀಡುವುದೇ ಉತ್ತಮ’ ಎಂದು ಪ್ರತಿಪಾದಿಸಿದರು.</p>.<blockquote>ಕಾರ್ಪೊರೇಟ್ ವಲಯಕ್ಕೆ ದೇಶದ ಸಂಪತ್ತನ್ನು ಮಾರಾಟ: ಆರೋಪ ಧರ್ಮ, ಧರ್ಮದ ನಡುವೆ ಜಗಳ ಸೃಷ್ಟಿಸಲಾಗುತ್ತಿದೆ: ದೂರು</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅನ್ನು ಸೋಲಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಕರೆ ನೀಡಿದೆ.</p>.<p>ಸಮಿತಿಯ ಸಂಚಾಲಕರಾದ ಇಂದೂಧರ ಹೊನ್ನಾಪುರ, ಗುರುಪ್ರಸಾದ್ ಕೆರೆಗೋಡು, ವಿ.ನಾಗರಾಜ್, ಜನಾರ್ದನ್, ಶಿವಕುಮಾರ್ ಆಡುಗೋಡಿ, ಪಾಲಾಕ್ಷ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು.</p>.<p>ಇಂದೂಧರ ಹೊನ್ನಾಪುರ ಮಾತನಾಡಿ, ‘ಕಾರ್ಪೊರೇಟ್ ವಲಯಕ್ಕೆ ದೇಶದ ಸಂಪತ್ತನ್ನು ಮಾರಾಟ ಮಾಡಲಾಗುತ್ತಿದೆ. ಸಂವಿಧಾನದ ಆಶಯಗಳಿಗೆ ವಿರೋಧವಾಗಿ ನಡೆದುಕೊಳ್ಳಲಾಗುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಿ ರಾಜ್ಯಗಳನ್ನು ತಬ್ಬಲಿಗಳನ್ನಾಗಿ ಮಾಡುತ್ತಿದೆ’ ಎಂದು ಕಿಡಿಕಾರಿದರು. </p>.<p>‘ದೇಶವನ್ನು ಹಿಂದಕ್ಕೆ ಚಲಿಸುವ ಹಾಗೂ ದೇಶವನ್ನು ಅಧೋಗತಿಗೆ ಇಳಿಸುವ ಕೆಲಸವನ್ನು ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿದೆ. ಅದು ಅಧಿಕಾರಕ್ಕೆ ಬರುವ ಮುನ್ನ ನೀಡಿದ ಯಾವುದೇ ಆಶ್ವಾಸನೆಗಳನ್ನೂ ಈಡೇರಿಸಿಲ್ಲ’ ಎಂದು ಟೀಕಿಸಿದರು.</p>.<p>‘ಜಾತಿ, ಜಾತಿಯ ನಡುವೆ, ಧರ್ಮ, ಧರ್ಮದ ನಡುವೆ ಜಗಳ ಸೃಷ್ಟಿಸಲಾಗುತ್ತಿದೆ. ರಾಮರಾಜ್ಯ ಮಾಡುತ್ತೇವೆ ಎಂದು ಹೇಳಿ ಜನರ ನೆಮ್ಮದಿಯ ಬದುಕಿಗೆ ಬೆಂಕಿ ಇಡುವ ಕೆಲಸ ಆಗುತ್ತಿದೆ’ ಎಂದು ಅಸಮಾಧಾನ ವಕ್ತಪಡಿಸಿದರು.</p>.<p>ಗುರುಪ್ರಸಾದ್ ಕೆರಗೋಡು ಮಾತನಾಡಿ, ‘ಈಗ ದೇಶದಲ್ಲಿ ಪ್ರಜಾಪ್ರಭುತ್ವ ಉಸಿರುಗಟ್ಟುವ ವಾತಾವರಣ ಇದೆ. ಸಾಮಾಜಿಕ ಹೋರಾಟಗಾರರನ್ನು ದೇಶ ದ್ರೋಹದ ಆರೋಪ ಹೊರಿಸಿ ಜೈಲಿಗೆ ಕಳುಹಿಸಲಾಗುತ್ತಿದೆ. 10 ವರ್ಷದಲ್ಲಿ ನಿರಂಕುಶ ಪ್ರಭುತ್ವದತ್ತ ದೇಶ ಹೆಜ್ಜೆ ಹಾಕುತ್ತಿದೆ’ ಎಂದು ಹೇಳಿದರು. </p>.<p>ವಿ.ನಾಗರಾಜ್ ಮಾತನಾಡಿ, ‘ಚಳವಳಿಗಾರರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದೆ. ಪ್ರಜಾಪ್ರಭುತ್ವ ರಕ್ಷಿಸಬೇಕಿದೆ. ಅದಕ್ಕಾಗಿ ಕಾಂಗ್ರೆಸ್ಗೆ ಮತ ನೀಡಬೇಕು’ ಎಂದರು.</p>.<p>‘ಕಾಂಗ್ರೆಸ್ ಕನಿಷ್ಠ ಕೆಲಸವನ್ನಾದರೂ ಮಾಡುತ್ತಿದೆ. ₹ 2 ಸಾವಿರ ಹಣವನ್ನು ಮಹಿಳೆಯರಿಗೆ ನೀಡುತ್ತಿದೆ. ಅಕ್ಕಿ ಕೊಡುತ್ತಿದೆ. ಸುಳ್ಳು ಭರವಸೆಗಳನ್ನು ನೀಡುತ್ತಿರುವ ಬಿಜೆಪಿಗಿಂತ ಕಾಂಗ್ರೆಸ್ಗೆ ಮತ ನೀಡುವುದೇ ಉತ್ತಮ’ ಎಂದು ಪ್ರತಿಪಾದಿಸಿದರು.</p>.<blockquote>ಕಾರ್ಪೊರೇಟ್ ವಲಯಕ್ಕೆ ದೇಶದ ಸಂಪತ್ತನ್ನು ಮಾರಾಟ: ಆರೋಪ ಧರ್ಮ, ಧರ್ಮದ ನಡುವೆ ಜಗಳ ಸೃಷ್ಟಿಸಲಾಗುತ್ತಿದೆ: ದೂರು</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>