ಕುಶಾಲನಗರ: ಸಮೀಪದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳೂರು ಸುಣ್ಣದಕೆರೆಯಲ್ಲಿ ಚಾಮುಂಡೇಶ್ವರಿ ಮತ್ತು ಗುಳಿಗ ದೇವರ ವಾರ್ಷಿಕ ಪೂಜೋತ್ಸವ ಎರಡು ದಿನ ಶ್ರದ್ಧಾಭಕ್ತಿಯಿಂದ ನಡೆಯಿತು.
ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ಅರ್ಚಕ ಬಾಬು ಅವರ ನೇತೃತ್ವದಲ್ಲಿ ನೆರವೇರಿದವು. ಶೀಘ್ರ ಮಳೆಯಾಗಲೆ ಎಂದು ವಿಶೇಷವಾಗಿ ಪ್ರಾರ್ಥಿಸಲಾಯಿತು. ನೆರೆದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
ಈ ಸಂದರ್ಭ ದೇವಾಲಯ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು.