<p><strong>ಮಡಿಕೇರಿ</strong>: ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಂಗಳವಾರ ಕೊಡಗು ಜಿಲ್ಲೆಯ ಪೆರಾಜೆ, ಚೆಂಬು, ಸಂಪಾಜೆ, ಮದೆನಾಡು ಹಾಗೂ ಮಡಿಕೇರಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.</p>.<p>ಈ ವೇಳೆ ಅವರು ಚೆಂಬು ಗ್ರಾಮಕ್ಕೆ ಬಿಎಸ್ಎನ್ಎಲ್ ಅಧಿಕಾರಿಗಳನ್ನು ಕರೆಸಿಕೊಂಡು ತಕ್ಷಣವೇ 2 ಟವರ್ಗಳನ್ನು ನಿರ್ಮಿಸಿಕೊಡಬೇಕು ಎಂದು ಸೂಚಿಸಿದರು.</p>.<p>ಜನರು ಮತ್ತೊಂದು ಟವರ್ ಅಗತ್ಯ ಇದೆ ಎಂದು ಇದೇ ವೇಳೆ ಮನವಿ ಮಾಡಿದರು. ಅಧಿಕಾರಿಗಳು ಸಂಜೆಯವರೆಗೂ ಗ್ರಾಮದಲ್ಲೇ ಇದ್ದು, ನೂತನ ಟವರ್ಗಳ ನಿರ್ಮಾಣಕ್ಕೆ ಜಾಗ ಗುರುತು ಮಾಡುವ ಪ್ರಕ್ರಿಯೆ ನಡೆಸಿದರು.</p>.<p>ಚೆಂಬು ಗ್ರಾಮದಲ್ಲಿ ಅಭಿನಂದನೆ ಸ್ವೀಕರಿಸಿದ ಯದವೀರ್ ಅವರಿಗೆ ದಬ್ಬಡ್ಕ ಸಮೀಪ ಸೇತುವೆ ನಿರ್ಮಾಣ ಮಾಡಿಕೊಡಬೇಕು ಎಂದು ಜನರು ಮನವಿ ಮಾಡಿದರು. ಈಗಾಗಲೇ ನಿರ್ಮಲಾ ಸೀತಾರಾಮನ್ ಅವರಿಂದ ₹ 1 ಕೋಟಿ ಅನುದಾನ ಬಂದಿದೆ. ಆದರೆ, ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ನೀಡದೇ ಇರುವುದು ಕಾಮಗಾರಿಗೆ ತೊಡಕಾಗಿದೆ ಎಂಬ ಅಂಶವನ್ನು ಗಮನಕ್ಕೆ ತಂದರು.</p>.<p>ಜೊತೆಗೆ, ಚೆಂಬು ಗ್ರಾಮವನ್ನು ದತ್ತು ತೆಗೆದುಕೊಂಡು ಅಥವಾ ವಿಶೇಷವಾಗಿ ಪರಿಗಣಿಸಿ ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸಬೇಕು ಎಂಬ ಒತ್ತಾಯವೂ ಮುಖಂಡರಿಂದ ಕೇಳಿ ಬಂತು.</p>.<p>ವಿವಿಧ ಸಹಕಾರ ಸಂಘಗಳು, ಯುವಕ ಮಂಡಲಗಳು ಹಾಗೂ ಸಂಘ, ಸಂಸ್ಥೆಗಳು ಅನುದಾನ ಕೊಡುವಂತೆ ಸಂಸದರಲ್ಲಿ ಮನವಿ ಮಾಡಿದವು.</p>.<p>ಇದಕ್ಕೂ ಮುನ್ನ ಯದುವೀರ್ ಅವರು ಪೆರಾಜೆ ಗ್ರಾಮದಲ್ಲಿ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನವನ್ನು ಉದ್ಘಾಟಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಜನರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ಅವರು ಸ್ವಾವಲಂಬಿಗಳಾಗಿ ಬದುಕು ನಡೆಸುವುದಕ್ಕೆ ಸಹಕಾರ ಸಂಘಗಳೇ ಕಾರಣ. ಇಂತಹ ಸಂಘಗಳಿಂದ ಜನರಿಗೆ ಸಾಕಷ್ಟು ಪ್ರಯೋಜನವಾಗಿದೆ’ ಎಂದು ಶ್ಲಾಘಿಸಿದರು.</p>.<p>ಸಂಘದ ನೂತನ ಪ್ರವೇಶ ದ್ವಾರವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಪಿ ಗಣಪತಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅಧ್ಯಕ್ಷತೆ ವಹಿಸಿದ್ದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಮುಖಂಡರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಮಹೇಶ್ ಜೈನಿ, ಸುಬ್ರಹ್ಮಣ್ಯ ಉಪಾಧ್ಯಾಯ, ಕಾಂಗೀರ ಸತೀಶ್ ಭಾಗವಹಿಸಿದ್ದರು.</p>.<p>ಬಳಿಕ ಮದೆನಾಡಿಗೆ ಬಂದ ಯದುವೀರ್ ಅಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಮಡಿಕೇರಿಯಲ್ಲಿ ಪಕ್ಷದ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡು, ಪಕ್ಷದ ಮುಂದಿನ ಕಾರ್ಯಗಳ ಕುರಿತು ಚರ್ಚೆ ನಡೆಸಿದರು.</p>.<p>ಒಂದೇ ದಿನ 5 ಕಡೆಗೆ ಭೇಟಿ ನೀಡಿದ ಸಂಸದ ಹಲವೆಡೆ ಸಾರ್ವಜನಿಕರಿಂದ ಅಹವಾಲು ಆಲಿಕೆ ವಿಶೇಷ ಅನುದಾನ ಕೋರಿ ಹಲವು ಸಂಘಟನೆಗಳಿಂದ ಅರ್ಜಿ ಸಲ್ಲಿಕೆ</p>.<p> ಪೆರಾಜೆ ಚೆಂಬು ಮದೆನಾಡು ಗ್ರಾಮಗಳಿಗೆ ಭೇಟಿ ಮಡಿಕೇರಿಯಲ್ಲಿ ಪ್ರಮುಖರ ಸಭೆ ಹಲವು ಬೇಡಿಕೆಗಳಿಗೆ ಸಂಸದ ಸ್ಪಂದನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಂಗಳವಾರ ಕೊಡಗು ಜಿಲ್ಲೆಯ ಪೆರಾಜೆ, ಚೆಂಬು, ಸಂಪಾಜೆ, ಮದೆನಾಡು ಹಾಗೂ ಮಡಿಕೇರಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.</p>.<p>ಈ ವೇಳೆ ಅವರು ಚೆಂಬು ಗ್ರಾಮಕ್ಕೆ ಬಿಎಸ್ಎನ್ಎಲ್ ಅಧಿಕಾರಿಗಳನ್ನು ಕರೆಸಿಕೊಂಡು ತಕ್ಷಣವೇ 2 ಟವರ್ಗಳನ್ನು ನಿರ್ಮಿಸಿಕೊಡಬೇಕು ಎಂದು ಸೂಚಿಸಿದರು.</p>.<p>ಜನರು ಮತ್ತೊಂದು ಟವರ್ ಅಗತ್ಯ ಇದೆ ಎಂದು ಇದೇ ವೇಳೆ ಮನವಿ ಮಾಡಿದರು. ಅಧಿಕಾರಿಗಳು ಸಂಜೆಯವರೆಗೂ ಗ್ರಾಮದಲ್ಲೇ ಇದ್ದು, ನೂತನ ಟವರ್ಗಳ ನಿರ್ಮಾಣಕ್ಕೆ ಜಾಗ ಗುರುತು ಮಾಡುವ ಪ್ರಕ್ರಿಯೆ ನಡೆಸಿದರು.</p>.<p>ಚೆಂಬು ಗ್ರಾಮದಲ್ಲಿ ಅಭಿನಂದನೆ ಸ್ವೀಕರಿಸಿದ ಯದವೀರ್ ಅವರಿಗೆ ದಬ್ಬಡ್ಕ ಸಮೀಪ ಸೇತುವೆ ನಿರ್ಮಾಣ ಮಾಡಿಕೊಡಬೇಕು ಎಂದು ಜನರು ಮನವಿ ಮಾಡಿದರು. ಈಗಾಗಲೇ ನಿರ್ಮಲಾ ಸೀತಾರಾಮನ್ ಅವರಿಂದ ₹ 1 ಕೋಟಿ ಅನುದಾನ ಬಂದಿದೆ. ಆದರೆ, ಅರಣ್ಯ ಇಲಾಖೆಯ ನಿರಾಕ್ಷೇಪಣಾ ಪತ್ರ ನೀಡದೇ ಇರುವುದು ಕಾಮಗಾರಿಗೆ ತೊಡಕಾಗಿದೆ ಎಂಬ ಅಂಶವನ್ನು ಗಮನಕ್ಕೆ ತಂದರು.</p>.<p>ಜೊತೆಗೆ, ಚೆಂಬು ಗ್ರಾಮವನ್ನು ದತ್ತು ತೆಗೆದುಕೊಂಡು ಅಥವಾ ವಿಶೇಷವಾಗಿ ಪರಿಗಣಿಸಿ ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸಬೇಕು ಎಂಬ ಒತ್ತಾಯವೂ ಮುಖಂಡರಿಂದ ಕೇಳಿ ಬಂತು.</p>.<p>ವಿವಿಧ ಸಹಕಾರ ಸಂಘಗಳು, ಯುವಕ ಮಂಡಲಗಳು ಹಾಗೂ ಸಂಘ, ಸಂಸ್ಥೆಗಳು ಅನುದಾನ ಕೊಡುವಂತೆ ಸಂಸದರಲ್ಲಿ ಮನವಿ ಮಾಡಿದವು.</p>.<p>ಇದಕ್ಕೂ ಮುನ್ನ ಯದುವೀರ್ ಅವರು ಪೆರಾಜೆ ಗ್ರಾಮದಲ್ಲಿ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನವನ್ನು ಉದ್ಘಾಟಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಜನರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ಅವರು ಸ್ವಾವಲಂಬಿಗಳಾಗಿ ಬದುಕು ನಡೆಸುವುದಕ್ಕೆ ಸಹಕಾರ ಸಂಘಗಳೇ ಕಾರಣ. ಇಂತಹ ಸಂಘಗಳಿಂದ ಜನರಿಗೆ ಸಾಕಷ್ಟು ಪ್ರಯೋಜನವಾಗಿದೆ’ ಎಂದು ಶ್ಲಾಘಿಸಿದರು.</p>.<p>ಸಂಘದ ನೂತನ ಪ್ರವೇಶ ದ್ವಾರವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಪಿ ಗಣಪತಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅಧ್ಯಕ್ಷತೆ ವಹಿಸಿದ್ದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕಾಳಪ್ಪ, ಮುಖಂಡರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಮಹೇಶ್ ಜೈನಿ, ಸುಬ್ರಹ್ಮಣ್ಯ ಉಪಾಧ್ಯಾಯ, ಕಾಂಗೀರ ಸತೀಶ್ ಭಾಗವಹಿಸಿದ್ದರು.</p>.<p>ಬಳಿಕ ಮದೆನಾಡಿಗೆ ಬಂದ ಯದುವೀರ್ ಅಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಮಡಿಕೇರಿಯಲ್ಲಿ ಪಕ್ಷದ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡು, ಪಕ್ಷದ ಮುಂದಿನ ಕಾರ್ಯಗಳ ಕುರಿತು ಚರ್ಚೆ ನಡೆಸಿದರು.</p>.<p>ಒಂದೇ ದಿನ 5 ಕಡೆಗೆ ಭೇಟಿ ನೀಡಿದ ಸಂಸದ ಹಲವೆಡೆ ಸಾರ್ವಜನಿಕರಿಂದ ಅಹವಾಲು ಆಲಿಕೆ ವಿಶೇಷ ಅನುದಾನ ಕೋರಿ ಹಲವು ಸಂಘಟನೆಗಳಿಂದ ಅರ್ಜಿ ಸಲ್ಲಿಕೆ</p>.<p> ಪೆರಾಜೆ ಚೆಂಬು ಮದೆನಾಡು ಗ್ರಾಮಗಳಿಗೆ ಭೇಟಿ ಮಡಿಕೇರಿಯಲ್ಲಿ ಪ್ರಮುಖರ ಸಭೆ ಹಲವು ಬೇಡಿಕೆಗಳಿಗೆ ಸಂಸದ ಸ್ಪಂದನೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>