‘ಜನಪ್ರತಿನಿಧಿಗಳು, ಅಧಿಕಾರಿಗಳ ಆಸಕ್ತಿ ಹಾಗೂ ದೂರದೃಷ್ಟಿಯ ಕೊರತೆಯಿಂದ ಮಳೆಗಾಲದಲ್ಲಿ ಕೋಡಿ ಬೀಳುವುದನ್ನು ಕಣ್ತುಂಬಿಕೊಳ್ಳಬಹುದೇ ಹೊರತು ಬೇರೆನು ನೋಡಲು ಸಿಗುವುದಿಲ್ಲ. ಇಲ್ಲೊಂದು ಸಾಕಾನೆ ಶಿಬಿರ ಆರಂಭಿಸುವ ಯೋಜನೆಯನ್ನು ಅರಣ್ಯ ಇಲಾಖೆ ಹಾಕಿಕೊಂಡಿತ್ತು. ಆದರೆ, ಸ್ಥಳೀಯರ ವಿರೋಧದಿಂದ ಅದು ಕೂಡ ಕಾರ್ಯರೂಪಕ್ಕೆ ಬರಲಿಲ್ಲ’ ಎಂದು ಗಿರಿಜನ ವಿವಿಧೀದ್ದೇಶ ಸಹಕಾರ ಸಂಘದ ಅಧ್ಯಕ್ಷ ಆರ್.ಕೆ.ಚಂದ್ರು ಹೇಳುತ್ತಾರೆ.