ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರ | ಸಕಾಲದಲ್ಲಿ ಸಿಗದ ಚಿಕಿತ್ಸೆ; ಮಗು ಸಾವು

Last Updated 19 ಏಪ್ರಿಲ್ 2020, 17:57 IST
ಅಕ್ಷರ ಗಾತ್ರ

ಕುಶಾಲನಗರ: ಲಾಕ್‌ಡೌನ್‌ನಿಂದಾಗಿ ಸಕಾಲದಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಆಗದ ಕಾರಣ ಮಾವಿನಹಳ್ಳ ಗ್ರಾಮದಲ್ಲಿ ಎರಡೂವರೆ ತಿಂಗಳ ಗಂಡು ಮಗು ಮೃತಪಟ್ಟಿದೆ.

ಗ್ರಾಮದ ಪ್ರತೀಶ್ ಹಾಗೂ ಲೀಲಾ ದಂಪತಿ ಮಗು ಉಸಿರಾಟದ ಸಮಸ್ಯೆಯಿಂದ ಬಳಲುತಿತ್ತು. ಪೊಲೀಸರ ಭಯದಿಂದ ಆಸ್ಪತ್ರೆಗೆ ಕರೆದೊಯ್ಯಲುಆಟೊ ಚಾಲಕರೂ ಬರಲಿಲ್ಲ.

ನಂತರ ಯುವಕನೊಬ್ಬರ ನೆರವಿನಲ್ಲಿ ಕಾರಿನಲ್ಲಿ ಹೆಬ್ಬಾಲೆಗೆ ಕರೆ ತಂದರು. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಅಲ್ಲಿ ಕುಶಾಲನಗರಕ್ಕೆ ಕರೆದೊಯ್ದರು. ಬಳಿಕ ಮೈಸೂರಿಗೆ ತಂದು, ಆಸ್ಪತ್ರೆಗೆ ದಾಖಲಿಸಿದ್ದರು.ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿತು.

ಭಾನುವಾರ ಮಧ್ಯಾಹ್ನ ಮಗುವಿನ ಅಂತ್ಯಕ್ರಿಯೆಯನ್ನು ಮಾವಿನಹಳ್ಳದಲ್ಲಿ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT