ಬುಧವಾರ ನಸುಕಿನ 3 ಗಂಟೆಯವರೆಗೆ ಧಾರಾಪೂಜೆ, ಮಧ್ಯಾಹ್ನ ದೇವಾಲಯದಿಂದ ಶ್ರೀಕೃಷ್ಣನದು ಎನ್ನಲಾದ ಕೊಳಲನ್ನು ಭಕ್ತಿಪೂರ್ವಕವಾಗಿ ಹೊರತೆಗೆಯಲಾಯಿತು. ಹಬ್ಬಕ್ಕೆ ನಿಗದಿಪಡಿಸಿದ ಕುಟುಂಬದ ಹಿರಿಯರಾದ ಬಿದ್ದಿಯಂಡ ಹರೀಶ್ ಕೊಳಲನ್ನು ಹಿಡಿದು ನಿರ್ದಿಷ್ಟ ಸ್ಥಳಗಳಲ್ಲಿ ಮೂರು ಬಾರಿ ನುಡಿಸುತ್ತಾ ‘ಊರ ಮಂದ್’ಗೆ ಆಗಮಿಸಿದರು.