<p><strong>ಗೋಣಿಕೊಪ್ಪಲು:</strong> ಶಿಕ್ಷಣ ಕ್ಷೇತ್ರಕ್ಕೆ ಕ್ರೈಸ್ತ ಧರ್ಮದವರು ನೀಡಿದ ಕೊಡುಗೆ ಅನನ್ಯವಾದುದು ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.</p>.<p>ದಕ್ಷಿಣ ಕೊಡಗು ಕ್ರಿಸ್ಚಿಯನ್ ಅಸೋಸಿಯೇಷನ್ ವತಿಯಿಂದ ಭಾನುವಾರ ಪಟ್ಟಣದ ಪರಿಮಳ ಮಂಗಳವಿಹಾರದಲ್ಲಿ ನಡೆದ ಶೈಕ್ಷಣಿಕ ಸಮಾರಂಭದಲ್ಲಿ ಮಾತನಾಡಿದ ಅವರು ಸಾಮಾಜಿಕ ಕ್ಷೇತ್ರದಲ್ಲಿಯೂ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದೆ. ಶಾಂತಿ, ಸೌಹಾರ್ದ ಬಯಸುವ ಈ ಸಮುದಾಯದ ತತ್ವ ಆದರ್ಶಗಳು ಅನುಕರಣೀಯವಾದುದು ಎಂದು ಹೇಳಿದರು.</p>.<p>ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಸರ್ಕಾರ ನೀಡುವ ಅನುದಾನದ ಜತೆಗೆ ಶಾಸಕರ ನಿಧಿಯಿಂದಲೂ ಅನುದಾನ ನೀಡಲಾಗಿದೆ. ಸಮುದಾಯದ ವಿವಿಧ ಕಾಮಗಾರಿಗಳಿಗೆ ಈಗಾಗಲೆ ಕೋಟ್ಯಂತರ ರೂಪಾಯಿ ವ್ಯಯಿಸಲಾಗಿದೆ. ಮುಂದೆಯೂ ಕೂಡ ಸಮುದಾಯದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ದಕ್ಷಿಣ ಕೊಡಗಿನ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಎ.ಜೆ.ಬಾಬು, ಧರ್ಮಗುರು ಕನ್ಯಾಶ್ರೀ ಹಾಜರಿದ್ದರು. ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು:</strong> ಶಿಕ್ಷಣ ಕ್ಷೇತ್ರಕ್ಕೆ ಕ್ರೈಸ್ತ ಧರ್ಮದವರು ನೀಡಿದ ಕೊಡುಗೆ ಅನನ್ಯವಾದುದು ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.</p>.<p>ದಕ್ಷಿಣ ಕೊಡಗು ಕ್ರಿಸ್ಚಿಯನ್ ಅಸೋಸಿಯೇಷನ್ ವತಿಯಿಂದ ಭಾನುವಾರ ಪಟ್ಟಣದ ಪರಿಮಳ ಮಂಗಳವಿಹಾರದಲ್ಲಿ ನಡೆದ ಶೈಕ್ಷಣಿಕ ಸಮಾರಂಭದಲ್ಲಿ ಮಾತನಾಡಿದ ಅವರು ಸಾಮಾಜಿಕ ಕ್ಷೇತ್ರದಲ್ಲಿಯೂ ಕ್ರೈಸ್ತ ಸಮುದಾಯದ ಕೊಡುಗೆ ಅಪಾರವಾಗಿದೆ. ಶಾಂತಿ, ಸೌಹಾರ್ದ ಬಯಸುವ ಈ ಸಮುದಾಯದ ತತ್ವ ಆದರ್ಶಗಳು ಅನುಕರಣೀಯವಾದುದು ಎಂದು ಹೇಳಿದರು.</p>.<p>ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಸರ್ಕಾರ ನೀಡುವ ಅನುದಾನದ ಜತೆಗೆ ಶಾಸಕರ ನಿಧಿಯಿಂದಲೂ ಅನುದಾನ ನೀಡಲಾಗಿದೆ. ಸಮುದಾಯದ ವಿವಿಧ ಕಾಮಗಾರಿಗಳಿಗೆ ಈಗಾಗಲೆ ಕೋಟ್ಯಂತರ ರೂಪಾಯಿ ವ್ಯಯಿಸಲಾಗಿದೆ. ಮುಂದೆಯೂ ಕೂಡ ಸಮುದಾಯದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ದಕ್ಷಿಣ ಕೊಡಗಿನ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಎ.ಜೆ.ಬಾಬು, ಧರ್ಮಗುರು ಕನ್ಯಾಶ್ರೀ ಹಾಜರಿದ್ದರು. ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>