<p><strong>ಸಿದ್ದಾಪುರ:</strong> ಛತ್ತೀಸಗಢದಲ್ಲಿ ಕೇರಳದ ಇಬ್ಬರು ಕ್ರೈಸ್ತ ಸನ್ಯಾಸಿನಿಯರ ಬಂಧನ ಖಂಡಿಸಿ ಸಿದ್ದಾಪುರದ ಸಂತ ಜೋಸೆಫರ ದೇವಾಲಯದಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಕೇರಳ ರಾಜ್ಯದ ಕ್ರೈಸ್ತ ಸನ್ಯಾಸಿನಿಯರನ್ನು ವಿನಾಕಾರಣ ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಕೂಡಲೇ ಪ್ರಕರಣ ಹಿಂಪಡೆಯಬೇಕು ಹಾಗೂ ಬಂಧನಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಧರ್ಮಗುರುಗಳಾದ ಫಾ. ಮೈಕಲ್ ಮರಿ, ಸಿಸ್ಟರ್ ಮರಿಜೋರಿ, ಪ್ರಮುಖರಾದ ಜಾನ್ಸನ್, ಸನಿಲ್, ಜೋಸೆಫ್ ಶ್ಯಾಂ ಹಾಜರಿದ್ದರು.</p>.<p>ಪ್ರಗತಿಪರ ಸಂಘಟನೆಯಿಂದ ಪ್ರತಿಭಟನೆ: ಛತ್ತೀಸಗಢದ ಘಟನೆ ಸಂಬಂಧಿಸಿದಂತೆ ಸಿದ್ದಾಪುರದ ಪ್ರಗತಿಪರ ಸಂಘಟನೆ ವತಿಯಿಂದ ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.</p>.<p>ಸಂಘಟನೆ ಪ್ರಮುಖರಾದ ಎನ್.ಡಿ.ಕುಟ್ಟಪ್ಪನ್, ಎಚ್.ಬಿ. ರಮೇಶ, ಪಿ.ಆರ್ ಭರತ್ ಹಾಗೂ ಕ್ರೈಸ್ತರು ಮತ್ತು ವಿವಿಧ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ಛತ್ತೀಸಗಢದಲ್ಲಿ ಕೇರಳದ ಇಬ್ಬರು ಕ್ರೈಸ್ತ ಸನ್ಯಾಸಿನಿಯರ ಬಂಧನ ಖಂಡಿಸಿ ಸಿದ್ದಾಪುರದ ಸಂತ ಜೋಸೆಫರ ದೇವಾಲಯದಿಂದ ಪ್ರತಿಭಟನೆ ನಡೆಸಲಾಯಿತು.</p>.<p>ಕೇರಳ ರಾಜ್ಯದ ಕ್ರೈಸ್ತ ಸನ್ಯಾಸಿನಿಯರನ್ನು ವಿನಾಕಾರಣ ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಕೂಡಲೇ ಪ್ರಕರಣ ಹಿಂಪಡೆಯಬೇಕು ಹಾಗೂ ಬಂಧನಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಧರ್ಮಗುರುಗಳಾದ ಫಾ. ಮೈಕಲ್ ಮರಿ, ಸಿಸ್ಟರ್ ಮರಿಜೋರಿ, ಪ್ರಮುಖರಾದ ಜಾನ್ಸನ್, ಸನಿಲ್, ಜೋಸೆಫ್ ಶ್ಯಾಂ ಹಾಜರಿದ್ದರು.</p>.<p>ಪ್ರಗತಿಪರ ಸಂಘಟನೆಯಿಂದ ಪ್ರತಿಭಟನೆ: ಛತ್ತೀಸಗಢದ ಘಟನೆ ಸಂಬಂಧಿಸಿದಂತೆ ಸಿದ್ದಾಪುರದ ಪ್ರಗತಿಪರ ಸಂಘಟನೆ ವತಿಯಿಂದ ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.</p>.<p>ಸಂಘಟನೆ ಪ್ರಮುಖರಾದ ಎನ್.ಡಿ.ಕುಟ್ಟಪ್ಪನ್, ಎಚ್.ಬಿ. ರಮೇಶ, ಪಿ.ಆರ್ ಭರತ್ ಹಾಗೂ ಕ್ರೈಸ್ತರು ಮತ್ತು ವಿವಿಧ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>