<p><strong>ಗೋಣಿಕೊಪ್ಪಲು</strong>: ‘ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಘೋಷಿಸಲಾದ ಮಾನವ ಹಕ್ಕುಗಳನ್ನು 1948ರ ಡಿ.10ರಂದು ವಿಶ್ವಸಂಸ್ಥೆ ಅಂಗೀಕರಿಸಿತು. ಅಂದಿನಿಂದ ವಿಶ್ವ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತಿದೆ’ ಎಂದು ವಕೀಲ ಕೆ.ಬಿ.ಸಂಜೀವ ಹೇಳಿದರು.</p>.<p>ಇಲ್ಲಿನ ಕಾವೇರಿ ಕಾಲೇಜು ಐಕ್ಯೂಎಸಿ ಹಾಗೂ ಮಾನವ ಹಕ್ಕುಗಳ ಸಂಘದ ವತಿಯಿಂದ ಬುಧವಾರ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ‘ರಾಷ್ಟ್ರೀಯತೆ, ವಾಸಸ್ಥಳ, ಲಿಂಗ, ರಾಷ್ಟ್ರೀಯ ಅಥವಾ ಜನಾಂಗೀಯ ಮೂಲ, ಬಣ್ಣ, ಧರ್ಮ, ಭಾಷೆ, ಸ್ಥಾನಮಾನ ಯಾವುದೇ ಇದ್ದರೂ ಪ್ರತಿಯೊಬ್ಬ ವ್ಯಕ್ತಿಯು ತಾರತಮ್ಯವಿಲ್ಲದೆ ಮಾನವ ಹಕ್ಕುಗಳನ್ನು ಚಲಾಯಿಸಲು ಅರ್ಹನಾಗಿರುತ್ತಾನೆ’ ಎಂದರು.</p>.<p>‘ಮಾನವ ಬದುಕಿಗೆ ಅತ್ಯವಶ್ಯಕವಾಗಿರುವ ಮಾನವ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳು ತಿಳುವಳಿಕೆ ಹೊಂದಿರಬೇಕು ಹಾಗೂ ಇತರರಿಗೂ ಜಾಗೃತಿ ಮೂಡಿಸಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಎಂ.ಬಿ.ಕಾವೇರಿಯಪ್ಪ ಮಾತನಾಡಿ, ‘ಭಾರತವು ಆದಿಕಾಲದಿಂದಲೂ ಮಾನವ ಹಕ್ಕುಗಳನ್ನು ಗೌರವಿಸುತ್ತಾ ಬಂದಿದೆ. ಆಧುನಿಕ ಶಿಕ್ಷಣ ಪದ್ಧತಿ ಬಂದ ನಂತರ ನಮ್ಮಲ್ಲಿ ಮಾನವ ಹಕ್ಕುಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಲಾರಂಭಿಸಿದೆ. ನಾವೆಲ್ಲರೂ ಕುವೆಂಪು ಅವರ ವಿಶ್ವಮಾನವ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಜಾತಿ, ಧರ್ಮ, ಲಿಂಗ, ಮೇಲು, ಕೀಳು ಎಂಬ ಬೇಧ ಭಾವವನ್ನು ಬಿಟ್ಟು ಮಾನವವನ್ನು ಮಾನವನನ್ನಾಗಿ ನೋಡುವ ಮನಸ್ಥಿತಿಯನ್ನು ಬೆಳೆಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ’ ಎಂದರು.</p>.<p>ಐಕ್ಯೂಎಸಿ ಸಂಚಾಲಕಿ ನಯನ ತಮ್ಮಯ್ಯ, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಕೆ.ಟಿ.ಸೀತಮ್ಮ, ಉಪನ್ಯಾಸಕರಾದ ಸಿ.ಟಿ.ಕಾವ್ಯ, ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ‘ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಘೋಷಿಸಲಾದ ಮಾನವ ಹಕ್ಕುಗಳನ್ನು 1948ರ ಡಿ.10ರಂದು ವಿಶ್ವಸಂಸ್ಥೆ ಅಂಗೀಕರಿಸಿತು. ಅಂದಿನಿಂದ ವಿಶ್ವ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತಿದೆ’ ಎಂದು ವಕೀಲ ಕೆ.ಬಿ.ಸಂಜೀವ ಹೇಳಿದರು.</p>.<p>ಇಲ್ಲಿನ ಕಾವೇರಿ ಕಾಲೇಜು ಐಕ್ಯೂಎಸಿ ಹಾಗೂ ಮಾನವ ಹಕ್ಕುಗಳ ಸಂಘದ ವತಿಯಿಂದ ಬುಧವಾರ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ‘ರಾಷ್ಟ್ರೀಯತೆ, ವಾಸಸ್ಥಳ, ಲಿಂಗ, ರಾಷ್ಟ್ರೀಯ ಅಥವಾ ಜನಾಂಗೀಯ ಮೂಲ, ಬಣ್ಣ, ಧರ್ಮ, ಭಾಷೆ, ಸ್ಥಾನಮಾನ ಯಾವುದೇ ಇದ್ದರೂ ಪ್ರತಿಯೊಬ್ಬ ವ್ಯಕ್ತಿಯು ತಾರತಮ್ಯವಿಲ್ಲದೆ ಮಾನವ ಹಕ್ಕುಗಳನ್ನು ಚಲಾಯಿಸಲು ಅರ್ಹನಾಗಿರುತ್ತಾನೆ’ ಎಂದರು.</p>.<p>‘ಮಾನವ ಬದುಕಿಗೆ ಅತ್ಯವಶ್ಯಕವಾಗಿರುವ ಮಾನವ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳು ತಿಳುವಳಿಕೆ ಹೊಂದಿರಬೇಕು ಹಾಗೂ ಇತರರಿಗೂ ಜಾಗೃತಿ ಮೂಡಿಸಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಎಂ.ಬಿ.ಕಾವೇರಿಯಪ್ಪ ಮಾತನಾಡಿ, ‘ಭಾರತವು ಆದಿಕಾಲದಿಂದಲೂ ಮಾನವ ಹಕ್ಕುಗಳನ್ನು ಗೌರವಿಸುತ್ತಾ ಬಂದಿದೆ. ಆಧುನಿಕ ಶಿಕ್ಷಣ ಪದ್ಧತಿ ಬಂದ ನಂತರ ನಮ್ಮಲ್ಲಿ ಮಾನವ ಹಕ್ಕುಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಲಾರಂಭಿಸಿದೆ. ನಾವೆಲ್ಲರೂ ಕುವೆಂಪು ಅವರ ವಿಶ್ವಮಾನವ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಜಾತಿ, ಧರ್ಮ, ಲಿಂಗ, ಮೇಲು, ಕೀಳು ಎಂಬ ಬೇಧ ಭಾವವನ್ನು ಬಿಟ್ಟು ಮಾನವವನ್ನು ಮಾನವನನ್ನಾಗಿ ನೋಡುವ ಮನಸ್ಥಿತಿಯನ್ನು ಬೆಳೆಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ’ ಎಂದರು.</p>.<p>ಐಕ್ಯೂಎಸಿ ಸಂಚಾಲಕಿ ನಯನ ತಮ್ಮಯ್ಯ, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಕೆ.ಟಿ.ಸೀತಮ್ಮ, ಉಪನ್ಯಾಸಕರಾದ ಸಿ.ಟಿ.ಕಾವ್ಯ, ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>