ನಾಪೋಕ್ಲು: ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳಿಬಾಣೆ ಎಂಬಲ್ಲಿ ಕಾವೇರಿ ನದಿ ತೀರದಲ್ಲಿ ಪಟ್ಟಣದ ವರ್ತಕರು ತ್ಯಾಜ್ಯ ವಸ್ತುಗಳನ್ನು ಹಾಕುತ್ತಿದ್ದು, ನದಿ ನೀರನ್ನು ಕಲುಷಿತಗೊಳಿಸುತ್ತಿದ್ದಾರೆ ಎಂಬ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ವತಿಯಿಂದ ಸದರಿ ಪ್ರದೇಶವನ್ನು ಸ್ವಚ್ಛಗೊಳಿಸಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಯಿತು.