<p><strong>ಮಡಿಕೇರಿ: </strong>ತಾಲ್ಲೂಕಿನ ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡವರ ಸಾಂಪ್ರದಾಯಿಕ ಉಡುಪು ತೊಟ್ಟು ವೇದಿಕೆಯನ್ನೇರಿದರು.<br /><br />ಕುಪ್ಪೆಚಾಲೆ ತೊಟ್ಟು ಪೀಚೆಕತ್ತಿ ಧರಿಸಿರುವ ಅವರು ಇಲ್ಲಿ 23ನೇ ಕೊಡವ ಕೌಟುಂಬಿಕ ಹಾಕಿ ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.</p>.<p><strong>ತಡವಾಗಿ ಕಾರ್ಯಕ್ರಮ ಆರಂಭ<br />ಮಡಿಕೇರಿ: </strong>ಇಲ್ಲಿನ ಗಾಂಧಿ ಮೈದಾನದಲ್ಲಿ ಬೆಳಿಗ್ಗೆ 11.30ಕ್ಕೆ ಆರಂಭವಾಗಬೇಕಿದ್ದ ಫಲಾನುಭವಿಗಳ ಸಮ್ಮೇಳನ ಮಧ್ಯಾಹ್ನ 3 ಗಂಟೆಗೆ ಆರಂಭವಾಯಿತು.<br /><br />ಕೊಡಗು ಜಿಲ್ಲೆಯ ಎಲ್ಲ ಭಾಗಗಳಿಂದ ಬಂದಿದ್ದ ಫಲಾನುಭವಿಗಳು ಕಾದು ಕಾದು ಬಸವಳಿದರು.<br /><br />ಮೈದಾನದ ಪಕ್ಕದಲ್ಲೇ ದ್ವಿತೀಯ ಪಿಯು ಪರೀಕ್ಷಾ ಕೇಂದ್ರವಿದ್ದು, ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ತಡವಾಗಿ ಬಂದೆ ಎಂದು ಕಾರ್ಯಕ್ರಮಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಹೇಳಿದರು.<br /><br />ಇದಕ್ಕೂ ಮುನ್ನ ಇಲ್ಲಿನ ಕೆ.ಬಾಡಗ ಗ್ರಾಮದ ಹೆಲಿಪ್ಯಾಡನ ನಲ್ಲಿ ಶನಿವಾರ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಬಂದಿಳಿದರು.<br /><br />ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗಿನಲ್ಲಿ ಹೆಚ್ಚುತ್ತಿರುವ ವನ್ಯಜೀವಿ- ಮಾನವ ಸಂಘರ್ಷ ತಡೆಯಲು ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಲಾಗುವುದು. ರಸ್ತೆ ದುರಸ್ತಿ ಕಾರ್ಯವನ್ನು ಮಳೆಗಾಲ ಆರಂಭವಾಗುವುದರ ಒಳಗೆ ಮುಗಿಸಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ತಾಲ್ಲೂಕಿನ ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡವರ ಸಾಂಪ್ರದಾಯಿಕ ಉಡುಪು ತೊಟ್ಟು ವೇದಿಕೆಯನ್ನೇರಿದರು.<br /><br />ಕುಪ್ಪೆಚಾಲೆ ತೊಟ್ಟು ಪೀಚೆಕತ್ತಿ ಧರಿಸಿರುವ ಅವರು ಇಲ್ಲಿ 23ನೇ ಕೊಡವ ಕೌಟುಂಬಿಕ ಹಾಕಿ ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.</p>.<p><strong>ತಡವಾಗಿ ಕಾರ್ಯಕ್ರಮ ಆರಂಭ<br />ಮಡಿಕೇರಿ: </strong>ಇಲ್ಲಿನ ಗಾಂಧಿ ಮೈದಾನದಲ್ಲಿ ಬೆಳಿಗ್ಗೆ 11.30ಕ್ಕೆ ಆರಂಭವಾಗಬೇಕಿದ್ದ ಫಲಾನುಭವಿಗಳ ಸಮ್ಮೇಳನ ಮಧ್ಯಾಹ್ನ 3 ಗಂಟೆಗೆ ಆರಂಭವಾಯಿತು.<br /><br />ಕೊಡಗು ಜಿಲ್ಲೆಯ ಎಲ್ಲ ಭಾಗಗಳಿಂದ ಬಂದಿದ್ದ ಫಲಾನುಭವಿಗಳು ಕಾದು ಕಾದು ಬಸವಳಿದರು.<br /><br />ಮೈದಾನದ ಪಕ್ಕದಲ್ಲೇ ದ್ವಿತೀಯ ಪಿಯು ಪರೀಕ್ಷಾ ಕೇಂದ್ರವಿದ್ದು, ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ತಡವಾಗಿ ಬಂದೆ ಎಂದು ಕಾರ್ಯಕ್ರಮಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಹೇಳಿದರು.<br /><br />ಇದಕ್ಕೂ ಮುನ್ನ ಇಲ್ಲಿನ ಕೆ.ಬಾಡಗ ಗ್ರಾಮದ ಹೆಲಿಪ್ಯಾಡನ ನಲ್ಲಿ ಶನಿವಾರ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಬಂದಿಳಿದರು.<br /><br />ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗಿನಲ್ಲಿ ಹೆಚ್ಚುತ್ತಿರುವ ವನ್ಯಜೀವಿ- ಮಾನವ ಸಂಘರ್ಷ ತಡೆಯಲು ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಲಾಗುವುದು. ರಸ್ತೆ ದುರಸ್ತಿ ಕಾರ್ಯವನ್ನು ಮಳೆಗಾಲ ಆರಂಭವಾಗುವುದರ ಒಳಗೆ ಮುಗಿಸಲಾಗುವುದು ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>