ಮುಖ್ಯವಾಗಿ, ಮುಖ್ಯಮಂತ್ರಿ ಬರುತ್ತಿರುವುದರ ಹಿಂದೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ಜಯ ದೊರಕಿಸಿಕೊಟ್ಟ ಕೊಡಗನ್ನು ಸರ್ಕಾರ ನಿರ್ಲಕ್ಷಿಸಿಲ್ಲ ಎಂದು ಜನರಿಗೆ ಮನವರಿಕೆ ಮಾಡಿಕೊಡುವ ಕಾರಣವೇ ಪ್ರಧಾನವಾಗಿದೆ. ಜೊತೆಗೆ, ಇಲ್ಲಿನ ಇಬ್ಬರೂ ಶಾಸಕರೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸಿ, ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದ್ದೇವೆ ಎಂಬ ಸಂದೇಶ ಸಾರುವ ಕಾರಣವೂ ಇದೆ.