‘ಅಕಾಲಿಕ ಮಳೆ, ಕಾರ್ಮಿಕರ ಕೊರತೆ, ಉತ್ಪಾದನಾ ವೆಚ್ಚ ಹೆಚ್ಚಳ, ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜಿಲ್ಲೆಯಲ್ಲಿ ಕಾಫಿ ಕೃಷಿ ನಾಶವಾಗುವ ಹಂತ ತಲುಪಿದೆ. ಕಾಫಿ ಹೂ ಅರಳುವ ಸಂದರ್ಭದಲ್ಲಿ ಮಳೆ ಬೀಳುವುದಿಲ್ಲ. ಕೊಯ್ಲಿನ ಸಮಯದಲ್ಲೂ ಬೀಳುತ್ತಿದೆ. ಫಸಲು ಹಾನಿಯಿಂದಾದ ಬೆಳೆಗಾರರ ಕಷ್ಟವನ್ನು ಕೇಳುವವರು ಇಲ್ಲದಂತಾಗಿದೆ’ ಎಂದು ಸೋಮವಾರಪೇಟೆ ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಮೋಹನ್ ಬೋಪಣ್ಣ ಅವರು ಬೇಸರ ವ್ಯಕ್ತಪಡಿಸಿದರು.