<p><strong>ಮಡಿಕೇರಿ: </strong>ಅಂತರರಾಷ್ಟ್ರೀಯ ಕಾಫಿ ದಿನದ ಪ್ರಯುಕ್ತ ಶನಿವಾರ ಜಿಲ್ಲೆಯ ಹಲವೆಡೆ ‘ಕಾಫಿ ಉತ್ಸವ’ಗಳು ನಡೆದವು.</p>.<p>ನಗರದ ರಾಜಾಸೀಟಿನಲ್ಲಿ ಕಾಫಿ ಮಂಡಳಿ ವತಿಯಿಂದ ನಡೆದ ‘ಕಾಫಿ ಉತ್ಸವ’ವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ವಿವಿಧ ಮಂಡಳಿಗಳು ಹಾಗೂ ಸಂಘ ಸಂಸ್ಥೆಗಳ ಸಹಕಾರದಲ್ಲಿ ಡಿಸೆಂಬರ್ ತಿಂಗಳಲ್ಲಿ ಒಂದು ವಾರಗಳ ಕಾಲ ಕಾಫಿ, ಜೇನು ಹಾಗೂ ವೈನ್ ಮೇಳ ಆಯೋಜಿಸಲು ಚಿಂತಿಸಲಾಗಿದೆ’ ಎಂದರು</p>.<p>‘ಕಾಫಿ ಬೀಜದಿಂದ ರೋಸ್ಟಿಂಗ್ ಮಾಡುವುದು, ನಂತರ ಪುಡಿ ಮಾಡಿ ಕಾಫಿ ತಯಾರಿಸುವುದು ಹೇಗೆ, ವೈವಿಧ್ಯಮಯ ಕಾಫಿಯ ಕುರಿತು ಮಾಹಿತಿ ನೀಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ’ ಎಂದರು.</p>.<p>ಕಾಫಿ ಮಂಡಳಿ ಸದಸ್ಯ ತಳೂರು ಕಿಶೋರ್ ಕುಮಾರ್ ಮಾತನಾಡಿ, ‘ಕೊಡಗು ಜಿಲ್ಲೆಯಲ್ಲಿ ಶೇ 70ರಷ್ಟು ಕಾಫಿ ಬೆಳೆ ಬೆಳೆಯಲಾಗುತ್ತಿದ್ದು, ಕೊಡಗಿನ ಕಾಫಿಯನ್ನು ಎಲ್ಲೆಡೆ ಪಸರಿಸುವಲ್ಲಿ ಜಿಲ್ಲಾಡಳಿತದ ಸಹಕಾರದಲ್ಲಿ ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p>ಬ್ರೆಜಿಲ್, ವಿಯಟ್ನಾಂ ದೇಶಗಳಲ್ಲಿ ಬಯಲು ಪ್ರದೇಶದಲ್ಲಿ ಕಾಫಿ ಬೆಳೆಯುತ್ತಾರೆ. ಆದರೆ, ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಬೆಟ್ಟಗುಡ್ಡಗಳಿಂದ ಆವೃತವಾದ ಪ್ರದೇಶದಲ್ಲಿ ಕಾಫಿ ಬೆಳೆಯುವುದು ವಿಶೇಷವಾಗಿದೆ’ ಎಂದರು.</p>.<p>ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಮೋಹನ್ ದಾಸ್ ಅವರು ಕೊಡಗಿನ ಕಾಫಿ ವಿಶೇಷತೆ ಬಗ್ಗೆ ಮಾಹಿತಿ ನೀಡಿದರು. ಕಾಫಿ ಮಂಡಳಿ ಉಪ ನಿರ್ದೇಶಕ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರಮೋದ್ ಇದ್ದರು.</p>.<p><strong>ಆರೋಗ್ಯಕ್ಕಾಗಿ ಕಾಫಿ</strong></p>.<p>ಕೊಡಗು ಮಹಿಳಾ ಕಾಫಿ ಜಾಗೃತಿ ವೇದಿಕೆ ಕಾರಗುಂದ ಗ್ರಾಮದ ಕುಮಾರೀಸ್ ಕಿಚನ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಕಾಫಿ ದಿನಾಚರಣೆಯಲ್ಲಿ ಉದ್ಯಮಿ ತೇಲಪಂಡ ಪ್ರದೀಪ್ ಪೂವಯ್ಯ ಆರೋಗ್ಯಕ್ಕಾಗಿ ಕಾಫಿ ಅಗತ್ಯ ಎಂದು ಪ್ರತಿಪಾದಿಸಿದರು.</p>.<p>ದೈಹಿಕ ಆರೋಗ್ಯ ಕಾಪಾಡಲು ನಿಗದಿತ ಪ್ರಮಾಣದ ಕಾಫಿ ಸೇವನೆ ಅತ್ಯಗತ್ಯ. ಯೂರೋಪಿಯನ್ ದೇಶಗಳಲ್ಲಿ ಕಾಫಿ ಸೇವಿಸುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿಯೇ ಅವರು ದೈಹಿಕವಾಗಿ ಆರೋಗ್ಯವಂತರಾಗಿದ್ದಾರೆ ಎಂದು ಹೇಳಿದರು.</p>.<p>ಮಹಿಳಾ ಕಾಫಿ ಬೆಳೆಗಾರರು ಸರ್ಕಾರದ ಸಬ್ಸಿಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಲ ಯೋಜನೆ, ಕಾಫಿ ಮಂಡಳಿಯ ವಿವಿಧ ಸೌಲಭ್ಯಗಳು ಹಾಗೂ ಗುಣಮಟ್ಟದ ಕಾಫಿ ಉತ್ಪಾದನೆಯ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಕಿವಿಮಾತು ಹೇಳಿದರು.</p>.<p>ಸಾರ್ವಜನಿಕರಿಗೆ ಉಚಿತವಾಗಿ ಗುಣಮಟ್ಟದ ಸ್ವಾದಿಷ್ಟ ಕಾಫಿಯನ್ನು ವಿತರಿಸಲಾಯಿತು. ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ಕಾಫಿ ಸೇವಿಸಿ ಸ್ವಾದದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ವೇದಿಕೆ ಅಧ್ಯಕ್ಷೆ ಜ್ಯೋತಿಕಾ ಬೋಪಣ್ಣ, ಸದಸ್ಯೆ ಶರಿನ್ ನಂಜಪ್ಪ, ಖಜಾಂಚಿ ಕುಮಾರಿ ಕುಂಞಪ್ಪ, ಸದಸ್ಯೆ ಅನಿತಾ ಗಣಪತಿ, ಕಾರ್ಯದರ್ಶಿ ಅನಿತಾ ನಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಅಂತರರಾಷ್ಟ್ರೀಯ ಕಾಫಿ ದಿನದ ಪ್ರಯುಕ್ತ ಶನಿವಾರ ಜಿಲ್ಲೆಯ ಹಲವೆಡೆ ‘ಕಾಫಿ ಉತ್ಸವ’ಗಳು ನಡೆದವು.</p>.<p>ನಗರದ ರಾಜಾಸೀಟಿನಲ್ಲಿ ಕಾಫಿ ಮಂಡಳಿ ವತಿಯಿಂದ ನಡೆದ ‘ಕಾಫಿ ಉತ್ಸವ’ವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ವಿವಿಧ ಮಂಡಳಿಗಳು ಹಾಗೂ ಸಂಘ ಸಂಸ್ಥೆಗಳ ಸಹಕಾರದಲ್ಲಿ ಡಿಸೆಂಬರ್ ತಿಂಗಳಲ್ಲಿ ಒಂದು ವಾರಗಳ ಕಾಲ ಕಾಫಿ, ಜೇನು ಹಾಗೂ ವೈನ್ ಮೇಳ ಆಯೋಜಿಸಲು ಚಿಂತಿಸಲಾಗಿದೆ’ ಎಂದರು</p>.<p>‘ಕಾಫಿ ಬೀಜದಿಂದ ರೋಸ್ಟಿಂಗ್ ಮಾಡುವುದು, ನಂತರ ಪುಡಿ ಮಾಡಿ ಕಾಫಿ ತಯಾರಿಸುವುದು ಹೇಗೆ, ವೈವಿಧ್ಯಮಯ ಕಾಫಿಯ ಕುರಿತು ಮಾಹಿತಿ ನೀಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ’ ಎಂದರು.</p>.<p>ಕಾಫಿ ಮಂಡಳಿ ಸದಸ್ಯ ತಳೂರು ಕಿಶೋರ್ ಕುಮಾರ್ ಮಾತನಾಡಿ, ‘ಕೊಡಗು ಜಿಲ್ಲೆಯಲ್ಲಿ ಶೇ 70ರಷ್ಟು ಕಾಫಿ ಬೆಳೆ ಬೆಳೆಯಲಾಗುತ್ತಿದ್ದು, ಕೊಡಗಿನ ಕಾಫಿಯನ್ನು ಎಲ್ಲೆಡೆ ಪಸರಿಸುವಲ್ಲಿ ಜಿಲ್ಲಾಡಳಿತದ ಸಹಕಾರದಲ್ಲಿ ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p>ಬ್ರೆಜಿಲ್, ವಿಯಟ್ನಾಂ ದೇಶಗಳಲ್ಲಿ ಬಯಲು ಪ್ರದೇಶದಲ್ಲಿ ಕಾಫಿ ಬೆಳೆಯುತ್ತಾರೆ. ಆದರೆ, ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಬೆಟ್ಟಗುಡ್ಡಗಳಿಂದ ಆವೃತವಾದ ಪ್ರದೇಶದಲ್ಲಿ ಕಾಫಿ ಬೆಳೆಯುವುದು ವಿಶೇಷವಾಗಿದೆ’ ಎಂದರು.</p>.<p>ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಮೋಹನ್ ದಾಸ್ ಅವರು ಕೊಡಗಿನ ಕಾಫಿ ವಿಶೇಷತೆ ಬಗ್ಗೆ ಮಾಹಿತಿ ನೀಡಿದರು. ಕಾಫಿ ಮಂಡಳಿ ಉಪ ನಿರ್ದೇಶಕ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರಮೋದ್ ಇದ್ದರು.</p>.<p><strong>ಆರೋಗ್ಯಕ್ಕಾಗಿ ಕಾಫಿ</strong></p>.<p>ಕೊಡಗು ಮಹಿಳಾ ಕಾಫಿ ಜಾಗೃತಿ ವೇದಿಕೆ ಕಾರಗುಂದ ಗ್ರಾಮದ ಕುಮಾರೀಸ್ ಕಿಚನ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಕಾಫಿ ದಿನಾಚರಣೆಯಲ್ಲಿ ಉದ್ಯಮಿ ತೇಲಪಂಡ ಪ್ರದೀಪ್ ಪೂವಯ್ಯ ಆರೋಗ್ಯಕ್ಕಾಗಿ ಕಾಫಿ ಅಗತ್ಯ ಎಂದು ಪ್ರತಿಪಾದಿಸಿದರು.</p>.<p>ದೈಹಿಕ ಆರೋಗ್ಯ ಕಾಪಾಡಲು ನಿಗದಿತ ಪ್ರಮಾಣದ ಕಾಫಿ ಸೇವನೆ ಅತ್ಯಗತ್ಯ. ಯೂರೋಪಿಯನ್ ದೇಶಗಳಲ್ಲಿ ಕಾಫಿ ಸೇವಿಸುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿಯೇ ಅವರು ದೈಹಿಕವಾಗಿ ಆರೋಗ್ಯವಂತರಾಗಿದ್ದಾರೆ ಎಂದು ಹೇಳಿದರು.</p>.<p>ಮಹಿಳಾ ಕಾಫಿ ಬೆಳೆಗಾರರು ಸರ್ಕಾರದ ಸಬ್ಸಿಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಲ ಯೋಜನೆ, ಕಾಫಿ ಮಂಡಳಿಯ ವಿವಿಧ ಸೌಲಭ್ಯಗಳು ಹಾಗೂ ಗುಣಮಟ್ಟದ ಕಾಫಿ ಉತ್ಪಾದನೆಯ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಕಿವಿಮಾತು ಹೇಳಿದರು.</p>.<p>ಸಾರ್ವಜನಿಕರಿಗೆ ಉಚಿತವಾಗಿ ಗುಣಮಟ್ಟದ ಸ್ವಾದಿಷ್ಟ ಕಾಫಿಯನ್ನು ವಿತರಿಸಲಾಯಿತು. ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ಕಾಫಿ ಸೇವಿಸಿ ಸ್ವಾದದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ವೇದಿಕೆ ಅಧ್ಯಕ್ಷೆ ಜ್ಯೋತಿಕಾ ಬೋಪಣ್ಣ, ಸದಸ್ಯೆ ಶರಿನ್ ನಂಜಪ್ಪ, ಖಜಾಂಚಿ ಕುಮಾರಿ ಕುಂಞಪ್ಪ, ಸದಸ್ಯೆ ಅನಿತಾ ಗಣಪತಿ, ಕಾರ್ಯದರ್ಶಿ ಅನಿತಾ ನಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>