<p><strong>ಮಡಿಕೇರಿ:</strong> ಇಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಜಿಲ್ಲಾ ಸಮಿತಿ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಸಮಿತಿ ಸದಸ್ಯರು ಅಸಮಾಧಾನ ಹೊರಹಾಕಿದರು. ಮಾತ್ರವಲ್ಲ, ಸದಸ್ಯರ ಗಮನಕ್ಕೆ ತಾರದೇ ತಯಾರಿಸಿರುವ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರ ಪಟ್ಟಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ನಿರಾಕರಿಸಿದರು.</p><p>ಇದಕ್ಕೆ ಸ್ಪಂದಿಸಿದ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಈಗಾಗಲೇ ತಾಲ್ಲೂಕುವಾರು ಆಯ್ಕೆ ಮಾಡಿರುವ ಪಟ್ಟಿಯನ್ನು ಪರಿಷ್ಕರಿಸಿ’ ಎಂದು ಸೂಚಿಸಿದರು.</p><p>ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ‘ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಸಮಿತಿ ಸದಸ್ಯರ ಗಮನಕ್ಕೆ ಬಾರದೆ ಪಟ್ಟಿಯನ್ನು ಕಳುಹಿಸಿಕೊಡಲಾಗಿದ್ದು, ಈ ಪಟ್ಟಿಯನ್ನು ಪರಿಷ್ಕರಿಸಬೇಕು’ ಎಂದು ಒತ್ತಾಯಿಸಿದರು.</p><p>ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಅದನ್ನು ಬಿಟ್ಟು ಅಧಿಕಾರಿಗಳು ಪಟ್ಟಿ ತಯಾರಿಸುವುದು ಸರಿಯಲ್ಲ ಎಂದು ಹರಿಹಾಯ್ದರು. ಇವರ ಮಾತಿಗೆ ಸಮಿತಿಯ ಇತರ ಸದಸ್ಯರೂ ದನಿಗೂಡಿಸಿದರು.</p><p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್, ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಸದಸ್ಯತ್ವ ಪಡೆಯಲು ₹ 1 ಸಾವಿರ ನೀಡಿ ನೋಂದಣಿಯಾಗಬೇಕಿದೆ. ಆ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಶಿಶು ಕಲ್ಯಾಣ ಅಧಿಕಾರಿಗಳು ಮಾಹಿತಿ ಒದಗಿಸಿರುವಂತೆಯೇ ಪಟ್ಟಿ ಕಳುಹಿಸಲಾಗಿದೆ’ ಎಂದು ಸಮರ್ಥಿಸಿಕೊಂಡರು.</p><p>‘ಜಿಲ್ಲೆಯ 5 ತಾಲ್ಲೂಕಿನಲ್ಲಿ ಪ್ರತೀ 10 ಜನರಂತೆ 50 ಜನರನ್ನು ಗೃಹಲಕ್ಷ್ಮಿ ವಿವಿಧೋದ್ದೇಶ ಸಂಘದ ನಿರ್ದೇಶಕರಾಗಿ ಪಟ್ಟಿ ತಯಾರಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ‘ಪಟ್ಟಿಯಲ್ಲಿ ಲೋಪಗಳಿದ್ದಲ್ಲಿ ಪರಿಷ್ಕರಿಸಬೇಕು. ಆದರೆ, ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರ ಗಮನಕ್ಕೆ ತಂದು ಪಟ್ಟಿಯನ್ನು ತಯಾರಿಸಬೇಕಿತ್ತು’ ಎಂದು ಹೇಳಿದರು.</p><p>ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಮಂಜುನಾಥ್ ಮಾತನಾಡಿ, ‘ಜಿಲ್ಲೆಯಲ್ಲಿ ಪದವಿ 1,625, ಡಿಪ್ಲೋಮಾ 24 ಮಂದಿ ಒಟ್ಟು 1,649 ಮಂದಿ ಯುವನಿಧಿ ಸೌಲಭ್ಯ ಪಡೆಯುತ್ತಿದ್ದು, ಇದುವರೆಗೆ ₹ 438.87 ಲಕ್ಷ ಪಾವತಿಯಾಗಿದೆ’ ಎಂದು ಹೇಳಿದರು.</p><p>ಯುವನಿಧಿ ಯೋಜನೆ ಸಂಬಂಧಿಸಿದಂತೆ ಕಾಲೇಜುಗಳಿಗೆ ತೆರಳಿ ಮಾಹಿತಿ ನೀಡುವಂತೆ ಧರ್ಮಜ ಉತ್ತಪ್ಪ ಸೂಚಿಸಿದರು.</p><p>ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ ಮಾತನಾಡಿ, ‘ಗೃಹಜ್ಯೋತಿ ಯೋಜನೆಯಡಿ ಶೇ 99.15 ರಷ್ಟು ಪ್ರಗತಿ ಸಾಧಿಸಲಾಗಿದೆ. ₹ 731.28 ಲಕ್ಷ ಸಹಾಯಧನ ಕಲ್ಪಿಸಲಾಗಿದೆ’ ಎಂದು ಅವರು ಹೇಳಿದರು.</p><p>ಶಕ್ತಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕ ಈರಸಪ್ಪ, ‘ಅಗತ್ಯವಿರುವ ಕಡೆಗಳಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ’<br>ಎಂದರು.</p><p>ಉಪಾಧ್ಯಕ್ಷರಾದ ಕೆ.ಸಿ.ಭೀಮಯ್ಯ, ನಾಸೀರ್ ಅವರು ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಸದಸ್ಯರಾದ ಎಸ್.ಕೆ.ಸುಂದರ, ಮುಸ್ತಪ, ಪಿ.ಎಲ್.ಸುರೇಶ್, ಎನ್.ಆರ್.ಪದವಿ, ಕೆ.ಜಿ.ಪೀಟರ್, ಮಂದ್ರೀರ ಮೋಹನ್ ದಾಸ್, ಪಿ.ವಿ.ಜಾನ್ಸನ್, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಅಬ್ದುಲ್ ನಬಿ ಭಾಗವಹಿಸಿದ್ದರು.</p>.<p><strong>ಗ್ಯಾರಂಟಿ ಯೋಜನಾ ಅನುಷ್ಠಾನ ಜಿಲ್ಲಾ ಸಮಿತಿ ಸಭೆ</strong></p><p><strong>ಹಲವು ಸದಸ್ಯರಿಂದ ಅಧಿಕಾರಿಗಳ ವಿರುದ್ಧ ಅಸಮಾಧಾನ</strong></p><p><strong>ನಿರ್ದೇಶಕರ ಪಟ್ಟಿ ಪರಿಷ್ಕರಿಸಲು ತೀರ್ಮಾನ</strong></p>.<p><strong>ಪ್ರತಿಧ್ವನಿಸಿದ ಪಡಿತರ ಚೀಟಿ ಸಮಸ್ಯೆ</strong></p><p>ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜು ಮಾತನಾಡಿ, ‘ಬಿಪಿಎಲ್ ಪಡಿತರ ಚೀಟಿದಾರರನ್ನು ಎಪಿಎಲ್ಗೆ ವರ್ಗಾಯಿಸಲಾಗಿದೆ. ಇದನ್ನು ಕೂಡಲೇ ಪರಿಶೀಲಿಸಬೇಕು. ಬಡವರಿಗೆ ಅನ್ಯಾಯವಾಗಬಾರದು’ ಎಂದು ಹೇಳಿದರು.</p><p>ಈ ಕುರಿತು ಪ್ರತಿಕ್ರಿಯಿಸಿದ ಧರ್ಮಜ ಉತ್ತಪ್ಪ, ‘ಬಿಪಿಎಲ್ನಿಂದ ಎಪಿಎಲ್ ಆಗಿದ್ದಲ್ಲಿ ಯಾವುದೇ ಕುಟುಂಬ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ಮನವಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆಯಬೇಕು. ಅರ್ಹರೆಲ್ಲರಿಗೂ ಬಿಪಿಎಲ್ ಪಡಿತರ ಚೀಟಿ ದೊರೆಯಬೇಕು’ ಎಂದು ತಿಳಿಸಿದರು.</p><p>ಪ್ರತಿಕ್ರಿಯಿಸಿದ ಆಹಾರ ನಿರೀಕ್ಷಕಿ ವೀಣಾ, ‘ಈಚೆಗೆ ಬಿಪಿಎಲ್ನಿಂದ ಎಪಿಎಲ್ಗೆ ಬದಲಾಗಿದ್ದಲ್ಲಿ, ಸರಿಪಡಿಸಿಕೊಳ್ಳಲು ಅವಕಾಶವಿದೆ. ಆದರೆ, ಈ ಹಿಂದೆ ಆಗಿರುವುದನ್ನು ಸದ್ಯ ಬದಲಾಯಿಸಲು ಅವಕಾಶವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಜಿಲ್ಲಾ ಸಮಿತಿ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಸಮಿತಿ ಸದಸ್ಯರು ಅಸಮಾಧಾನ ಹೊರಹಾಕಿದರು. ಮಾತ್ರವಲ್ಲ, ಸದಸ್ಯರ ಗಮನಕ್ಕೆ ತಾರದೇ ತಯಾರಿಸಿರುವ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರ ಪಟ್ಟಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ನಿರಾಕರಿಸಿದರು.</p><p>ಇದಕ್ಕೆ ಸ್ಪಂದಿಸಿದ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಈಗಾಗಲೇ ತಾಲ್ಲೂಕುವಾರು ಆಯ್ಕೆ ಮಾಡಿರುವ ಪಟ್ಟಿಯನ್ನು ಪರಿಷ್ಕರಿಸಿ’ ಎಂದು ಸೂಚಿಸಿದರು.</p><p>ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ‘ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಸಮಿತಿ ಸದಸ್ಯರ ಗಮನಕ್ಕೆ ಬಾರದೆ ಪಟ್ಟಿಯನ್ನು ಕಳುಹಿಸಿಕೊಡಲಾಗಿದ್ದು, ಈ ಪಟ್ಟಿಯನ್ನು ಪರಿಷ್ಕರಿಸಬೇಕು’ ಎಂದು ಒತ್ತಾಯಿಸಿದರು.</p><p>ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಅದನ್ನು ಬಿಟ್ಟು ಅಧಿಕಾರಿಗಳು ಪಟ್ಟಿ ತಯಾರಿಸುವುದು ಸರಿಯಲ್ಲ ಎಂದು ಹರಿಹಾಯ್ದರು. ಇವರ ಮಾತಿಗೆ ಸಮಿತಿಯ ಇತರ ಸದಸ್ಯರೂ ದನಿಗೂಡಿಸಿದರು.</p><p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್, ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಸದಸ್ಯತ್ವ ಪಡೆಯಲು ₹ 1 ಸಾವಿರ ನೀಡಿ ನೋಂದಣಿಯಾಗಬೇಕಿದೆ. ಆ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಶಿಶು ಕಲ್ಯಾಣ ಅಧಿಕಾರಿಗಳು ಮಾಹಿತಿ ಒದಗಿಸಿರುವಂತೆಯೇ ಪಟ್ಟಿ ಕಳುಹಿಸಲಾಗಿದೆ’ ಎಂದು ಸಮರ್ಥಿಸಿಕೊಂಡರು.</p><p>‘ಜಿಲ್ಲೆಯ 5 ತಾಲ್ಲೂಕಿನಲ್ಲಿ ಪ್ರತೀ 10 ಜನರಂತೆ 50 ಜನರನ್ನು ಗೃಹಲಕ್ಷ್ಮಿ ವಿವಿಧೋದ್ದೇಶ ಸಂಘದ ನಿರ್ದೇಶಕರಾಗಿ ಪಟ್ಟಿ ತಯಾರಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ‘ಪಟ್ಟಿಯಲ್ಲಿ ಲೋಪಗಳಿದ್ದಲ್ಲಿ ಪರಿಷ್ಕರಿಸಬೇಕು. ಆದರೆ, ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರ ಗಮನಕ್ಕೆ ತಂದು ಪಟ್ಟಿಯನ್ನು ತಯಾರಿಸಬೇಕಿತ್ತು’ ಎಂದು ಹೇಳಿದರು.</p><p>ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಮಂಜುನಾಥ್ ಮಾತನಾಡಿ, ‘ಜಿಲ್ಲೆಯಲ್ಲಿ ಪದವಿ 1,625, ಡಿಪ್ಲೋಮಾ 24 ಮಂದಿ ಒಟ್ಟು 1,649 ಮಂದಿ ಯುವನಿಧಿ ಸೌಲಭ್ಯ ಪಡೆಯುತ್ತಿದ್ದು, ಇದುವರೆಗೆ ₹ 438.87 ಲಕ್ಷ ಪಾವತಿಯಾಗಿದೆ’ ಎಂದು ಹೇಳಿದರು.</p><p>ಯುವನಿಧಿ ಯೋಜನೆ ಸಂಬಂಧಿಸಿದಂತೆ ಕಾಲೇಜುಗಳಿಗೆ ತೆರಳಿ ಮಾಹಿತಿ ನೀಡುವಂತೆ ಧರ್ಮಜ ಉತ್ತಪ್ಪ ಸೂಚಿಸಿದರು.</p><p>ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ ಮಾತನಾಡಿ, ‘ಗೃಹಜ್ಯೋತಿ ಯೋಜನೆಯಡಿ ಶೇ 99.15 ರಷ್ಟು ಪ್ರಗತಿ ಸಾಧಿಸಲಾಗಿದೆ. ₹ 731.28 ಲಕ್ಷ ಸಹಾಯಧನ ಕಲ್ಪಿಸಲಾಗಿದೆ’ ಎಂದು ಅವರು ಹೇಳಿದರು.</p><p>ಶಕ್ತಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕ ಈರಸಪ್ಪ, ‘ಅಗತ್ಯವಿರುವ ಕಡೆಗಳಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ’<br>ಎಂದರು.</p><p>ಉಪಾಧ್ಯಕ್ಷರಾದ ಕೆ.ಸಿ.ಭೀಮಯ್ಯ, ನಾಸೀರ್ ಅವರು ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಸದಸ್ಯರಾದ ಎಸ್.ಕೆ.ಸುಂದರ, ಮುಸ್ತಪ, ಪಿ.ಎಲ್.ಸುರೇಶ್, ಎನ್.ಆರ್.ಪದವಿ, ಕೆ.ಜಿ.ಪೀಟರ್, ಮಂದ್ರೀರ ಮೋಹನ್ ದಾಸ್, ಪಿ.ವಿ.ಜಾನ್ಸನ್, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಅಬ್ದುಲ್ ನಬಿ ಭಾಗವಹಿಸಿದ್ದರು.</p>.<p><strong>ಗ್ಯಾರಂಟಿ ಯೋಜನಾ ಅನುಷ್ಠಾನ ಜಿಲ್ಲಾ ಸಮಿತಿ ಸಭೆ</strong></p><p><strong>ಹಲವು ಸದಸ್ಯರಿಂದ ಅಧಿಕಾರಿಗಳ ವಿರುದ್ಧ ಅಸಮಾಧಾನ</strong></p><p><strong>ನಿರ್ದೇಶಕರ ಪಟ್ಟಿ ಪರಿಷ್ಕರಿಸಲು ತೀರ್ಮಾನ</strong></p>.<p><strong>ಪ್ರತಿಧ್ವನಿಸಿದ ಪಡಿತರ ಚೀಟಿ ಸಮಸ್ಯೆ</strong></p><p>ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜು ಮಾತನಾಡಿ, ‘ಬಿಪಿಎಲ್ ಪಡಿತರ ಚೀಟಿದಾರರನ್ನು ಎಪಿಎಲ್ಗೆ ವರ್ಗಾಯಿಸಲಾಗಿದೆ. ಇದನ್ನು ಕೂಡಲೇ ಪರಿಶೀಲಿಸಬೇಕು. ಬಡವರಿಗೆ ಅನ್ಯಾಯವಾಗಬಾರದು’ ಎಂದು ಹೇಳಿದರು.</p><p>ಈ ಕುರಿತು ಪ್ರತಿಕ್ರಿಯಿಸಿದ ಧರ್ಮಜ ಉತ್ತಪ್ಪ, ‘ಬಿಪಿಎಲ್ನಿಂದ ಎಪಿಎಲ್ ಆಗಿದ್ದಲ್ಲಿ ಯಾವುದೇ ಕುಟುಂಬ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ಮನವಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆಯಬೇಕು. ಅರ್ಹರೆಲ್ಲರಿಗೂ ಬಿಪಿಎಲ್ ಪಡಿತರ ಚೀಟಿ ದೊರೆಯಬೇಕು’ ಎಂದು ತಿಳಿಸಿದರು.</p><p>ಪ್ರತಿಕ್ರಿಯಿಸಿದ ಆಹಾರ ನಿರೀಕ್ಷಕಿ ವೀಣಾ, ‘ಈಚೆಗೆ ಬಿಪಿಎಲ್ನಿಂದ ಎಪಿಎಲ್ಗೆ ಬದಲಾಗಿದ್ದಲ್ಲಿ, ಸರಿಪಡಿಸಿಕೊಳ್ಳಲು ಅವಕಾಶವಿದೆ. ಆದರೆ, ಈ ಹಿಂದೆ ಆಗಿರುವುದನ್ನು ಸದ್ಯ ಬದಲಾಯಿಸಲು ಅವಕಾಶವಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>