<p><strong>ಸೋಮವಾರಪೇಟೆ:</strong> ಪ್ರತಿ ಗ್ರಾಮಗಳಲ್ಲಿ ಚಿಕ್ಕ ಚಿಕ್ಕ ಸಮುದಾಯ ಭವನಗಳನ್ನು ನಿರ್ಮಿಸುವುದರಿಂದ, ನಗರ ಪ್ರದೇಶವನ್ನು ಅವಲಂಬಿಸುವುದು ಕಡಿಮೆಯಾಗಲಿದ್ದು, ಈ ನಿಟ್ಟಿನಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದರು.</p>.<p>ಸಮೀಪದ ಮಸಗೋಡು ಗ್ರಾಮದಲ್ಲಿ ನೂತನ ಸ್ತ್ರೀ ಶಕ್ತಿ ಭವನ ನಿರ್ಮಿಸಲು ಬುಧವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಗ್ರಾಮಗಳಲ್ಲಿನ ಸಮುದಾಯ ಭವನಗಳಿಂದ ಕೆಲವು ಕಾರ್ಯಕ್ರಮಗಳನ್ನು ಸ್ಥಳೀಯವಾಗಿಯೇ ಮಾಡಬಹುದು. ಯಾವುದೇ ಕಾಮಗಾರಿ ನಡೆಯುವ ಸಂದರ್ಭ ಎಲ್ಲ ಗ್ರಾಮಸ್ಥರು ಗುಣಮಟ್ಟದ ಕಾಮಗಾರಿ ನಡೆಸುವಂತೆ ನೋಡಿಕೊಳ್ಳಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳನ್ನು ಸದ್ವಿನಿಯೋಗವಾಗಲು ಸಾಧ್ಯ ಎಂದರು.</p>.<p>ಕಾಮಗಾರಿ ಸಂದರ್ಭ ಯಾವುದೇ ರಾಜಕೀಯ ಬೇಡ. ಈಗಿನ ಹಣದಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಿಸಲು ಗಟ್ಟಿಮುಟ್ಟಾದ ತಳಪಾಯ ಹಾಕಿಸಿದಲ್ಲಿ, ಮುಂದಿನ ದಿನಗಳಲ್ಲಿ ಉಳಿಕೆ ಹಣವನ್ನು ನೀಡಲಾಗುವುದು ಎಂದು ತಿಳಿಸಿದರು.</p>.<p>ಮಸಗೋಡು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಂಗೀರ ಮನೆ ಸತೀಶ್ ಮಾತನಾಡಿ, ಗ್ರಾಮದಲ್ಲಿ ಸ್ತ್ರೀ ಶಕ್ತಿ ಭವನ ನಿರ್ಮಾಣಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡಬೇಕು. ಗ್ರಾಮದಲ್ಲಿನ ದೇವಾಲಯ ಅಭಿವೃದ್ಧಿಗೆ ಹಾಗೂ ಸ್ಮಶಾನಕ್ಕೆ ತರಳುವ ರಸ್ತೆ ನಿರ್ಮಿಸಿಸಿಕೊಡಬೇಕೆಂದು ಮನವಿ ಮಾಡಿದರು.</p>.<p>ವೇದಿಕೆಯಲ್ಲಿ ನೇರುಗಳಲೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಲಾ ದಿನೇಶ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಬಿ. ಸತೀಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಹಾಗೂ ಗ್ರಾಮದ ಪ್ರಮುಖರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಮವಾರಪೇಟೆ:</strong> ಪ್ರತಿ ಗ್ರಾಮಗಳಲ್ಲಿ ಚಿಕ್ಕ ಚಿಕ್ಕ ಸಮುದಾಯ ಭವನಗಳನ್ನು ನಿರ್ಮಿಸುವುದರಿಂದ, ನಗರ ಪ್ರದೇಶವನ್ನು ಅವಲಂಬಿಸುವುದು ಕಡಿಮೆಯಾಗಲಿದ್ದು, ಈ ನಿಟ್ಟಿನಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದರು.</p>.<p>ಸಮೀಪದ ಮಸಗೋಡು ಗ್ರಾಮದಲ್ಲಿ ನೂತನ ಸ್ತ್ರೀ ಶಕ್ತಿ ಭವನ ನಿರ್ಮಿಸಲು ಬುಧವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಗ್ರಾಮಗಳಲ್ಲಿನ ಸಮುದಾಯ ಭವನಗಳಿಂದ ಕೆಲವು ಕಾರ್ಯಕ್ರಮಗಳನ್ನು ಸ್ಥಳೀಯವಾಗಿಯೇ ಮಾಡಬಹುದು. ಯಾವುದೇ ಕಾಮಗಾರಿ ನಡೆಯುವ ಸಂದರ್ಭ ಎಲ್ಲ ಗ್ರಾಮಸ್ಥರು ಗುಣಮಟ್ಟದ ಕಾಮಗಾರಿ ನಡೆಸುವಂತೆ ನೋಡಿಕೊಳ್ಳಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳನ್ನು ಸದ್ವಿನಿಯೋಗವಾಗಲು ಸಾಧ್ಯ ಎಂದರು.</p>.<p>ಕಾಮಗಾರಿ ಸಂದರ್ಭ ಯಾವುದೇ ರಾಜಕೀಯ ಬೇಡ. ಈಗಿನ ಹಣದಲ್ಲಿ ಎರಡು ಅಂತಸ್ತಿನ ಕಟ್ಟಡ ನಿರ್ಮಿಸಲು ಗಟ್ಟಿಮುಟ್ಟಾದ ತಳಪಾಯ ಹಾಕಿಸಿದಲ್ಲಿ, ಮುಂದಿನ ದಿನಗಳಲ್ಲಿ ಉಳಿಕೆ ಹಣವನ್ನು ನೀಡಲಾಗುವುದು ಎಂದು ತಿಳಿಸಿದರು.</p>.<p>ಮಸಗೋಡು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಂಗೀರ ಮನೆ ಸತೀಶ್ ಮಾತನಾಡಿ, ಗ್ರಾಮದಲ್ಲಿ ಸ್ತ್ರೀ ಶಕ್ತಿ ಭವನ ನಿರ್ಮಾಣಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡಬೇಕು. ಗ್ರಾಮದಲ್ಲಿನ ದೇವಾಲಯ ಅಭಿವೃದ್ಧಿಗೆ ಹಾಗೂ ಸ್ಮಶಾನಕ್ಕೆ ತರಳುವ ರಸ್ತೆ ನಿರ್ಮಿಸಿಸಿಕೊಡಬೇಕೆಂದು ಮನವಿ ಮಾಡಿದರು.</p>.<p>ವೇದಿಕೆಯಲ್ಲಿ ನೇರುಗಳಲೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಲಾ ದಿನೇಶ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಬಿ. ಸತೀಶ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಹಾಗೂ ಗ್ರಾಮದ ಪ್ರಮುಖರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>