<p><strong>ಶನಿವಾರಸಂತೆ:</strong> ಎರಡೂವರೆ ದಶಕದ ಹಿಂದೆಯೇ ವಿಶ್ವ ಬ್ಯಾಂಕ್ ನೆರವಿನಿಂದ ₹ 1.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶನಿವಾರಸಂತೆಯ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕಿನಲ್ಲೇ ಭವ್ಯ, ಸುಂದರ ಕಟ್ಟಡ ಹೊಂದಿದೆ ಎಂಬ ಖ್ಯಾತಿ ಪಡೆದಿದ್ದರೂ ಕೆಲವು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದೆ.</p>.<p>ಆರೋಗ್ಯ ಕೇಂದ್ರ 30 ಹಾಸಿಗೆಗಳ ಸೌಲಭ್ಯ ಹೊಂದಿದೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿ ನಿತ್ಯ 100ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹೊರ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಇಲ್ಲಿ ಮುಖ್ಯವಾಗಿ ಹೆರಿಗೆ ಸೇರಿದಂತೆ ಹಲವಾರು ವೈದ್ಯಕೀಯ ಸೌಲಭ್ಯಗಳು ಲಭ್ಯವಿದೆ.</p>.<p>ಲೇಬರ್ ವಾರ್ಡ್, ಸಾಮಾನ್ಯ ವಾರ್ಡ್, ಶಸ್ತ್ರಚಿಕಿತ್ಸಾ ಕೊಠಡಿ, ಮೈನರ್ ಒ.ಟಿ, ಲಸಿಕೆ ಮತ್ತು ಚುಚ್ಚುಮದ್ದು ವಿಭಾಗ, ಪ್ರಯೋಗಶಾಲೆ, ಫಾರ್ಮಸಿ ವಿಭಾಗ, ಕ್ಷಕಿರಣ ಕೊಠಡಿ, ದಂತ ಚಿಕಿತ್ಸಾ ವಿಭಾಗ, ಆಂಬುಲೆನ್ಸ್ ಸೇವೆ ಸೇರಿದಂತೆ ಇನ್ನಿತರ ಸೌಲಭ್ಯಗಳಿವೆ.</p>.<p>ಮುಖ್ಯವಾಗಿ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಸೋಂಕಿನ ಸಂದರ್ಭ ಪರೀಕ್ಷೆಗಾಗಿ ಸ್ವ್ಯಾಬ್ಗಳನ್ನು ತೆಗೆದು ಮಡಿಕೇರಿಯಲ್ಲಿನ ಕೋವಿಡ್ ಪ್ರಯೋಗಶಾಲೆಗೆ ಕಳುಹಿಸಿ ಕೊಡಲಾಗುತ್ತಿತ್ತು. ಕೋವಿಡ್-19 ಲಸಿಕಾ ಕಾರ್ಯಕ್ರಮವನ್ನೂ ಹಮ್ಮಿಕೊಂಡು ವೈದ್ಯಾಧಿಕಾರಿಯೂ ಸೇರಿದಂತೆ ಸಿಬ್ಬಂದಿಗಳಿಗೆ ಹಾಗೂ ಇದೀಗ 60 ವಯೋಮಾನ ದಾಟಿದವರಿಗೆಲ್ಲ ನೀಡಲಾಗುತ್ತಿದೆ.</p>.<p>ಆದರೆ, ಈ ಆರೋಗ್ಯ ಕೇಂದ್ರ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಪೂರ್ಣ ಪ್ರಮಾಣದಲ್ಲಿ ವೈದ್ಯಕೀಯ ಸೇವೆ ಒದಗಿಸಲು ಹಲವು ಸಮಸ್ಯೆಗಳು ಅಡ್ಡಿಯಾಗಿರುವುದೇ ವಿಪರ್ಯಾಸ ಎನ್ನುತ್ತಾರೆ ಸ್ಥಳೀಯರು.</p>.<p>ಆರೋಗ್ಯ ಕೇಂದ್ರದಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಕಾಯಂ ವೈದ್ಯಾಧಿಕಾರಿ ಹುದ್ದೆ ಖಾಲಿಯಿದೆ. ಇಲ್ಲಿಗೆ 4 ತಜ್ಞ ವೈದ್ಯರು ಹಾಗೂ ಒಬ್ಬ ಎಂ.ಬಿ.ಬಿ.ಎಸ್ ವೈದ್ಯರ ಹುದ್ದೆ ಮಂಜೂರಾಗಿದ್ದರೂ ಯಾರೊಬ್ಬರ ನೇಮಕಾತಿಯಾಗಿಲ್ಲ. ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಡಾ.ತನುಜಾ ಹಾಗೂ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಯುಷ್ ವೈದ್ಯೆ ಡಾ.ರಾಜೇಶ್ವರಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 8 ಮಂದಿ ದಾದಿಯರು ಇರಬೇಕಾಗಿದ್ದು ಮೂವರು ದಾದಿಯರು ಮಾತ್ರ ಇದ್ದಾರೆ. ಕ್ಷ-ಕಿರಣ ತಂತ್ರಜ್ಞ ಹಾಗೂ 2 ಫಾರ್ಮಸಿಸ್ಟ್ ಹುದ್ದೆ ಖಾಲಿಯಿದ್ದು ಗುತ್ತಿಗೆ ಆಧಾರದ ಮೇಲೆ ಓರ್ವ ಫಾರ್ಮಸಿಸ್ಟ್ ನೇಮಕ ಮಾಡಲಾಗಿದೆ.</p>.<p>ಆರೋಗ್ಯ ಕೇಂದ್ರದ ಕಚೇರಿಗೆ 1 ಪ್ರಥಮ ದರ್ಜೆ ಸಹಾಯಕರ ಹುದ್ದೆ, 2 ದ್ವಿತೀಯ ದರ್ಜೆ ಸಹಾಯಕರ ಹುದ್ದೆ ಮಂಜೂರಾಗಿದ್ದರೂ ಆ ಹುದ್ದೆಗಳು ಭರ್ತಿಯಾಗಿಲ್ಲ. ಪ್ರಸ್ತುತ ಕಚೇರಿ ಅಧೀಕ್ಷಕ ಗಿರೀಶ್ ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ.</p>.<p>ಈ ಕೇಂದ್ರಕ್ಕೆ ಸಾಮಾನ್ಯವಾಗಿ ರಸ್ತೆ ಅಪಘಾತ, ಆತ್ಮಹತ್ಯೆ, ಹತ್ಯೆ ಮತ್ತಿತರ ಕಾರಣಗಳಿಂದ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ತರಲಾಗುತ್ತದೆ. ಆದರೆ, ಇಲ್ಲಿನ ಶವಾಗಾರ ಶಿಥಿಲವಸ್ಥೆಯಲ್ಲಿದ್ದು ಶವ ಪರೀಕ್ಷೆ ಕಷ್ಟಸಾಧ್ಯವಾಗಿದೆ. ಈ ವಿಷಯ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಹಲವಾರು ಬಾರಿ ಪ್ರಸ್ತಾಪವಾಗಿ ಚರ್ಚಿಸಲ್ಪಟ್ಟಿದೆ. ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಪ್ರಸ್ತಾಪವಾಗಿ, ದುರಸ್ತಿಪಡಿಸುವ ಆಶ್ವಾಸನೆ ದೊರೆತಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ.</p>.<p>ಸಮಸ್ಯೆಗಳು ಹಲವಾರಿದ್ದರೂ, ಆರೋಗ್ಯ ಕೇಂದ್ರದ ಮುಂಭಾಗದಲ್ಲೇ ಮಾಡುತ್ತಿರುವ ತ್ಯಾಜ್ಯ ವಿಲೇವಾರಿ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಕೊಳೆತ ತ್ಯಾಜ್ಯದ ದುರ್ನಾತ ಸಹಿಸಲು ಅಸಾಧ್ಯವಾಗಿದ್ದು ಚಿಕಿತ್ಸೆಗಾಗಿ ಬರುವ ರೋಗಿಗಳ ಮೇಲೆ, ಕರ್ತವ್ಯ ನಿರ್ವಹಿಸುವ ವೈದ್ಯರು, ದಾದಿಯರು ಮತ್ತು ಸಿಬ್ಬಂದಿ ಮೇಲೂ ದುಷ್ಪರಿಣಾಮ ಬೀರುವ ಸಂಭವವಿದೆ.</p>.<p><strong>ಕಸ ಹಾಕುವ ಜಾಗವನ್ನು ತೆರವು</strong><br />ಗೊಳಿಸಲು ಹಲವಾರು ವರ್ಷಗಳಿಂದ ಪ್ರಯತ್ನ ನಡೆದಿದೆಯಾದರೂ ಪ್ರಯೋಜನವಾಗಲಿಲ್ಲ. ಆರೋಗ್ಯ ರಕ್ಷಾ ಸಭೆಯ ಅಧ್ಯಕ್ಷರು, ತಾಲ್ಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಗಿದೆ. ಆದರೂ, ತ್ಯಾಜ್ಯ ವಿಲೇವಾರಿ ಜಾಗ ಸ್ಥಳಾಂತರವಾಗುತ್ತಲೇ ಇಲ್ಲ.</p>.<p>ಆರೋಗ್ಯ ಕೇಂದ್ರದ ವಾರ್ಡ್ಗಳು, ವೈದ್ಯಾಧಿಕಾರಿಗಳ ವಸತಿಗೃಹಗಳೂ ಶಿಥಿಲಾವಸ್ಥೆಯಲ್ಲಿವೆ. ಇವಕ್ಕೂ ದುರಸ್ತಿ ಭಾಗ್ಯ ಒದಗಿ ಬರಬೇಕಿದೆ. ಕೇಂದ್ರದ ಸುತ್ತಲೂ ತಡೆಗೋಡೆ ನಿರ್ಮಾಣದ ಅಗತ್ಯವಿದೆ.</p>.<p>ಇದೊಂದು ಹೈಟೆಕ್ ಆಸ್ಪತ್ರೆಯಾಗಿದ್ದು ಸೌಲಭ್ಯಗಳಿದ್ದರೂ ರೋಗಿಗಳ ಸಂಖ್ಯೆಗೆ ತಕ್ಕಂತೆ ಪರೀಕ್ಷಿಸಿ, ಚಿಕಿತ್ಸೆ ನೀಡುವ ವೈದ್ಯರ, ದಾದಿಯರ ಕೊರತೆಯಿದೆ. ಸರ್ಕಾರದ ಅನುದಾನ ದೊರೆಯುತ್ತಿದ್ದರೂ ಸಮಸ್ಯೆಗಳು ಬಗೆಹರಿದಿಲ್ಲ. ಶನಿವಾರಸಂತೆ ಸುತ್ತಮುತ್ತ ಕೂಲಿಕಾರ್ಮಿಕರೇ ಅಧಿಕ ಸಂಖ್ಯೆಯಲ್ಲಿದ್ದಾರೆ.</p>.<p>ಸಮಸ್ಯೆಗಳಿದ್ದರೂ ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮುಂಭಾಗದಲ್ಲಿ ಸಿಬ್ಬಂದಿಗಳ ಶ್ರಮದಿಂದ ಸುಂದರ ಉದ್ಯಾನವನ ನಿರ್ಮಾಣವಾಗಿದೆ. ಆದ್ದರಿಂದ ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶನಿವಾರಸಂತೆ:</strong> ಎರಡೂವರೆ ದಶಕದ ಹಿಂದೆಯೇ ವಿಶ್ವ ಬ್ಯಾಂಕ್ ನೆರವಿನಿಂದ ₹ 1.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶನಿವಾರಸಂತೆಯ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕಿನಲ್ಲೇ ಭವ್ಯ, ಸುಂದರ ಕಟ್ಟಡ ಹೊಂದಿದೆ ಎಂಬ ಖ್ಯಾತಿ ಪಡೆದಿದ್ದರೂ ಕೆಲವು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದೆ.</p>.<p>ಆರೋಗ್ಯ ಕೇಂದ್ರ 30 ಹಾಸಿಗೆಗಳ ಸೌಲಭ್ಯ ಹೊಂದಿದೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿ ನಿತ್ಯ 100ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹೊರ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಇಲ್ಲಿ ಮುಖ್ಯವಾಗಿ ಹೆರಿಗೆ ಸೇರಿದಂತೆ ಹಲವಾರು ವೈದ್ಯಕೀಯ ಸೌಲಭ್ಯಗಳು ಲಭ್ಯವಿದೆ.</p>.<p>ಲೇಬರ್ ವಾರ್ಡ್, ಸಾಮಾನ್ಯ ವಾರ್ಡ್, ಶಸ್ತ್ರಚಿಕಿತ್ಸಾ ಕೊಠಡಿ, ಮೈನರ್ ಒ.ಟಿ, ಲಸಿಕೆ ಮತ್ತು ಚುಚ್ಚುಮದ್ದು ವಿಭಾಗ, ಪ್ರಯೋಗಶಾಲೆ, ಫಾರ್ಮಸಿ ವಿಭಾಗ, ಕ್ಷಕಿರಣ ಕೊಠಡಿ, ದಂತ ಚಿಕಿತ್ಸಾ ವಿಭಾಗ, ಆಂಬುಲೆನ್ಸ್ ಸೇವೆ ಸೇರಿದಂತೆ ಇನ್ನಿತರ ಸೌಲಭ್ಯಗಳಿವೆ.</p>.<p>ಮುಖ್ಯವಾಗಿ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಸೋಂಕಿನ ಸಂದರ್ಭ ಪರೀಕ್ಷೆಗಾಗಿ ಸ್ವ್ಯಾಬ್ಗಳನ್ನು ತೆಗೆದು ಮಡಿಕೇರಿಯಲ್ಲಿನ ಕೋವಿಡ್ ಪ್ರಯೋಗಶಾಲೆಗೆ ಕಳುಹಿಸಿ ಕೊಡಲಾಗುತ್ತಿತ್ತು. ಕೋವಿಡ್-19 ಲಸಿಕಾ ಕಾರ್ಯಕ್ರಮವನ್ನೂ ಹಮ್ಮಿಕೊಂಡು ವೈದ್ಯಾಧಿಕಾರಿಯೂ ಸೇರಿದಂತೆ ಸಿಬ್ಬಂದಿಗಳಿಗೆ ಹಾಗೂ ಇದೀಗ 60 ವಯೋಮಾನ ದಾಟಿದವರಿಗೆಲ್ಲ ನೀಡಲಾಗುತ್ತಿದೆ.</p>.<p>ಆದರೆ, ಈ ಆರೋಗ್ಯ ಕೇಂದ್ರ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಪೂರ್ಣ ಪ್ರಮಾಣದಲ್ಲಿ ವೈದ್ಯಕೀಯ ಸೇವೆ ಒದಗಿಸಲು ಹಲವು ಸಮಸ್ಯೆಗಳು ಅಡ್ಡಿಯಾಗಿರುವುದೇ ವಿಪರ್ಯಾಸ ಎನ್ನುತ್ತಾರೆ ಸ್ಥಳೀಯರು.</p>.<p>ಆರೋಗ್ಯ ಕೇಂದ್ರದಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಕಾಯಂ ವೈದ್ಯಾಧಿಕಾರಿ ಹುದ್ದೆ ಖಾಲಿಯಿದೆ. ಇಲ್ಲಿಗೆ 4 ತಜ್ಞ ವೈದ್ಯರು ಹಾಗೂ ಒಬ್ಬ ಎಂ.ಬಿ.ಬಿ.ಎಸ್ ವೈದ್ಯರ ಹುದ್ದೆ ಮಂಜೂರಾಗಿದ್ದರೂ ಯಾರೊಬ್ಬರ ನೇಮಕಾತಿಯಾಗಿಲ್ಲ. ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಡಾ.ತನುಜಾ ಹಾಗೂ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಯುಷ್ ವೈದ್ಯೆ ಡಾ.ರಾಜೇಶ್ವರಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 8 ಮಂದಿ ದಾದಿಯರು ಇರಬೇಕಾಗಿದ್ದು ಮೂವರು ದಾದಿಯರು ಮಾತ್ರ ಇದ್ದಾರೆ. ಕ್ಷ-ಕಿರಣ ತಂತ್ರಜ್ಞ ಹಾಗೂ 2 ಫಾರ್ಮಸಿಸ್ಟ್ ಹುದ್ದೆ ಖಾಲಿಯಿದ್ದು ಗುತ್ತಿಗೆ ಆಧಾರದ ಮೇಲೆ ಓರ್ವ ಫಾರ್ಮಸಿಸ್ಟ್ ನೇಮಕ ಮಾಡಲಾಗಿದೆ.</p>.<p>ಆರೋಗ್ಯ ಕೇಂದ್ರದ ಕಚೇರಿಗೆ 1 ಪ್ರಥಮ ದರ್ಜೆ ಸಹಾಯಕರ ಹುದ್ದೆ, 2 ದ್ವಿತೀಯ ದರ್ಜೆ ಸಹಾಯಕರ ಹುದ್ದೆ ಮಂಜೂರಾಗಿದ್ದರೂ ಆ ಹುದ್ದೆಗಳು ಭರ್ತಿಯಾಗಿಲ್ಲ. ಪ್ರಸ್ತುತ ಕಚೇರಿ ಅಧೀಕ್ಷಕ ಗಿರೀಶ್ ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ.</p>.<p>ಈ ಕೇಂದ್ರಕ್ಕೆ ಸಾಮಾನ್ಯವಾಗಿ ರಸ್ತೆ ಅಪಘಾತ, ಆತ್ಮಹತ್ಯೆ, ಹತ್ಯೆ ಮತ್ತಿತರ ಕಾರಣಗಳಿಂದ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ತರಲಾಗುತ್ತದೆ. ಆದರೆ, ಇಲ್ಲಿನ ಶವಾಗಾರ ಶಿಥಿಲವಸ್ಥೆಯಲ್ಲಿದ್ದು ಶವ ಪರೀಕ್ಷೆ ಕಷ್ಟಸಾಧ್ಯವಾಗಿದೆ. ಈ ವಿಷಯ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಹಲವಾರು ಬಾರಿ ಪ್ರಸ್ತಾಪವಾಗಿ ಚರ್ಚಿಸಲ್ಪಟ್ಟಿದೆ. ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಪ್ರಸ್ತಾಪವಾಗಿ, ದುರಸ್ತಿಪಡಿಸುವ ಆಶ್ವಾಸನೆ ದೊರೆತಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ.</p>.<p>ಸಮಸ್ಯೆಗಳು ಹಲವಾರಿದ್ದರೂ, ಆರೋಗ್ಯ ಕೇಂದ್ರದ ಮುಂಭಾಗದಲ್ಲೇ ಮಾಡುತ್ತಿರುವ ತ್ಯಾಜ್ಯ ವಿಲೇವಾರಿ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಕೊಳೆತ ತ್ಯಾಜ್ಯದ ದುರ್ನಾತ ಸಹಿಸಲು ಅಸಾಧ್ಯವಾಗಿದ್ದು ಚಿಕಿತ್ಸೆಗಾಗಿ ಬರುವ ರೋಗಿಗಳ ಮೇಲೆ, ಕರ್ತವ್ಯ ನಿರ್ವಹಿಸುವ ವೈದ್ಯರು, ದಾದಿಯರು ಮತ್ತು ಸಿಬ್ಬಂದಿ ಮೇಲೂ ದುಷ್ಪರಿಣಾಮ ಬೀರುವ ಸಂಭವವಿದೆ.</p>.<p><strong>ಕಸ ಹಾಕುವ ಜಾಗವನ್ನು ತೆರವು</strong><br />ಗೊಳಿಸಲು ಹಲವಾರು ವರ್ಷಗಳಿಂದ ಪ್ರಯತ್ನ ನಡೆದಿದೆಯಾದರೂ ಪ್ರಯೋಜನವಾಗಲಿಲ್ಲ. ಆರೋಗ್ಯ ರಕ್ಷಾ ಸಭೆಯ ಅಧ್ಯಕ್ಷರು, ತಾಲ್ಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಗಿದೆ. ಆದರೂ, ತ್ಯಾಜ್ಯ ವಿಲೇವಾರಿ ಜಾಗ ಸ್ಥಳಾಂತರವಾಗುತ್ತಲೇ ಇಲ್ಲ.</p>.<p>ಆರೋಗ್ಯ ಕೇಂದ್ರದ ವಾರ್ಡ್ಗಳು, ವೈದ್ಯಾಧಿಕಾರಿಗಳ ವಸತಿಗೃಹಗಳೂ ಶಿಥಿಲಾವಸ್ಥೆಯಲ್ಲಿವೆ. ಇವಕ್ಕೂ ದುರಸ್ತಿ ಭಾಗ್ಯ ಒದಗಿ ಬರಬೇಕಿದೆ. ಕೇಂದ್ರದ ಸುತ್ತಲೂ ತಡೆಗೋಡೆ ನಿರ್ಮಾಣದ ಅಗತ್ಯವಿದೆ.</p>.<p>ಇದೊಂದು ಹೈಟೆಕ್ ಆಸ್ಪತ್ರೆಯಾಗಿದ್ದು ಸೌಲಭ್ಯಗಳಿದ್ದರೂ ರೋಗಿಗಳ ಸಂಖ್ಯೆಗೆ ತಕ್ಕಂತೆ ಪರೀಕ್ಷಿಸಿ, ಚಿಕಿತ್ಸೆ ನೀಡುವ ವೈದ್ಯರ, ದಾದಿಯರ ಕೊರತೆಯಿದೆ. ಸರ್ಕಾರದ ಅನುದಾನ ದೊರೆಯುತ್ತಿದ್ದರೂ ಸಮಸ್ಯೆಗಳು ಬಗೆಹರಿದಿಲ್ಲ. ಶನಿವಾರಸಂತೆ ಸುತ್ತಮುತ್ತ ಕೂಲಿಕಾರ್ಮಿಕರೇ ಅಧಿಕ ಸಂಖ್ಯೆಯಲ್ಲಿದ್ದಾರೆ.</p>.<p>ಸಮಸ್ಯೆಗಳಿದ್ದರೂ ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮುಂಭಾಗದಲ್ಲಿ ಸಿಬ್ಬಂದಿಗಳ ಶ್ರಮದಿಂದ ಸುಂದರ ಉದ್ಯಾನವನ ನಿರ್ಮಾಣವಾಗಿದೆ. ಆದ್ದರಿಂದ ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>