ಮಡಿಕೇರಿ: ಕಲ್ಲಡ್ಕ ಪ್ರಭಾಕರ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ವುಮೆನ್ ಇಂಡಿಯಾ ಮೂವ್ಮೆಂಟ್ ಸಂಘಟನೆಯ ಅಧ್ಯಕ್ಷೆ ಎಂ.ಇ.ಸಲಿಕತ್ ಅವರು ಇಲ್ಲಿನ ನಗರ ಠಾಣೆಗೆ ದೂರು ನೀಡಿದ್ದಾರೆ.