ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ‘ನೈರುತ್ಯ ಶಿಕ್ಷಕರ ಕ್ಷೇತ್ರವು ಕೊಡಗು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆಯ ಅರ್ಧಭಾಗವನ್ನು ಒಳಗೊಂಡಿದೆ. ಒಟ್ಟು 19,309 ಮತದಾರರು ಇದ್ದಾರೆ. ಕೊಡಗಿನಲ್ಲೇ 1,500 ಮತದಾರರು ಇದ್ದಾರೆ. ಈ ಕ್ಷೇತ್ರದಲ್ಲಿ ಮಂಜುನಾಥ್ 3ನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ’ ಎಂದರು.