ಗೋಣಿಕೊಪ್ಪಲು: ‘ರಾಜ್ಯದ ಬಿಜೆಪಿ ಸರ್ಕಾರ ಕಾರ್ಮಿಕರು, ಶೋಷಿತರ, ಬಡವರ ಪರ ಯಾವುದೇ ಕಾರ್ಯಕ್ರಮ ಮಾಡಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ದುರ್ಬಲ ವರ್ಗ, ಅಲ್ಪಸಂಖ್ಯಾತರ ಜೀವನದ ಜತೆ ಚೆಲ್ಲಾಟವಾಡುತ್ತಿದೆ’ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಆರೋಪಿಸಿದರು.