<p><strong>ಮಡಿಕೇರಿ</strong>: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಿರುವ ಕ್ರಮವನ್ನು ಖಂಡಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಇಲ್ಲಿನ ಇಂದಿರಾಗಾಂಧಿ ವೃತ್ತ (ಚೌಕಿ)ದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.</p>.<p>ಸರ್ಕಾರ ಆಡಳಿತ ಯಂತ್ರವನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದ ಮುಖಂಡರು, ರಾಹುಲ್ ಗಾಂಧಿ ಅವರ ಧ್ವನಿಯನ್ನು ಅಡಗಿಸಬೇಕು ಎಂಬ ಕಾರಣಕ್ಕೆ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಿಜೆಪಿ ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ. ವಿರೋಧ ಪಕ್ಷಗಳು ಇಲ್ಲದೇ ಇರುವಂತೆ ಮಾಡುವುದೇ ಅದರ ಉದ್ದೇಶವಾಗಿದೆ. ಅದರ ಒಂದು ಭಾಗವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಕಿಡಿಕಾರಿದರು.</p>.<p>ಹೈಕೋರ್ಟ್ ವಕೀಲ ಚಂದ್ರಮೌಳಿ ಮಾತನಾಡಿ, ‘ಈ ಪ್ರತಿಭಟನೆ ನ್ಯಾಯಾಲಯದ ತೀರ್ಪಿನ ವಿರುದ್ಧವಾಗಿ ಅಲ್ಲ. ಇದು ಸರ್ಕಾರದ ದಮನಕಾರಿ ನೀತಿಯ ವಿರುದ್ಧ’ ಎಂದು ಸ್ಪಷ್ಟಪಡಿಸಿದರು.</p>.<p>‘ರಾಹುಲ್ ಗಾಂಧಿ ಅವರ ಧ್ವನಿಯನ್ನು ಅಡಗಿಸಬೇಕು ಎಂಬ ಕಾರಣಕ್ಕೆ ಸರ್ಕಾರ ಸಣ್ಣ ನೆಪ ಸಿಕ್ಕ ತಕ್ಷಣವೇ ಅನರ್ಹಗೊಳಿಸಿದೆ. ತೀರ್ಪನ್ನು ಉನ್ನತ ನ್ಯಾಯಾಲಯಗಳಲ್ಲಿ ಪ್ರಶ್ನಿಸುವ ಅವಕಾಶವೂ ಇದೆ. ಹೀಗಿರುವಾಗ ಸರ್ಕಾರ ಆತುರವಾಗಿ ಕ್ರಮ ಕೈಗೊಂಡಿದೆ’ ಎಂದರು.</p>.<p>ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಮಾತನಾಡಿ, ‘ಸರ್ಕಾರ ಈ ಕ್ರಮದ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಮುನಿರ್ ಅಹಮ್ಮದ್, ಎಚ್.ಎ.ಹಂಸ, ಸುರಯ್ಯ ಅಬ್ರಾರ್, ತೆನ್ನೀರಾ ಮೈನಾ, ಬಿ.ವೈ.ರಾಕೇಶ್, ಆರ್.ಪಿ.ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಿರುವ ಕ್ರಮವನ್ನು ಖಂಡಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಇಲ್ಲಿನ ಇಂದಿರಾಗಾಂಧಿ ವೃತ್ತ (ಚೌಕಿ)ದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.</p>.<p>ಸರ್ಕಾರ ಆಡಳಿತ ಯಂತ್ರವನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದ ಮುಖಂಡರು, ರಾಹುಲ್ ಗಾಂಧಿ ಅವರ ಧ್ವನಿಯನ್ನು ಅಡಗಿಸಬೇಕು ಎಂಬ ಕಾರಣಕ್ಕೆ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಿಜೆಪಿ ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ. ವಿರೋಧ ಪಕ್ಷಗಳು ಇಲ್ಲದೇ ಇರುವಂತೆ ಮಾಡುವುದೇ ಅದರ ಉದ್ದೇಶವಾಗಿದೆ. ಅದರ ಒಂದು ಭಾಗವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಕಿಡಿಕಾರಿದರು.</p>.<p>ಹೈಕೋರ್ಟ್ ವಕೀಲ ಚಂದ್ರಮೌಳಿ ಮಾತನಾಡಿ, ‘ಈ ಪ್ರತಿಭಟನೆ ನ್ಯಾಯಾಲಯದ ತೀರ್ಪಿನ ವಿರುದ್ಧವಾಗಿ ಅಲ್ಲ. ಇದು ಸರ್ಕಾರದ ದಮನಕಾರಿ ನೀತಿಯ ವಿರುದ್ಧ’ ಎಂದು ಸ್ಪಷ್ಟಪಡಿಸಿದರು.</p>.<p>‘ರಾಹುಲ್ ಗಾಂಧಿ ಅವರ ಧ್ವನಿಯನ್ನು ಅಡಗಿಸಬೇಕು ಎಂಬ ಕಾರಣಕ್ಕೆ ಸರ್ಕಾರ ಸಣ್ಣ ನೆಪ ಸಿಕ್ಕ ತಕ್ಷಣವೇ ಅನರ್ಹಗೊಳಿಸಿದೆ. ತೀರ್ಪನ್ನು ಉನ್ನತ ನ್ಯಾಯಾಲಯಗಳಲ್ಲಿ ಪ್ರಶ್ನಿಸುವ ಅವಕಾಶವೂ ಇದೆ. ಹೀಗಿರುವಾಗ ಸರ್ಕಾರ ಆತುರವಾಗಿ ಕ್ರಮ ಕೈಗೊಂಡಿದೆ’ ಎಂದರು.</p>.<p>ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಮಾತನಾಡಿ, ‘ಸರ್ಕಾರ ಈ ಕ್ರಮದ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಮುನಿರ್ ಅಹಮ್ಮದ್, ಎಚ್.ಎ.ಹಂಸ, ಸುರಯ್ಯ ಅಬ್ರಾರ್, ತೆನ್ನೀರಾ ಮೈನಾ, ಬಿ.ವೈ.ರಾಕೇಶ್, ಆರ್.ಪಿ.ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>