<p><strong>ಮಡಿಕೇರಿ:</strong> ‘ಬಿಜೆಪಿಯನ್ನು ಏಕೆ ಸೋಲಿಸಬೇಕು ಎನ್ನುವ ಕುರಿತು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸ್ಪಷ್ಟತೆ ಇರಬೇಕು. ಆ ಕುರಿತು ನಾವು ಗಟ್ಟಿಯಾಗಿ ಮಾತನಾಡಬೇಕು. ಆಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧ್ಯ’ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಎಸ್ ಲಾಡ್ ಪ್ರತಿಪಾದಿಸಿದರು.</p>.<p>ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷದ ಮುಖಂಡರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೇಶದ ಸಂವಿಧಾನವನ್ನು ಹಂತಹಂತವಾಗಿ ಬದಲಾವಣೆ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೋರಾಡುತ್ತಿದ್ದಾರೆ. ಇವರ ಹೋರಾಟವನ್ನು ಅರ್ಥೈಸಿಕೊಂಡು ಆಳವಾಗಿ ಚಿಂತಿಸಿ ಗಟ್ಟಿಯಾಗಿ ಧ್ವನಿ ಎತ್ತಬೇಕು ಎಂದರು.</p>.<p>‘1947ರಲ್ಲಿ ಈ ದೇಶದ ಮೇಲೆ ₹ 52 ಲಕ್ಷ ಕೋಟಿ ಸಾಲ ಇತ್ತು. ಆದರೆ, ಕಳೆದ 11 ವರ್ಷಗಳಿಂದ ₹ 211 ಲಕ್ಷ ಕೋಟಿ ಸಾಲ ಹೆಚ್ಚಾಗಿದೆ. ಈ ಕುರಿತು ಜನರಿಗೆ ಹೇಳಬೇಕು. ನಮ್ಮ ಗ್ಯಾರಂಟಿ ಯೋಜನೆಗಳ ಕುರಿತು ಅವರಲ್ಲಿ ಅರಿವು ಮೂಡಿಸಬೇಕು’ ಎಂದು ಹೇಳಿದರು.</p>.<p>ಗ್ಯಾರಂಟಿ ಯೋಜನಾ ಸಮಿತಿ ರಾಜ್ಯ ಉಪಾಧ್ಯಕ್ಷ ಮಹರೂಸ್ ಖಾನ್ ಮಾತನಾಡಿ, ‘ಶಕ್ತಿ ಯೋಜನೆಯಿಂದ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಈ ಕುರಿತು ಜನರಿಗೆ ಹೇಳಬೇಕು. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಮನೆಮನೆಗೆ ಹೋಗಿ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.</p>.<p>ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಮಾತನಾಡಿ, ‘ಇನ್ನು ಮುಂದೆ ಚುನಾವಣೆಗಳು ಬರುತ್ತವೆ. ಹಾಗಾಗಿ, ಎಲ್ಲರೂ ಅದಕ್ಕಾಗಿ ಸಿದ್ಧತೆ ನಡೆಸಬೇಕು’ ಎಂದರು.</p>.<p>ಶಾಸಕ ಡಾ.ಮಂತರ್ಗೌಡ, ಪಕ್ಷದ ಕೊಡಗು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಶೆಟ್ಟ, ಮುಖಂಡರಾದ ಮುನೀರ್ ಅಹಮ್ಮದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ‘ಬಿಜೆಪಿಯನ್ನು ಏಕೆ ಸೋಲಿಸಬೇಕು ಎನ್ನುವ ಕುರಿತು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸ್ಪಷ್ಟತೆ ಇರಬೇಕು. ಆ ಕುರಿತು ನಾವು ಗಟ್ಟಿಯಾಗಿ ಮಾತನಾಡಬೇಕು. ಆಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧ್ಯ’ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಎಸ್ ಲಾಡ್ ಪ್ರತಿಪಾದಿಸಿದರು.</p>.<p>ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷದ ಮುಖಂಡರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು.</p>.<p>ದೇಶದ ಸಂವಿಧಾನವನ್ನು ಹಂತಹಂತವಾಗಿ ಬದಲಾವಣೆ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೋರಾಡುತ್ತಿದ್ದಾರೆ. ಇವರ ಹೋರಾಟವನ್ನು ಅರ್ಥೈಸಿಕೊಂಡು ಆಳವಾಗಿ ಚಿಂತಿಸಿ ಗಟ್ಟಿಯಾಗಿ ಧ್ವನಿ ಎತ್ತಬೇಕು ಎಂದರು.</p>.<p>‘1947ರಲ್ಲಿ ಈ ದೇಶದ ಮೇಲೆ ₹ 52 ಲಕ್ಷ ಕೋಟಿ ಸಾಲ ಇತ್ತು. ಆದರೆ, ಕಳೆದ 11 ವರ್ಷಗಳಿಂದ ₹ 211 ಲಕ್ಷ ಕೋಟಿ ಸಾಲ ಹೆಚ್ಚಾಗಿದೆ. ಈ ಕುರಿತು ಜನರಿಗೆ ಹೇಳಬೇಕು. ನಮ್ಮ ಗ್ಯಾರಂಟಿ ಯೋಜನೆಗಳ ಕುರಿತು ಅವರಲ್ಲಿ ಅರಿವು ಮೂಡಿಸಬೇಕು’ ಎಂದು ಹೇಳಿದರು.</p>.<p>ಗ್ಯಾರಂಟಿ ಯೋಜನಾ ಸಮಿತಿ ರಾಜ್ಯ ಉಪಾಧ್ಯಕ್ಷ ಮಹರೂಸ್ ಖಾನ್ ಮಾತನಾಡಿ, ‘ಶಕ್ತಿ ಯೋಜನೆಯಿಂದ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಈ ಕುರಿತು ಜನರಿಗೆ ಹೇಳಬೇಕು. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಮನೆಮನೆಗೆ ಹೋಗಿ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.</p>.<p>ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಮಾತನಾಡಿ, ‘ಇನ್ನು ಮುಂದೆ ಚುನಾವಣೆಗಳು ಬರುತ್ತವೆ. ಹಾಗಾಗಿ, ಎಲ್ಲರೂ ಅದಕ್ಕಾಗಿ ಸಿದ್ಧತೆ ನಡೆಸಬೇಕು’ ಎಂದರು.</p>.<p>ಶಾಸಕ ಡಾ.ಮಂತರ್ಗೌಡ, ಪಕ್ಷದ ಕೊಡಗು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಶೆಟ್ಟ, ಮುಖಂಡರಾದ ಮುನೀರ್ ಅಹಮ್ಮದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>