<p><strong>ಗೋಣಿಕೊಪ್ಪಲು</strong>: ಅರಣ್ಯ ಇಲಾಖೆಯ ‘ಆರ್ಎಫ್ಓ’ ಹಾಗೂ ‘ಡಿಆರ್ಎಫ್ಓ’ ಹುದ್ದೆಗಳಿಗೆ ಅರಣ್ಯಶಾಸ್ತ್ರವೇ ಕನಿಷ್ಠ ವಿದ್ಯಾರ್ಹತೆ ಆಗಬೇಕು ಎಂದು ಒತ್ತಾಯಿಸಿ ನಡೆಸುತ್ತಿರುವ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳ ಮುಷ್ಕರ 5ನೇ ದಿನವಾದ ಮಂಗಳವಾರವೂ ಮುಂದುವರಿಯಿತು.</p>.<p>ತರಗತಿ ಬಹಿಷ್ಕರಿಸಿ ಕಾಲೇಜಿನ ಮೈದಾನದಲ್ಲಿ ‘ವಿ ವಾಂಟ್ ಜಸ್ಟೀಸ್’ ಎಂದು ಘೋಷಣೆ ಕೂಗುವುದರ ಜತೆಗೆ ಮೈದಾನದಲ್ಲಿ ಬಿಸಿಲಿನಲ್ಲಿಯೇ ಮಲಗಿ ಅಕ್ಷರಗಳನ್ನು ಮೂಡಿಸಿ ಹೋರಾಟ ತೀವ್ರಗೊಳಿಸಿದರು.</p>.<p>ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಹುದ್ದೆಗಳಿಗೆ ಕನಿಷ್ಠ ವಿದ್ಯಾರ್ಹತೆ ಕೃಷಿವಿಜ್ಞಾನ ಮತ್ತು ತೋಟಗಾರಿಕೆ ವಿಜ್ಞಾನ ಪದವಿಯಾಗಿದೆ. ಇದೇ ಮಾದರಿಯಲ್ಲಿ ಅರಣ್ಯ ಇಲಾಖೆಗೂ ಕೂಡ ಅರಣ್ಯಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಪೊನ್ನಂಪೇಟೆ, ಇರುವಕ್ಕಿ, ಶಿರಸಿ ಕಾಲೇಜುಗಳ ವಿದ್ಯಾರ್ಥಿ ಮುಖಂಡರು ಮಂಗಳವಾರ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ ವಿಧಾನಸಭೆ ಅಧಿವೇಶನ ಮುಗಿದ ಕೂಡಲೆ ಇದರ ಬಗ್ಗೆ ಗಮನಹರಿಸಲಾಗುವುದು ಎಂದು ಭರವಸೆ ನೀಡಿದರು ಎಂದು ವಿದ್ಯಾರ್ಥಿ ಮುಖಂಡ ಕಿಶಾನ್ ಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಣಿಕೊಪ್ಪಲು</strong>: ಅರಣ್ಯ ಇಲಾಖೆಯ ‘ಆರ್ಎಫ್ಓ’ ಹಾಗೂ ‘ಡಿಆರ್ಎಫ್ಓ’ ಹುದ್ದೆಗಳಿಗೆ ಅರಣ್ಯಶಾಸ್ತ್ರವೇ ಕನಿಷ್ಠ ವಿದ್ಯಾರ್ಹತೆ ಆಗಬೇಕು ಎಂದು ಒತ್ತಾಯಿಸಿ ನಡೆಸುತ್ತಿರುವ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳ ಮುಷ್ಕರ 5ನೇ ದಿನವಾದ ಮಂಗಳವಾರವೂ ಮುಂದುವರಿಯಿತು.</p>.<p>ತರಗತಿ ಬಹಿಷ್ಕರಿಸಿ ಕಾಲೇಜಿನ ಮೈದಾನದಲ್ಲಿ ‘ವಿ ವಾಂಟ್ ಜಸ್ಟೀಸ್’ ಎಂದು ಘೋಷಣೆ ಕೂಗುವುದರ ಜತೆಗೆ ಮೈದಾನದಲ್ಲಿ ಬಿಸಿಲಿನಲ್ಲಿಯೇ ಮಲಗಿ ಅಕ್ಷರಗಳನ್ನು ಮೂಡಿಸಿ ಹೋರಾಟ ತೀವ್ರಗೊಳಿಸಿದರು.</p>.<p>ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಹುದ್ದೆಗಳಿಗೆ ಕನಿಷ್ಠ ವಿದ್ಯಾರ್ಹತೆ ಕೃಷಿವಿಜ್ಞಾನ ಮತ್ತು ತೋಟಗಾರಿಕೆ ವಿಜ್ಞಾನ ಪದವಿಯಾಗಿದೆ. ಇದೇ ಮಾದರಿಯಲ್ಲಿ ಅರಣ್ಯ ಇಲಾಖೆಗೂ ಕೂಡ ಅರಣ್ಯಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಪೊನ್ನಂಪೇಟೆ, ಇರುವಕ್ಕಿ, ಶಿರಸಿ ಕಾಲೇಜುಗಳ ವಿದ್ಯಾರ್ಥಿ ಮುಖಂಡರು ಮಂಗಳವಾರ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ ವಿಧಾನಸಭೆ ಅಧಿವೇಶನ ಮುಗಿದ ಕೂಡಲೆ ಇದರ ಬಗ್ಗೆ ಗಮನಹರಿಸಲಾಗುವುದು ಎಂದು ಭರವಸೆ ನೀಡಿದರು ಎಂದು ವಿದ್ಯಾರ್ಥಿ ಮುಖಂಡ ಕಿಶಾನ್ ಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>